ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಶಾಖೆ ಮತ್ತು ಆರ್ಟ್ ಕೆನರಾ ಟ್ರಸ್ಟ್ ಇದರ ಸಹಯೋಗದೊಂದಿಗೆ ಛಾಯಾಚಿತ್ರ ಪ್ರದರ್ಶನವನ್ನು ದಿನಾಂಕ 19 ಜುಲೈ 2025ರಂದು ಸಂಜೆ 5-30 ಗಂಟೆಗೆ ಕೊಡಿಯಾಲ್ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ಟುಡೆ ಪತ್ರಿಕೆಯ ವಿ.ಯು. ಜಾರ್ಜ್ ಇವರ ಉಪಸ್ಥಿತಿಯಲ್ಲಿ ಈ ಪ್ರದರ್ಶನ ಉದ್ಘಾಟನೆಗೊಳ್ಳಲಿದ್ದು, ದಿನಾಂಕ 26 ಜುಲೈ 2025ರ ತನಕ ಬೆಳಗ್ಗೆ 11-00 ಗಂಟೆಯಿಂದ ಸಂಜೆ 7-00 ಗಂಟೆ ತನಕ ಪ್ರದರ್ಶನವು ತೆರೆದಿರುತ್ತದೆ.