Subscribe to Updates

    Get the latest creative news from FooBar about art, design and business.

    What's Hot

    ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮದ ಸರ್ವಾಧ್ಯಕ್ಷರಾಗಿ ಡಾ. ಸುಷ್ಮಾ ಶಂಕರ್ ಬೆಂಗಳೂರು ಆಯ್ಕೆ

    July 3, 2025

    ಗಡಿ ನಾಡು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಾಹಿತಿಗಳು ಹಾಗೂ ರಂಗ ನಿರ್ದೇಶಕರಾದ ಡಾ.ಇಂಚರ ನಾರಾಯಣ ಸ್ವಾಮಿಯವರು ಆಯ್ಕೆ

    July 3, 2025

    ಕವನ | ‘ಮುಟ್ಟು ನಿಂತಿತೇ ?’

    July 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತಿನ ‘ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಮಿತ್ರಾ ವೆಂಕಟ್ರಾಜು ಆಯ್ಕೆ
    Awards

    ಕನ್ನಡ ಸಾಹಿತ್ಯ ಪರಿಷತ್ತಿನ ‘ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಮಿತ್ರಾ ವೆಂಕಟ್ರಾಜು ಆಯ್ಕೆ

    June 11, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ‘ಪಂಕಜಶ್ರೀ ಪ್ರಶಸ್ತಿ’ಗೆ ಮುಂಬೈನ ಕಥೆಗಾರ್ತಿ ಮಿತ್ರಾ ವೆಂಕಟ್ರಾಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.

    ಕನ್ನಡದ ಪ್ರಮುಖ ಲೇಖಕಿಯಾಗಿದ್ದ ಎ.ಪಂಕಜ ‘ಅನುರಾಗ ಬಂಧನ’, ‘ನಾದಭಂಗ’’, ಸುಖಸ್ವಪ್ನ’ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದವರು. ‘ಊರ್ಮಿಳಾ’ ಇವರ ಪ್ರಸಿದ್ಧ ನಾಟಕ. ಇವರ ‘ಕಾಗದದ ದೋಣಿ’ ಕಾದಂಬರಿ ಕೇಂದ್ರ ಸಾಹಿತ್ಯ ಅಕಾಡಮಿ ಅನುವಾದ ಪುರಸ್ಕಾರವನ್ನು ಪಡೆದಿತ್ತು. ಇವರು ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಗೌರವದಿಂದ ದತ್ತಿ ನಿಧಿಯನ್ನು ಸ್ಥಾಪಿಸಿದ್ದು ಲೇಖಕಿಯರಿಗೆ ಪ್ರತಿ ವರ್ಷ ಪುರಸ್ಕಾರ ನೀಡುವಂತೆ ನಿಯಮವನ್ನು ರೂಪಿಸಿದ್ದಾರೆ.

    2025ನೆಯ ಸಾಲಿನ ಈ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಮಿತ್ರಾ ವೆಂಕಟ್ರಾಜ್ ಕುಂದಾಪುರ ಮೂಲದವರು. ವಿವಾಹವಾಗಿ ಮುಂಬೈನಲ್ಲಿ ನೆಲೆಸಿದ ನಂತರವೇ ಅವರ ಸಾಹಿತ್ಯ ಸೇವೆ ತೀವ್ರತೆಯನ್ನು ಪಡೆದು ಕೊಂಡಿತು. ಕನ್ನಡದ ಮಹತ್ವದ ಕಥೆಗಾರ್ತಿಯರಲ್ಲಿ ಒಬ್ಬರು ಎನ್ನಿಸಿ ಕೊಂಡಿರುವ ಇವರು ‘ರುಕುಮಾಯಿ’, ‘ಹಕ್ಕಿ ಮತ್ತು ಅವಳು’, ‘ಮಾಯಕದ ಸತ್ಯ’ ಮತ್ತು ‘ನನ್ನಕ್ಕ ನಿಲೂಫರ್’ ನಾಲ್ಕು ಕಥಾ ಸಂಕಲನಗಳನ್ನು ಪ್ರಕಟಿಸಿದ್ದಾರೆ. ‘ಪಾಚಿ ಕಟ್ಟಿದ ಪಗಾರ’ ಇವರ ಕಾದಂಬರಿ, ಅನುವಾದ ಕ್ಷೇತ್ರದಲ್ಲಿಯೂ ಕೆಲಸ ಮಾಡಿರುವ ಇವರಿಗೆ ಹಲವಾರು ಪುರಸ್ಕಾರಗಳು ಲಭಿಸಿದ್ದು, ಇವರ ಕೃತಿಗಳು ಪಠ್ಯಗಳೂ ಕೂಡ ಆಗಿವೆ.

    ನಾಡೋಜ ಡಾ. ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ಸೇರಿದ್ದ ಆಯ್ಕೆ ಸಮಿತಿಯು ಪಾರದರ್ಶಕವಾಗಿ ಮತ್ತು ಕೂಲಂಕಶವಾಗಿ ಪರಿಶೀಲಿಸಿ ಮಿತ್ರಾ ವೆಂಕಟ್ರಾಜು ಅವರನ್ನು ಆಯ್ಕೆ ಮಾಡಿದೆ. ಈ ಆಯ್ಕೆ ಸಮಿತಿಯಲ್ಲಿ ಗೌರವ ಕಾರ್ಯದರ್ಶಿಗಳಾದ ನೇ. ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು , ಗೌರವ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಹಾಜರಿದ್ದರು.

    award baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮುಂಬೈಯಲ್ಲಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಛೇರಿ | ಜೂನ್ 14
    Next Article ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ | ಸೆಪ್ಟೆಂಬರ್ 15 ಕೊನೆಯ ದಿನಾಂಕ
    roovari

    Add Comment Cancel Reply


    Related Posts

    ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮದ ಸರ್ವಾಧ್ಯಕ್ಷರಾಗಿ ಡಾ. ಸುಷ್ಮಾ ಶಂಕರ್ ಬೆಂಗಳೂರು ಆಯ್ಕೆ

    July 3, 2025

    ಗಡಿ ನಾಡು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಾಹಿತಿಗಳು ಹಾಗೂ ರಂಗ ನಿರ್ದೇಶಕರಾದ ಡಾ.ಇಂಚರ ನಾರಾಯಣ ಸ್ವಾಮಿಯವರು ಆಯ್ಕೆ

    July 3, 2025

    ಕವನ | ‘ಮುಟ್ಟು ನಿಂತಿತೇ ?’

    July 3, 2025

    ವಿಶೇಷ ಲೇಖನ – ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ

    July 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.