ದೇಲಂಪಾಡಿ : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ನಾಗರಾಜ ಪಂಜತ್ತಡ್ಕ ಕಾವು ಹಾಗೂ ಮನೆಯವರ ವತಿಯಿಂದ ವಿಶೇಷ ಯಕ್ಷಗಾನ ತಾಳ ಮದ್ದಳೆ ದಿನಾಂಕ 26 ಏಪ್ರಿಲ್ 2025ರ ಶನಿವಾರದಂದು ನಡೆಯಿತು.
ಕಾರ್ಯಕ್ರಮದ ಮೊದಲಿಗೆ ಸ್ಥಳ ಸಾನ್ನಿಧ್ಯ ಶ್ರೀ ಗೋಪಾಲಕೃಷ್ಣದೇವರಿಗೆ ಪೂಜಾರ್ಚನೆ ಸಲ್ಲಿಸಲಾಯಿತು. ಕಲಾಸಂಘದ ಅಧ್ಯಕ್ಷರಾದ ಹಿರಿಯ ಸಾಹಿತಿ ಅರ್ಥಧಾರಿ ಡಾ. ರಮಾನಂದ ಬನಾರಿ ಅವರ ಮಾರ್ಗದರ್ಶನದಲ್ಲಿ ಭಾಗವತ ಗುರುಗಳಾದ ವಿಶ್ವವಿನೋದ ಬನಾರಿ ಅವರ ಸಂಯೋಜನೆಯೊಂದಿಗೆ ಮುನ್ನಡೆದ ಯಕ್ಷಗಾನ ತಾಳಮದ್ದಳೆ ʼಪಾರ್ಥ ಸಾರಥ್ಯʼ ಅತ್ಯಂತ ಮನೋಹರವಾಗಿ ಮೂಡಿಬಂತು.
ಭಾಗವತಿಕೆಯಲ್ಲಿ ಮೋಹನ ಮೆಣಸಿನಕಾನ, ವಿದ್ಯಾಶ್ರೀ ಆಚಾರ್ಯ ಈಶ್ವರ ಮಂಗಲ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದಕರಾಗಿ ಶ್ರೀಧರ ಆಚಾರ್ಯ ಈಶ್ವರ ಮಂಗಲ , ಮಂಡೆಕೂಲು ಅಪ್ಪಯ್ಯ ಮಣಿಯಾಣಿ, ವಿಷ್ಣು ಶರಣ ಬನಾರಿ, ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ, ಸದಾನಂದ ಮಯ್ಯಾಳ ಸಹಕರಿಸಿದರು. ಅರ್ಥಗಾರಿಕೆಯಲ್ಲಿ ರಾಮಣ್ಣ ಮಾಸ್ತರ್ ದೇಲಂಪಾಡಿ, ಐತಪ್ಪ ಗೌಡ ಮುದಿಯಾರು , ವೀರಪ್ಪ ಸುವರ್ಣ ಬೆಳ್ಳಿಪ್ಪಾಡಿ, ಶಾಂತಕುಮಾರಿ ದೇಲಂಪಾಡಿ, ಶ್ರೀನಿಧಿ ಮಯ್ಯಾಳ, ಮಾಷ್ಟರ್ ಶ್ರೀದೇವ್ ಈಶ್ವರ ಮಂಗಲ ಅವರು ತಮ್ಮ ಕಲಾ ಪ್ರೌಢಿಮೆಯನ್ನು ತೋರಿಸಿಕೊಟ್ಟರು.ಕಾರ್ಯಕ್ರಮದಲ್ಲಿ ಪೂಜಾ ಸಿ. ಎಚ್. ಸ್ವಾಗತಿಸಿ ಪಾತ್ರ ಪರಿಚಯ ಮಾಡಿಕೊಟ್ಟರು. ನಂದ ಕಿಶೋರ ಬನಾರಿ ವಂದಿಸಿದರು.