Subscribe to Updates

    Get the latest creative news from FooBar about art, design and business.

    What's Hot

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಸಾಧಕರಿಗೆ ‘ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿ’
    Awards

    ಯಕ್ಷಸಾಧಕರಿಗೆ ‘ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿ’

    January 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪಡುಬಿದ್ರೆ : ಕಟೀಲು ಮೇಳದ ಭಾಗವತ ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಬಣ್ಣದ ವೇಷಧಾರಿ ಸುರೇಶ ಕುಪ್ಪೆಪದವು ಇವರಿಗೆ ಈ ವರ್ಷದ ‘ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿ’ ಯನ್ನು ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ದಿನಾಂಕ 14 ಜನವರಿ 2025ರಂದು ನಡೆದ ಪಡುಬಿದ್ರೆ ಕಲ್ಲಟೆಗುತ್ತು ಮೂಲ ಕುಟುಂಬಸ್ಥರಾದ ರಾಧಾ ವಿಠ್ಠಲ ಶೆಟ್ಟಿ ಮತ್ತು ಮಕ್ಕಳು ಆಯೋಜಿಸಿದ ಶ್ರೀ ಕಟೀಲು ಮೇಳದ 28ನೇ ವರ್ಷದ ಸೇವೆ ಬಯಲಾಟದ ವೇದಿಕೆಯಲ್ಲಿ ವಿತರಿಸಲಾಯಿತು.
    ಸಮಾರಂಭದಲ್ಲಿ ಪರಾಧೀನವಾಗಿದ್ದ ಕಟೀಲು ಮೂಲ ಕುದುರನ್ನು ಶ್ರೀ ಕ್ಷೇತ್ರಕ್ಕೆ ಮರಳಿಸಿದ ದಾನಿಗಳಾದ ಪೂಲ ವಿಠ್ಠಲ ಶೆಟ್ಟಿ ಪರಿವಾರದ ಸೇವೆಯನ್ನು ಕಟೀಲು ಲಕ್ಷ್ಮೀ ನಾರಾಯಣ ಅಸ್ರಣ್ಣ ಸ್ಮರಿಸಿದರು.
    ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ ಕದ್ರಿ ನವನೀತ ಶೆಟ್ಟಿ ಮಾತನಾಡಿ “ಅಂಡಾಲ ದೇವೀ ಪ್ರಸಾದರು ಕಳೆದು ಮೂರುವರೆ ದಶಕಗಳಿಂದ ಯಕ್ಷಗಾನ ರಂಗದಲ್ಲಿ ಪ್ರಸಂಗ ರಚನೆ ಹಾಗೂ ಭಾಗವತಿಕೆಯಲ್ಲಿ ಪ್ರಬುದ್ಧತೆ ಮೆರೆದವರು. ತೆಂಕು ಹಾಗೂ ಬಡಗು ತಿಟ್ಟಿನ ಟೆಂಟ್ ಮೇಳಗಳಲ್ಲೂ ಅವರ ಪ್ರಸಂಗಗಳು ಯಶಸ್ವಿ ಪ್ರದರ್ಶನ ಕಂಡಿವೆ. ಕಟೀಲು ಮೇಳದಲ್ಲೇ ಬಣ್ಣದ ವೇಷಧಾರಿಯಾಗಿ ರೂಪುಗೊಂಡು ಕಳೆದ 35ವರ್ಷಗಳಿಂದ ಕಲಾ ಸೇವೆಗೈಯ್ಯುತ್ತಿರುವ ಸುರೇಶ ಕುಪ್ಪೆಪದವು ಇವರು ಮಹಿಷಾಸುರ ಪಾತ್ರ ನಿರ್ವಹಣೆಯಲ್ಲಿ ಪ್ರಸಿದ್ದಿ ಪಡೆದಿದ್ದಾರೆ” ಎಂದು ಅಭಿನಂದಿಸಿದರು.

    ಕಂಬಳ ಕೋಣಗಳ ಮಾಲಕರಾಗಿ ಖ್ಯಾತಿ ಪಡೆದಿದ್ದ ಮುಂಬೈ ಘಾಟ್ ಕೋಪರ್ ಇಲ್ಲಿನ ‘ಭಾರತ್ ಕೆಫೆ’ ಸಂಸ್ಥಾಪಕ ಪೂಲ ವಿಠ್ಠಲ ಶೆಟ್ಟಿ ಅವರ ಸ್ಮರಣಾರ್ಥ ಪ್ರತೀ ವರ್ಷ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
    ಉದಯ ಶೆಟ್ಟಿ ಎರ್ಮಾಳ್, ಐಕಳ ವಿಶ್ವನಾಥ ಶೆಟ್ಟಿ ಮತ್ತು ವಿಶುಕುಮಾರ್ ಬ್ರಹ್ಮಾವರ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಸೇವಾಕರ್ತ ಸತೀಶ್ ವಿಠಲ ಶೆಟ್ಟಿ ಎಲ್ಲರನ್ನೂ ಸ್ವಾಗತಿಸಿದರು. ಸನ್ಮಾನ ಕಾರ್ಯಕ್ರಮದ ಬಳಿಕ ಶ್ರೀ ಕಟೀಲು ಮೇಳದವರಿಂದ ‘ರಾಮ – ಕೃಷ್ಣ – ಗೋವಿಂದ’ ಯಕ್ಷಗಾನ ಬಯಲಾಟ ಪ್ರದರ್ಶನ ಗೊಂಡಿತು.

     

    award Cultural kannada yakshagana
    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ‘ಹೆಸರಾಯಿತು ಕರ್ನಾಟಕ’ | ಜನವರಿ 19
    Next Article ಡಾ. ಎಂ. ವೀರಪ್ಪ ಮೊಯಿಲಿಯವರ ‘ವಿಶ್ವಸಂಸ್ಕೃತಿ ಮಹಾಯಾನ’ – ಸಂಪುಟ-2, ಗದ್ಯ ಮಹಾಕಾವ್ಯ ಲೋಕಾರ್ಪಣೆ ಸಮಾರಂಭ
    roovari

    Add Comment Cancel Reply


    Related Posts

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026

    ಅಮೃತ ಮಹೋತ್ಸವದ ಅಂಗವಾಗಿ ತಾಳಮದ್ದಳೆ ಹಾಗೂ ‘ವಿವೇಕ ಚಿಂತನ’ ಉಪನ್ಯಾಸ | ಜನವರಿ 11

    January 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.