ಮುಲ್ಕಿ : ಕಿಲ್ಪಾಡಿಯ ಆದಿ ಕಿಲ್ಪಾಡಿ ಬಬ್ಬಸ್ವಾಮಿ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಮತ್ತು ದ.ಕ. ಕನ್ನಡ ಸಾಹಿತ್ಯ ಪರಿಷತ್ತು ಮುಲ್ಕಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಕವಿ ಹಾಗೂ ಲೇಖಕ ಶಂಕರ್ ಪಡಂಗ ಕಿಲ್ಪಾಡಿ ಇವರ ‘ಕಾಣೆಯಾದಳು ಹುಡುಗಿ ಹಗಲುಗನಸಿನಲ್ಲಿ’ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿಯು ದಿನಾಂಕ 08 ಫೆಬ್ರವರಿ 2026ರಂದು ಮಧ್ಯಾಹ್ನ 2-00 ಗಂಟೆಗೆ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಬಿಲ್ಲವ ಸಮಾಜ ಸಂಘದ ಅಧ್ಯಕ್ಷರಾದ ವಾಮನ ನಡಿಕುದ್ರು ವಹಿಸಲಿದ್ದು, ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಉದ್ಘಾಟಿಸಲಿದ್ದಾರೆ. ಕುಂಜಾರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಶ್ರೀಕಾಂತ ಭಟ್ ಪರೆಂಕಿಲ ಆಶೀರ್ವಚನ ನೀಡಲಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಆ ಸೊಸೈಟಿ ಅಧ್ಯಕ್ಷ ವಸಂತ ಬೆರ್ನಾಡ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಗಿರೀಶ್, ಉದ್ಯಮಿ ಧನಂಜಯ ಮಟ್ಟು, ಮುಲ್ಕಿ ನಗರ ಪಂಚಾಯತ್ ಮಾಜೀ ಅಧ್ಯಕ್ಷ ಸತೀಶ್ ಅಂಚನ್, ಮಾಜಿ ಸದಸ್ಯ ಪುತ್ತು ಬಾವ, ಮುಲ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಗೋಪಿನಾಥ ಪಡಂಗ, ಅತಿಕಾರಿಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಮನೋಹರ್ ಕೋಟ್ಯಾನ್, ಬಬ್ಬುಸ್ವಾಮಿ ಯುವಕ ಮಂಡಲದ ಅಧ್ಯಕ್ಷ ರಂಜನ್ ಬಿ. ಶೆಟ್ಟಿ, ಕಿಲ್ಪಾಡಿ ಕೋಡ್ದಬ್ಬು ದೈವಸ್ಥಾನದ ಗುರಿಕಾರ ವಸಂತ ವಿ.ಎಸ್., ಬಬ್ಬುಸ್ವಾಮಿ ಮಹಿಳಾ ಮಂಡಲದ ಅಧ್ಯಕ್ಷೆ ಭಾರತಿ ವಿ. ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

