Subscribe to Updates

    Get the latest creative news from FooBar about art, design and business.

    What's Hot

    ತಿಂಗಳ ನಾಟಕ ಸಂಭ್ರಮದಲ್ಲಿ ‘ನೆಲ ಮುಗಿಲು’ ನಾಟಕ ಪ್ರದರ್ಶನ | ಜೂನ್ 21

    June 18, 2025

    ಬಲಮುರಿ ಶ್ರೀ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಳೆ

    June 18, 2025

    ಬೆಂಗಳೂರಿನಲ್ಲಿ ‘ನಿಮ್ಮೊಳಗಿನ ಜಗತ್ತು’ ನಟನಾ ಕಾರ್ಯಾಗಾರ | ಜೂನ್ 29ರಿಂದ ಜುಲೈ 05

    June 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೀರಿಕ್ಕಾಡು ಸಭಾಭವನದಲ್ಲಿ ʼಪಾರ್ಥ ಸಾರಥ್ಯʼ ಯಕ್ಷಗಾನ ತಾಳಮದ್ದಳೆ
    Yakshagana

    ಕೀರಿಕ್ಕಾಡು ಸಭಾಭವನದಲ್ಲಿ ʼಪಾರ್ಥ ಸಾರಥ್ಯʼ ಯಕ್ಷಗಾನ ತಾಳಮದ್ದಳೆ

    April 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ದೇಲಂಪಾಡಿ : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ನಾಗರಾಜ ಪಂಜತ್ತಡ್ಕ ಕಾವು ಹಾಗೂ ಮನೆಯವರ ವತಿಯಿಂದ ವಿಶೇಷ ಯಕ್ಷಗಾನ ತಾಳ ಮದ್ದಳೆ ದಿನಾಂಕ 26 ಏಪ್ರಿಲ್ 2025ರ ಶನಿವಾರದಂದು ನಡೆಯಿತು.
    ಕಾರ್ಯಕ್ರಮದ ಮೊದಲಿಗೆ ಸ್ಥಳ ಸಾನ್ನಿಧ್ಯ ಶ್ರೀ ಗೋಪಾಲಕೃಷ್ಣದೇವರಿಗೆ ಪೂಜಾರ್ಚನೆ ಸಲ್ಲಿಸಲಾಯಿತು. ಕಲಾಸಂಘದ ಅಧ್ಯಕ್ಷರಾದ ಹಿರಿಯ ಸಾಹಿತಿ ಅರ್ಥಧಾರಿ ಡಾ. ರಮಾನಂದ ಬನಾರಿ ಅವರ ಮಾರ್ಗದರ್ಶನದಲ್ಲಿ ಭಾಗವತ ಗುರುಗಳಾದ ವಿಶ್ವವಿನೋದ ಬನಾರಿ ಅವರ ಸಂಯೋಜನೆಯೊಂದಿಗೆ ಮುನ್ನಡೆದ ಯಕ್ಷಗಾನ ತಾಳಮದ್ದಳೆ ʼಪಾರ್ಥ ಸಾರಥ್ಯʼ ಅತ್ಯಂತ ಮನೋಹರವಾಗಿ ಮೂಡಿಬಂತು.

    ಭಾಗವತಿಕೆಯಲ್ಲಿ ಮೋಹನ ಮೆಣಸಿನಕಾನ, ವಿದ್ಯಾಶ್ರೀ ಆಚಾರ್ಯ ಈಶ್ವರ ಮಂಗಲ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದಕರಾಗಿ ಶ್ರೀಧರ ಆಚಾರ್ಯ ಈಶ್ವರ ಮಂಗಲ , ಮಂಡೆಕೂಲು ಅಪ್ಪಯ್ಯ ಮಣಿಯಾಣಿ, ವಿಷ್ಣು ಶರಣ ಬನಾರಿ, ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ, ಸದಾನಂದ ಮಯ್ಯಾಳ ಸಹಕರಿಸಿದರು. ಅರ್ಥಗಾರಿಕೆಯಲ್ಲಿ ರಾಮಣ್ಣ ಮಾಸ್ತರ್‌ ದೇಲಂಪಾಡಿ, ಐತಪ್ಪ ಗೌಡ ಮುದಿಯಾರು , ವೀರಪ್ಪ ಸುವರ್ಣ ಬೆಳ್ಳಿಪ್ಪಾಡಿ, ಶಾಂತಕುಮಾರಿ ದೇಲಂಪಾಡಿ, ಶ್ರೀನಿಧಿ ಮಯ್ಯಾಳ, ಮಾಷ್ಟರ್‌ ಶ್ರೀದೇವ್‌ ಈಶ್ವರ ಮಂಗಲ ಅವರು ತಮ್ಮ ಕಲಾ ಪ್ರೌಢಿಮೆಯನ್ನು ತೋರಿಸಿಕೊಟ್ಟರು.ಕಾರ್ಯಕ್ರಮದಲ್ಲಿ ಪೂಜಾ ಸಿ. ಎಚ್‌. ಸ್ವಾಗತಿಸಿ ಪಾತ್ರ ಪರಿಚಯ ಮಾಡಿಕೊಟ್ಟರು. ನಂದ ಕಿಶೋರ ಬನಾರಿ ವಂದಿಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಮೇ 05
    Next Article ಕನ್ನಡ ಪುಸ್ತಕ ಪ್ರಾಧಿಕಾರದ ವಾರ್ಷಿಕ ಪ್ರಶಸ್ತಿ ಪ್ರಕಟ
    roovari

    Add Comment Cancel Reply


    Related Posts

    ತಿಂಗಳ ನಾಟಕ ಸಂಭ್ರಮದಲ್ಲಿ ‘ನೆಲ ಮುಗಿಲು’ ನಾಟಕ ಪ್ರದರ್ಶನ | ಜೂನ್ 21

    June 18, 2025

    ಬಲಮುರಿ ಶ್ರೀ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಳೆ

    June 18, 2025

    ಬೆಂಗಳೂರಿನಲ್ಲಿ ‘ನಿಮ್ಮೊಳಗಿನ ಜಗತ್ತು’ ನಟನಾ ಕಾರ್ಯಾಗಾರ | ಜೂನ್ 29ರಿಂದ ಜುಲೈ 05

    June 18, 2025

     ಡಾ. ಆರ್. ಗಣೇಶರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’

    June 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.