Subscribe to Updates

    Get the latest creative news from FooBar about art, design and business.

    What's Hot

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಿ.ಸಿ.ರೋಡಿನಲ್ಲಿ ‘ಪತ್ತನಾಜೆ’ ಜಾನಪದ ಹಬ್ಬ | ಮೇ 19
    Cultural

    ಬಿ.ಸಿ.ರೋಡಿನಲ್ಲಿ ‘ಪತ್ತನಾಜೆ’ ಜಾನಪದ ಹಬ್ಬ | ಮೇ 19

    May 18, 2024Updated:May 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಬೆಂಗಳೂರಿನ ಕರ್ನಾಟಕ ಜಾನಪದ ಪರಿಷತ್ತು ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ದಿನಾಂಕ 19-05-2024ರಂದು ಬೆಳಗ್ಗೆ 8.30ರಿಂದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ‘ಪತ್ತನಾಜೆ’ ಜಾನಪದ ಹಬ್ಬ ನಡೆಯಲಿದ್ದು, ಪದ್ಮಶ್ರೀ ಪುರಸ್ಕೃತ ಡಾ. ಮಂಜಮ್ಮ ಜೋಗತಿ ಉದ್ಘಾಟಿಸಲಿದ್ದಾರೆ.

    ಪತ್ತನಾಜೆಯ ವಿಶೇಷತೆಯನ್ನು ಜನಮಾನಸಕ್ಕೆ ತಿಳಿಯಪಡಿಸುವ ಜತೆ ತುಳುನಾಡಿನ ಜನಪದ ಆಹಾರ ಪದ್ಧತಿಯನ್ನು ಪರಿಚಯಿಸುವ ದೃಷ್ಟಿಯಿಂದ ‘ಜಾನಪದ ಆಹಾರ ಮೇಳ’, ಜಾನಪದ ಕಲೆಗಳನ್ನು ಪ್ರತಿಬಿಂಬಿಸುವ ಉದ್ದೇಶದಿಂದ ‘ಸಾಂಸ್ಕೃತಿಕ ಮೇಳ’, ತುಳುನಾಡಿನ
    ಆಟಕೂಟಗಳ ‘ಜಾನಪದ ಕ್ರೀಡಾ ಕೂಟ’ ಹಾಗೂ ಜನಪದರು ಬಳಸುತ್ತಿದ್ದ ಭೌತಿಕ ಪರಿಕರಗಳ ಪ್ರದರ್ಶನ ‘ಜಾನಪದ ವಸ್ತು ಪ್ರದರ್ಶನ’ವನ್ನು ಹಮ್ಮಿಕೊಳ್ಳಲಾಗಿದೆ.

    ಬೆಳಗ್ಗೆ 10ಕ್ಕೆ ಉದ್ಘಾಟನಾ ಸಮಾರಂಭದಲ್ಲಿ ಉಜಿರೆ ಎಸ್‌.ಡಿ.ಎಂ.ನ ಕನ್ನಡ ಸಹಪ್ರಾಧ್ಯಾಪಕಿ ಡಾ. ದಿವಾ ಕೊಕ್ಕಡ ಪತ್ತನಾಜೆ ಬಗ್ಗೆ ವಿಶೇಷ ಉಪನ್ಯಾಸ ನೀಡುವರು. ಕರ್ನಾಟಕ ಜಾನಪದ ಪರಿಷತ್ತು ಬಂಟ್ವಾಳ ಘಟಕದ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಮಾಣೂರು ಅಧ್ಯಕ್ಷತೆ ವಹಿಸಲಿದ್ದು, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ರಾಮ ಭಟ್ ಶುಭಾಶಂಸನೆಗೈಯಲಿರುವರು. ವಿಧಾನ ಸಬೆ ಸ್ಪೀಕರ್ ಯು.ಟಿ. ಖಾದರ್, ಮೇಯರ್ ಸುಧೀರ್ ಶೆಟ್ಟಿ, ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ರಮಾನಾಥ ರೈ, ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ತುಕಾರಾಮ ಪೂಜಾರಿ, ಪ್ರಮುಖರಾದ ಎ.ಸಿ. ಭಂಡಾರಿ, ರಘುನಾಥ ಸೋಮಯಾಜಿ, ಅರ್ಜುನ್ ಭಂಡಾರ್‌ಕಾರ್, ಡಿ. ಚಂದ್ರಹಾಸ ಶೆಟ್ಟಿ ರಂಗೋಲಿ, ಜಗನ್ನಾಥ ಚೌಟ ಬದಿಗುಡ್ಡೆ, ಸುಧಾಕರ ಆಚಾರ್ಯ, ಪಮ್ಮಿ ಕೊಡಿಯಾಲ್‌ಬೈಲ್ ಭಾಗವಹಿಸಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿ ಜಿಲ್ಲೆಯ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ | ಕೊನೆಯ ದಿನ ಮೇ 25
    Next Article ರಾಯಚೂರಿನ ಸಿದ್ದರಾಮ ಜಂಬಲದನ್ನಿ ರಂಗಮಂದಿರದಲ್ಲಿ ‘ರಕ್ತ ವಿಲಾಪ’ | ಮೇ 19
    roovari

    Add Comment Cancel Reply


    Related Posts

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.