Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ಹಿರಿಯ ಜಾನಪದ ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ
    Book Release

    ಪುತ್ತೂರಿನಲ್ಲಿ ಹಿರಿಯ ಜಾನಪದ ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ

    May 22, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಿವೃತ್ತ ಉಪನ್ಯಾಸಕ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರ ವೈಕುಂಠ ಸಮಾರಾಧನೆ ಮತ್ತು ಶ್ರದ್ಧಾಂಜಲಿ ಸಭೆಯು ಪುತ್ತೂರು ಸುಕೃತೀಂದ್ರ ಕಲಾ ಮಂಟಪದಲ್ಲಿ ದಿನಾಂಕ 19-05-2024ರಂದು ನಡೆಯಿತು.


    ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿದ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಿರಿಯ ಸಾಹಿತಿ ಡಾ. ವಿವೇಕ ರೈ ಮಾತನಾಡಿ “ಡಾ. ರಾಮಕೃಷ್ಣ ಆಚಾರ್ ಅವರು ಎಲ್ಲೆಲ್ಲ ಇದ್ದರೋ ಅಲ್ಲೆಲ್ಲ ಸಂಘಟನೆ ಇದೆ. ಹಾಗಾಗಿ ಅವರಿಗೆ ಶಿಕ್ಷಣ, ಸಾಹಿತ್ಯ, ಸಂಸ್ಕೃತಿ, ಸಮುದಾಯವೆಂಬುದು ನಾಲ್ಕು ಚಕ್ರವಿದ್ದಂತಿತ್ತು. ಇದರೊಳಗೆ ತುಳು ಭಾಷೆಯ ಅಧ್ಯಯನ ವಿಶೇಷವಾಗಿತ್ತು. ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ, ಉಪನ್ಯಾಸಕರಾಗಿ, ತನ್ನ ನಿವೃತ್ತಿಯ ತನಕ ಅಭ್ಯಾಸ ಮಾಡುತ್ತಾ ಬಂದಿರುವ ಅವರು ಬದುಕಿನಲ್ಲಿ ವಿಶ್ರಾಂತಿಯನ್ನು ಪಡೆದಿಲ್ಲ. 2010ರಲ್ಲಿ ಅನಾರೋಗ್ಯದ ಕಾರಣದಿಂದ ಕಾಲನ್ನು ಕಳೆದುಕೊಂಡರೂ 14 ವರ್ಷಗಳ ಕಾಲ ಒಂದೇ ಕಾಲಿನಲ್ಲಿ ನಿರಂತರ ಕೆಲಸ ಮಾಡುತ್ತಾ ಬಂದರು. ಅವರ ಮಹತ್ವದ ಕೃತಿಗಳು ಬಂದದ್ದೇ 2010ರ ಬಳಿಕ. 1975 – 76ನೇ ಕಾಲಕ್ಕೆ ಬಂದ ತುಳು ಜನಪದ ಕಥೆಗಳ ಕನ್ನಡ ಅನುವಾದಕ್ಕೆ ನಾನೇ ಮುನ್ನುಡಿ ಬರೆದಿದ್ದೆ. ಅವರ ‘1837ರ ತುಳುವರ ರೈತ ಹೋರಾಟ’ ಕನ್ನಡದಲ್ಲಿ ಮೊದಲು ಬಂತು. ಬಳಿಕ ಅದು ಬೇರೆ ಬೇರೆ ಭಾಷೆಗಳಿಗೆ ತರ್ಜುಮೆಯಾಯಿತು.” ಎಂದರು. ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ನಿವೃತ್ತ ಉಪಕುಲಪತಿ ಡಾ. ಚಿನ್ನಪ್ಪ ಗೌಡ ಮಾತನಾಡಿದರು.

    ಶ್ರೀ ನರೇಂದ್ರ ರೈ ದೇರ್ಲ ಇವರು, ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ಒಡನಾಡಿಗಳು, ಕುಟುಂಬಸ್ತರು, ಹಿತೈಷಿಗಳು, ಬರೆದ ಲೇಖನಗಳನ್ನು ಸಂಗ್ರಹಿಸಿ ಪುಸ್ತಕರೂಪಕ್ಕೆ ತಂದ ‘ಪಾಲ್ತಾಡಿ ನೆನಪು’ ಕಿರು ಹೊತ್ತಿಗೆಯನ್ನು ಇದೇ ಸಂದರ್ಭದಲ್ಲಿ ಪರಿಚಯಿಸಿ, ಭಾಗವಹಿಸಿದವರೆಲ್ಲರಿಗೂ ಉಚಿತವಾಗಿ ನೀಡಲಾಯಿತು. ಜಾನಪದ ವಿದ್ವಾಂಸ ಡಾ ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ರಚಿಸಿದ ತುಳು ಗೀತೆಗಳ ಸಂಗೀತ ಕಾರ್ಯಕ್ರಮವು ಕೆ. ಆರ್. ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ನಡೆದು, ರತ್ನಾವತಿ ಜೆ. ಬೈಕಾಡಿ ಹಾಗೂ ಅಕ್ಷತಾ ಬೈಕಾಡಿ ಹಾಡುಗಳಿಗೆ ಧ್ವನಿಯಾದರು. ಇವರಿಗೆ ಹಾರ್ಮೋನಿಯಂನಲ್ಲಿ ಸುಧನ್ವಕೃಷ್ಣ ಹಾಗೂ ತಬಲಾದಲ್ಲಿ ಶರತ್ ಪೆರ್ಲ ಸಹಕರಿಸಿದರು. ಪಾಲ್ತಾಡಿ ಅವರ ಸಹೋದರರಾದ ಭಾಸ್ಕರ ಆಚಾರ್, ರಘುನಾಥ ಆಚಾರ್ ಕಲಾವಿದರನ್ನು ಗೌರವಿಸಿದರು.

    ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ಪತ್ನಿ ಸುಮಾ ಆರ್. ಆಚಾರ್, ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ. ಆರ್., ಸುಪ್ರಿಯಾ ಪಿ. ಆರ್., ಸೊಸೆ ಸುಧಾ ಹರ್ಷವರ್ಧನ, ಅಳಿಯಂದಿರಾದ ಕೃಷ್ಣ ಎಂ. ವಿ., ಜಯಪಾಲ ಎಚ್. ಆರ್. ಉಪಸ್ಥಿತರಿದ್ದರು. ಸಭೆಯಲ್ಲಿ ಸಾಹಿತಿಗಳು, ಹಿತೈಷಿಗಳು ಬಂಧುಗಳು ಪಾಲ್ತಾಡಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಪ್ರಖ್ಯಾತ್ ಕಾರ್ಯಕ್ರಮ ನಿರ್ವಹಿಸಿದರು.

     

    Share. Facebook Twitter Pinterest LinkedIn Tumblr WhatsApp Email
    Previous Articleಸಮಾರೋಪಗೊಂಡ ‘ಜ್ಞಾನ ವಿಕಾಸ ಶಿಬಿರ’
    Next Article ಪುಸ್ತಕ ವಿಮರ್ಶೆ | ಗಿರಿಮನೆ ಶ್ಯಾಮರಾವ್ ಇವರ ‘ಸಂಪ್ರಾಪ್ತಿ’
    roovari

    Add Comment Cancel Reply


    Related Posts

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಕ.ಸಾ.ಪ.ದಿಂದ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ‘ಎದೆಯ ಹಣತೆ’ ಕೃತಿ ಕುರಿತು ಚರ್ಚೆ

    June 2, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.