Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಶ್ರಾವಣ ಸಂಭ್ರಮ’ದಲ್ಲಿ ಕವಿಗೋಷ್ಠಿ, ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು
    Cultural

    ‘ಶ್ರಾವಣ ಸಂಭ್ರಮ’ದಲ್ಲಿ ಕವಿಗೋಷ್ಠಿ, ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

    August 19, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಆಯೋಜಿಸಿದ್ದ ‘ಶ್ರಾವಣ ಸಂಭ್ರಮ’ದಲ್ಲಿ ಕವಿಗೋಷ್ಠಿ, ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಾಂಕ 16 ಆಗಸ್ಟ್ 2024ರಂದು ಮಂಗಳೂರು ಪುರಭವನದಲ್ಲಿ ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಸುಲೋಚನ ಪಚಿನಡ್ಕ “ಆಷಾಡದ ಬಿರುಸಿನ ಮಳೆಯ ಸಂಕಷ್ಟಗಳನ್ನು ಮನೆಯ ಒಳಗೆ ಅನುಭವಿಸಿ ಪರಿಸರದ ಬದುಕಿಗೆ ತೆರೆದುಕೊಳ್ಳುವ ಮೂಲಕ ಹಬ್ಬ ಹರಿದಿನಗಳಲ್ಲಿ ಸಂತೋಷ ಕಂಡುಕೊಳ್ಳುವುದಕ್ಕೇ ಶ್ರಾವಣ ಬಂದಿದೆ. ಹೆಂಗಸರೆಲ್ಲ ವರಮಹಾಲಕ್ಷ್ಮಿಯನ್ನು ಪೂಜಿಸಿ, ಮನೆ ಮತ್ತು ಮನಸಿನ ಸಂಕಟಗಳನ್ನು ಕಳೆಯಲು ಉಪವಾಸ ವೃತಗಳನ್ನು ಕೈಗೊಳ್ಳುವ ಈ ತಿಂಗಳ ದಿನಗಳು ಎಲ್ಲರ ಸಂಭ್ರಮದ ದಿನಗಳಾಗಿರುತ್ತವೆ. ಇಂತಹ ಕಾರ್ಯಕ್ರಮಗಳಿಗೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾದರೂ ಕಲೆ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಇರುವವರ ಸಂಖ್ಯೆ ಕಡಿಮೆಯಾಗದು. ಯಾವುದೇ ಕಾರ್ಯಕ್ರಮವಾದರೂ ಅದನ್ನು ವಿಶಿಷ್ಟ ರೀತಿಯಲ್ಲಿ ಆಯೋಜನೆ ಮಾಡುವ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನಗೆ ಸಂತಸ ತಂದಿದೆ” ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ವಿಶೇಷ ಸಾಧನೆಗೈದ ಹಿರಿಯ ಗೌರವ ಉಪನ್ಯಾಸಕ ವ. ಉಮೇಶ ಕಾರಂತ್‌ರವರಿಗೆ ಶಾಲು, ಹಾರ ಪೇಟ ತೊಡಿಸಿ ಫಲತಾಂಬೂಲ ಸನ್ಮಾನ ಫಲಕದೊಂದಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ವಹಿಸಿದ್ದರು. ಎನ್.ಎಸ್.ಸಿ.ಡಿ.ಎಫ್.ನ ಅಂತರರಾಷ್ಟ್ರೀಯ ವಕ್ತಾರೆ ಮಮ್ತಾ ಕೋಟ್ಯಾನ್ ಮುಂಬೈ ಉಪಸ್ಥಿತರಿದ್ದರು.

    ಡಾ. ಸುರೇಶ್ ನೆಗಳಗುಳಿಯವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಮಾತನಾಡುತ್ತಾ “ಪ್ರತಿಯೊಬ್ಬರೂ ಒಂದಿಲ್ಲೊಂದು ರೀತಿಯಲ್ಲಿ ಸಾಹಿತಿಗಳೇ ಆಗಿರತ್ತಾರೆ. ಆದರೆ ಅದಕ್ಕೊಂದು ಚೌಕಟ್ಟು ತರಲು ಆತ ಕವಿಯಾಗಬೇಕು. ಯೋಚನೆ ಭಾವನೆ ಸಕಲರಲ್ಲೂ ಇದೆ ಅದಕ್ಕೆ ಆಕಾರ ಕೊಡುವ ಶಿಲ್ಪಿಯೇ ಕವಿ. ಪಾಷಾಣಕ್ಕೆ ರೂಪ ಕೊಡುವ ಶಿಲೆಗೆ ಶಂಕರತ್ವ ನೀಡುವ ಕಲೆ ಕರಗತವಾಗಲು ಅಭ್ಯಾಸ ಹಾಗೂ ಮೆದುಳಿನ ಕಸರತ್ತು ಪ್ರಮುಖ ಪಾತ್ರ ವಹಿಸುತ್ತದೆ” ಎನ್ನುತ್ತಾ ಸ್ವರಚಿತ ಗಜಲ್ ವಾಚಿಸಿ ಸರ್ವ ಕವಿಗಳ ವಾಚನವನ್ನು ವಿಮರ್ಶೆ ಮಾಡಿದರು. ಇದಲ್ಲದೆ ಸಂಘಟಕರು ಉಲ್ಲೇಖಿಸಿದ ದ.ರಾ. ಬೇಂದ್ರೆಯವರ ‘ಉತ್ತರಧ್ರುವದಿಂ ದಕ್ಷಿಣ ಧ್ರುವಕೂ ..’ ಕವನದ ಆಂತರ್ಯದ ಭಾವವನ್ನು ವಿಶ್ಲೇಷಣೆ ಮಾಡಿದರು.

    ಕವಿಗೋಷ್ಠಿಯಲ್ಲಿ ವೆಂಕಟೇಶ್ ಗಟ್ಟಿ, ದೀಪಾ ಚಿಲಿಂಬಿ, ಅನಿತಾ ಶೆಣೈ, ನಿಶಾನ್ ಅಂಚನ್, ಕೊಳ್ಚಪ್ಪೆ ಗೋವಿಂದ ಭಟ್, ಶಿವಪ್ರಸಾದ್ ಕೊಕ್ಕಡ, ಗುರುರಾಜ್ ಎಂ.ಆರ್., ಡಾ. ವಾಣಿಶ್ರೀ ಕಾಸರಗೋಡು, ಉಮೇಶ್ ಕಾರಂತ್, ಸುಲೋಚನ ನವೀನ್ ಮುಂತಾದ ಕವಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಿದರು. ಗಂಗಾಧರ್ ಗಾಂಧಿ ಕಾರ್ಯಕ್ರಮ ನಿರೂಪಿಸಿದರು. ಗಡಿನಾಡ ಕನ್ನಡತಿ ಡಾ. ವಾಣಿಶ್ರೀ ಮತ್ತು ಗುರುರಾಜ್ ಕಾಸರಗೋಡು ತಂಡದಿಂದ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು, ಗೀತ ಗಾಯನ ಹಾಗೂ ಯಕ್ಷನೃತ್ಯ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಶಕ್ತಿನಗರದ ಕಲಾಂಗಣದಲ್ಲಿ ‘ಸುರ್‌ ಸೊಭಾಣ್‌’ ಗಾಯನ ತರಬೇತಿ ಉದ್ಘಾಟಣೆ 
    Next Article ‘ಗಾಂವ್ಕರ್ ಯಕ್ಷ ಶ್ರಾವಣ ಸಂಜೆ’ ಯಕ್ಷಗಾನ ಪ್ರದರ್ಶನ | ಆಗಸ್ಟ್ 20
    roovari

    Comments are closed.

    Related Posts

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.