Subscribe to Updates

    Get the latest creative news from FooBar about art, design and business.

    What's Hot

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಪಿಜಿನ್‌ದ ಬಾಸೆ ನಿಗಲೆಗ್ ತೆರಿಯುಂಡಾ’ ತುಳು ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಟಿ 
    Book Release

    ‘ಪಿಜಿನ್‌ದ ಬಾಸೆ ನಿಗಲೆಗ್ ತೆರಿಯುಂಡಾ’ ತುಳು ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಟಿ 

    June 7, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ತುಳು ಕೂಟ ಉಡುಪಿ ಮತ್ತು ಕ್ಷಿಪ್ರ ಪದ್ಮ ಪ್ರಕಾಶನ ದೊಡ್ಡಣಗುಡ್ಡೆ ಆಶ್ರಯದಲ್ಲಿ ದಿನಾಂಕ 03-06-2023ರಂದು ಅಂಬಲಪಾಡಿಯ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ‘ಕವಿಗೋಷ್ಟಿ ಮತ್ತು ಪುಸ್ತಕ ಬಿಡುಗಡೆ’ ಕಾರ್ಯಕ್ರಮ ನಡೆಯಿತು.

    ಈ ಸಂದರ್ಭದಲ್ಲಿ ಉಪ್ಪುಂದ ಸ.ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶ್ರೀ ಯಾದವ ಕರ್ಕೇರಾ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಡಾ. ಪಿ. ಕೃಷ್ಣ ಪ್ರಸಾದ್, ಯಶೋದಾ ಕೇಶವ್, ದಯಾನಂದ ಶೆಟ್ಟಿ ದೆಂದೂರ್ ಕಟ್ಟೆ, ಪ್ರಕಾಶ್ ಸುವರ್ಣ ಕಟಪಾಡಿ, ಅಮಿತಾಂಜಲಿ ಕಿರಣ್, ಉಮೇಶ್ ಆಚಾರ್ಯ, ಅಮೃತಾ ಸಂದೀಪ್, ಮಲ್ಲಿಕಾ ಎಚ್. ಶೆಟ್ಟಿ, ಜ್ಯೋತಿ ಎಸ್. ದೇವಾಡಿಗ, ಪೂರ್ಣಿಮಾ ಶೆಟ್ಟಿ ಮತ್ತು ಸುಷ್ಮಾ ಎ. ಎಸ್. ಕವಿಗೋಷ್ಠಿಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ವಿದ್ಯಾ ಸರಸ್ವತಿ ನಿರೂಪಿಸಿದರು.

    ವಾಸಂತಿ ಅಂಬಲಪಾಡಿ ಬರೆದ ‘ಪಿಜಿನ್‌ದ ಬಾಸೆ ನಿಗಲೆಗ್ ತೆರಿಯುಂಡಾ’ ತುಳು ಕವನ ಸಂಕಲನ ಬಿಡುಗಡೆಗೊಳಿಸಿದ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಕ್ಷೇತ್ರಾಧಿಕಾರಿ ಡಾ.ನಿ.ಬೀ.ವಿಜಯ ಬಲ್ಲಾಳ್ “ತುಳು ಭಾಷೆಗೆ ಮಹತ್ವರವಾದ ಸ್ಥಾನವಿದೆ. ಮುಂದಿನ ಪೀಳಿಗೆಗೆ ಅದನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಾಗಿದೆ. ತುಳುನಾಡಿನಲ್ಲಿ ಮಾತ್ರವಲ್ಲದೆ ಈ ಭಾಷೆ ದೇಶ ವಿದೇಶದಲ್ಲಿಯೂ ಬಹಳಷ್ಟು ಬೆಳೆದಿದೆ. ತುಳು ಭಾಷೆ ಮಾತನಾಡುವ ಜನರೊಂದಿಗೆ ಆತ್ಮೀಯ ಭಾವ ಮೂಡುತ್ತದೆ. ತುಳು ಕವಿಗೋಷ್ಟಿ, ತುಳು ಪುಸ್ತಕ ಬರೆಯುವ ಮೂಲಕ ಜನರಿಗೆ ತಲುಪುವ ಕೆಲಸ ಆಗಬೇಕು” ಎಂದು ಹೇಳಿದರು.

    ಉಡುಪಿಯ ತುಳು ಕೂಟದ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಅಧ್ಯಕ್ಷ ಸ್ಥಾನದಿಂದ ಮಾತನಾಡುತ್ತಾ “ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಳು ಕವಿಗೋಷ್ಠಿ, ತುಳು ಕಥಾ ಕಮ್ಮಟ ನಡೆಸಬೇಕು. ಅಂತಾರಾಷ್ಟ್ರೀಯ ತುಳು ಒಕ್ಕೂಟ ಅದಕ್ಕೆ ಸಹಕಾರ ನೀಡಲಿದೆ” ಎಂದರು. ಹಿರಿಯಡ್ಕದ ನಿವೃತ್ತ ಉಪನ್ಯಾಸಕ ಹಾಗೂ ಸಾಹಿತಿ ಪ್ರೊ. ಮುರಳೀಧರ ಉಪಾಧ್ಯರು ಪುಸ್ತಕವನ್ನು ಪರಿಚಯ ಮಾಡಿದರು.

    ಸಂತ ಸಿಸಿಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಭಗಿನಿ ರಚನಾ ಎ.ಸಿ., ಮುಂಬಯಿ ಉಪನ್ಯಾಸಕಿ ಶ್ರೀಮತಿ ಹರಿಣಾಕ್ಷಿ ಲಲಿತ್‌ ರಾಜ್ ಸುವರ್ಣ, ಕ್ಷಿಪ್ರ ಪ್ರಸಾದ ಹಾಗೂ ಪದ್ಮ ಪ್ರಸಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಲೇಖಕಿ, ಸಾಹಿತಿ ವಾಸಂತಿ ಅಂಬಲಪಾಡಿ ಸ್ವಾಗತಿಸಿ, ಶಿಕ್ಷಕಿ, ಸಾಹಿತಿ ಅಮೃತಾ ಸಂದೀಪ್ ನಿರೂಪಿಸಿ, ಪೂರ್ಣಿಮ ಶೆಟ್ಟಿ ವಂದಿಸಿದರು.

     

    Share. Facebook Twitter Pinterest LinkedIn Tumblr WhatsApp Email
    Previous Articleರಾಗ ಧನ ಸಂಸ್ಥೆಯಿಂದ ‘ರಾಗರತ್ನಮಾಲಿಕೆ -12’
    Next Article ಸುರತ್ಕಲ್ ನಲ್ಲಿ ಮಣಿ ಕೃಷ್ಣಸ್ವಾಮಿ ಅಕಾಡಮಿಯ ‘ಉದಯರಾಗ-44’
    roovari

    Add Comment Cancel Reply


    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಳ್ಳದ ನೆಹರೂ ಸ್ಮಾರಕ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ವಿಚಾರಗೋಷ್ಠಿ

    February 26, 2026

    ಪುಸ್ತಕ ವಿಮರ್ಶೆ | ಪೌರಾಣಿಕ ಕಥೆಗಳಲ್ಲಿ ಆಸಕ್ತಿ ಮೂಡಿಸುವ ‘ಕಿರಿಯರ ಸಚಿತ್ರ ರಾಮಾಯಣ’

    February 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.