Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕವಯತ್ರಿ ಸಂಘಟಕಿ ರುಬೀನಾ ಎಂ.ಎ. ಇವರು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ
    Literature

    ಕವಯತ್ರಿ ಸಂಘಟಕಿ ರುಬೀನಾ ಎಂ.ಎ. ಇವರು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ

    March 1, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಶ್ರೀಮತ್ ಎಡನೀರು ಮಠಾದೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳಿಂದ ಲಾಂಚನ ಬಿಡುಗಡೆಗೊಳಿಸಿ, ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಇವರಿಂದ ವಿದ್ಯುಕ್ತವಾಗಿ ಕನ್ನಡ ಧ್ವಜ ನೀಡಿ ಉದ್ಘಾಟನೆಗೊಂಡ ಕಾಸರಗೋಡು ಕನ್ನಡ ಭವನ ರೂವಾರಿಯಾದ ಡಾ. ವಾಮನ್ ರಾವ್ ಬೇಕಲ್-ಸಂಧ್ಯಾರಾಣಿ ಟೀಚರ್ ಸ್ಥಾಪಿಸಿದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡಿನಲ್ಲಿ ಸಾಹಿತಿ, ಪತ್ರಕರ್ತ ಶ್ರೀ ವಿರಾಜ್ ಅಡೂರ್ ಅಧ್ಯಕ್ಷರಾಗಿ ಸಮಿತಿ ವಿಸ್ತರಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯ ಪ್ರವೃತ್ತವಾಗಿದೆ. ಕರ್ನಾಟಕ ರಾಜ್ಯದಲ್ಲಿ ಪರಿಷತ್ತಿನ ಘಟಕ ಸ್ಥಾಪಿಸಿ ಕನ್ನಡ ಪರ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶದಿಂದ ಇದೀಗ ಕೊಡಗು ಜಿಲ್ಲೆಯಲ್ಲಿ ಕನ್ನಡ ಚು. ಸಾ. ಪ. ಘಟಕವನ್ನು ಸ್ಥಾಪಿಸಿದೆ. ಕನ್ನಡ ಭವನದ ಕೊಡಗು ಜಿಲ್ಲಾ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಇವರು ಸೋಮವಾರಪೇಟೆಯ ರುಬೀನಾ ಎಂ.ಎ. ಇವರ ನಾಮನಿರ್ದೇಶನ ಮಾಡಿದರು. ಕೊಡಗು ಕನ್ನಡ ಭವನ ಪ್ರದಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಅನುಮೋದಿಸಿದರು. ಸರ್ವಾನುಮತಿಯೊಂದಿಗೆ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾದ ಕವಯತ್ರಿ ರುಬೀನಾ ಎಂ.ಎ. ಇವರು, ಉಪಾಧ್ಯಕ್ಷರಾಗಿ ಪೆರಿಯಂಡ ಯಶೋಧ, ಕಾರ್ಯದರ್ಶಿಯಾಗಿ ಬೊಟ್ಟೋಳಂಡ ನಿವ್ಯಾ ಕಾವೇರಮ್ಮ, ಕೋಶಾಧಿಕಾರಿಯಾಗಿ ಚಂದನ್ ನಂದರಬೆಟ್ಟು, ಕಾರ್ಯಕಾರೀ ಸಮಿತಿ ಸದಸ್ಯರಾಗಿ ಕರವಂಡ ಸೀಮಾ ಗಣಪತಿ, ಪಳಂಗೀಯಂಡ ಶರತ್ ಬೋಪಣ್ಣ, ಕಿಶೋರ್ ರೈ ಕತ್ತಲೆಕಾಡು, ಸಂಕೇತ್ ಕೆ.ಎ., ಹೇಮಂತ್ ಪರೇರಾ. ಪಂದ್ಯoಡ ರೇಣುಕಾ ಸೋಮಯ್ಯ, ಅಮ್ಮಾಟಂಡ ವಿಂದ್ಯಾ ದೇವಯ್ಯ, ಮೊಣ್ಣಂಡ ವಿನು ಕಾರ್ಯಪ್ಪ, ಕಾಣತಂಡ ಭವ್ಯ ದೇವಯ್ಯ, ಉಡುವೆರ ರೇಖಾ ರಘು ಇವರನ್ನು ಆಯ್ಕೆ ಮಾಡಿ ಸಮಿತಿಯನ್ನು ರಚಿಸಿದ್ದಾರೆ. ಮಾರ್ಚ್ ಕೊನೆಯ ವಾರದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಕೇಂದ್ರದಲ್ಲಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಗೌರವ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಸಂಯುಕ್ತವಾಗಿ ತಿಳಿಸಿದ್ದಾರೆ.

    Literature
    Share. Facebook Twitter Pinterest LinkedIn Tumblr WhatsApp Email
    Previous Articleಚೆರಿಯಮನೆ ದಿವಂಗತ ಕೃಷ್ಣಪ್ಪ ಮರಗೋಡು ದತ್ತಿ ಕಾರ್ಯಕ್ರಮದಲ್ಲಿ ‘ಜಾನಪದ’
    Next Article ಮಂಗಳೂರು ಪತ್ರಿಕಾ ಭವನದಲ್ಲಿ 42ನೆಯ ಸರಣಿ ಕೃತಿ ‘ಕಡಲಾಚೆಯ ರಮ್ಯ ನೋಟ ದುಬಾಯಿ’ | ಮಾರ್ಚ್ 04
    roovari

    Add Comment Cancel Reply


    Related Posts

    ಕಾಸರಗೋಡಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 2ನೇ ಕಾರ್ಯಕ್ರಮ

    June 30, 2025

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.