Subscribe to Updates

    Get the latest creative news from FooBar about art, design and business.

    What's Hot

    ರಾಜೇಶ್ವರಿ ಕುಡುಪು ಇವರ ‘ಕಲಾಸಂಪದ’ ಪುಸ್ತಕ ಬಿಡುಗಡೆ

    May 17, 2025

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22
    Awards

    ಉಡುಪಿಯಲ್ಲಿ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 17, 2024Updated:June 18, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯೂಕೇಶನಲ್ ಇದರ ವತಿಯಿಂದ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 22-06-2024ರಂದು ಬೆಳಗ್ಗೆ 10-30ಕ್ಕೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿ ಆರ್.ಆರ್.ಸಿ. ದ್ವನ್ಯಾಲೋಕದಲ್ಲಿ ಆಯೋಜಿಸಲಾಗಿದೆ.

    ತುಳು ಭಾಷೆ ಹಾಗೂ ಸಂಸ್ಕೃತಿ ಚಿಂತಕ ಶ್ರೀ ಬೆನೆಟ್ ಜಿ. ಅಮ್ಮನ್ನ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಸಮಾರಂಭದ ಅಧ್ಯಕ್ಷತೆಯನ್ನು ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಇವರು ವಹಿಸಲಿದ್ದು, ನಿವೃತ್ತ ಪ್ರಾಂಶುಪಾಲರಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಇದೇ ಸಂದರ್ಭದಲ್ಲಿ ‘ತುಳುನಾಡಿನ ಪ್ರಭುತ್ವ ಹಾಗೂ ಧಾರ್ಮಿಕ ಪಂಥಗಳು’ ಎಂಬ ವಿಷಯದ ಬಗ್ಗೆ ಇತಿಹಾಸ ಸಹಪ್ರಾಧ್ಯಾಪಕರಾದ ಡಾ. ರಾಮದಾಸ ಪ್ರಭು ಇವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

    ಪೊಳಲಿ ಶೀನಪ್ಪ ಹೆಗ್ಗಡೆ :

    ಪೊಳಲಿ ಶೀನಪ್ಪ ಹೆಗ್ಡೆಯವರೆಂದೇ ಪ್ರಸಿದ್ಧರಾದ ನಂದಳಿಕೆ ಅಮುಣಂಜೆ ಗುತ್ತು ಶೀನಪ್ಪ ಹೆಗ್ಗಡೆಯವರು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಗಾಂಧೀಜಿ ಚಳುವಳಿಯಲ್ಲಿ ಹಲವಾರು ಬಾರಿ ಕಾರಾಗೃಹ ವಾಸವನ್ನು ಅನುಭವಿಸಿದವರು. ಶ್ರೀಯುತರ ಹಲವಾರು ಕೃತಿಗಳಲ್ಲಿ ‘ದಕ್ಷಿಣ ಕನ್ನಡ ಜಿಲ್ಲೆಯ ಚರಿತ್ರೆ ಮತ್ತು ಭೂತಾಳಪಾಂಡ್ಯ ರಾಯನ ಅಳಿಯ ಕಟ್ಟು’ ಮುಖ್ಯವಾದುದು ಮತ್ತು ಇದು ತುಳುನಾಡಿನ ಇತಿಹಾಸಕ್ಕೆ ಸಂಬಂಧಿಸಿದ ಮೊದಲ ಕೃತಿ ಎಂದು ಗುರುತಿಸಲ್ಪಡುತ್ತದೆ. ಅವರ ಇನ್ನಿತರ ಕೃತಿಗಳೆಂದರೆ ‘ಶ್ರೀನಿವಾಸ ಲಿಪಿ’, ‘ಅಕ್ಕರಸು ಪೂಂಜೆದಿ’, ‘ತುಳುನಾಡ ಸಿರಿಯ ಕತೆ’, ‘ಪ್ರಾಚೀನ ತುಳುನಾಡು’ ಹಾಗೂ ಹೆಗ್ಡೇರ ತುಳುನಾಡು’.

    ಎಸ್.ಆರ್. ಹೆಗ್ಡೆ :

    ಮಂಗಳೂರು ತಾಲೂಕಿನ ಚೇಳ್ಯಾರು ಗುತ್ತು ಎಂಬಲ್ಲಿ ಜನಿಸಿದ ಪೊಳಲಿ ಶೀನಪ್ಪ ಹೆಗ್ಗಡೆಯವರ ಮಗ ಸೀತಾರಾಮ ಹೆಗ್ಡೆಯವರು ಎಸ್.ಆರ್. ಹೆಗ್ಡೆ ಎಂದೇ ಪರಿಚಿತರು. ಇವರು ಮಡದಿ ಇಂದಿರಾ ಹೆಗ್ಡೆಯವರೊಂದಿಗೆ ಸೇರಿ ರಚಿಸಿದ ‘ಗುತ್ತಿನಿಂದ ಸೈನಿಕ ಜಗತ್ತಿಗೆ’ ಕೃತಿ ವಿದ್ವಾಂಸರ ಮೆಚ್ಚುಗೆ ಗಳಿಸಿದೆ. ಇವರು ಸೈನಿಕರಾಗಿ, ಪತ್ರಿಕಾ ನಿರ್ವಹಣಾಧಿಕಾರಿಯಾಗಿ, ತುಳುಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರಿಬ್ಬರ ಜಂಟಿ ಹೆಸರಲ್ಲಿ ಈ ಪ್ರಶಸ್ತಿ ನೀಡಲ್ಪಡುತ್ತದೆ.

    ಪ್ರಶಸ್ತಿ ಪುರಸ್ಕೃತರು : ಶ್ರೀ ಬೆನೆಟ್ ಜಿ. ಅಮ್ಮನ್ನ :

    ಶ್ರೀ ಬೆನೆಟ್ ಜಿ. ಅಮ್ಮನ್ನ ಉಡುಪಿ ತಾಲೂಕಿನ ಪಾಂಗಾಳದವರು. 30 ವರ್ಷಗಳ ಕಾಲ ಮಂಗಳೂರಿನ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ಪತ್ರಾಗಾರ ವಿಭಾಗದಲ್ಲಿ ಪತ್ರಾಗಾರ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದವರು. ತುಳುನಾಡಿನ ಸಾಹಿತ್ಯ, ಶಿಕ್ಷಣ, ಸಂಸ್ಕೃತಿಗೆ ವಿದೇಶಿಯರ ಕೊಡುಗೆಗಳು, ತುಳುನಾಡು ಚರಿತ್ರೆ ಇವರ ಆಸಕ್ತಿಯ ಕ್ಷೇತ್ರಗಳು. ಇದಕ್ಕೆ ಸಂಬಂಧಿಸಿದ ಸಂಶೋಧನೆ, ದಾಖಲೀಕರಣ, ಹಸ್ತಪ್ರತಿ ಸಂರಕ್ಷಣೆ, ಭಾಷಾಂತರ ಮೊದಲಾದ ಕ್ಷೇತ್ರಗಳಲ್ಲಿ ಇವರು ಕೊಡುಗೆಯನ್ನು ನೀಡಿದ್ದಾರೆ. ಚಿಗುರಿದ ಬದುಕು (ಕಿರು ಕಾದಂಬರಿ), ಕ್ರೈಸ್ತರು ಮತ್ತು ಬಾಸೆಲ್ ಮಿಶನ್, ಜಾನ್ ಜೇಮ್ಸ್ ಬ್ರಿಗೆಲ್ ಬದ್‌ಕ್ ಬೊಕ್ಕ ಬರವು, ಕಾರ್ಕಳದಲ್ಲಿ ಕ್ರೈಸ್ತರು-ಒಂದು ಅಧ್ಯಯನ ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ಕೋಟಿಚೆನ್ನಯ, ಅಪ್ರಕಟಿತ ತುಳು ಪಾಡ್ಡನಗಳು, ತುಳು ವಿಕ್ರಮಾರ್ಕ ಕಥೆ, ತುಳು ಪಂಚತಂತ್ರ, ತುಳುಗಾದೆಗಳು ಮುಂತಾದ ಪುಸ್ತಕಗಳನ್ನು ಇತರರೊಂದಿಗೆ ಸಂಪಾದಿಸಿದ್ದಾರೆ. ಸಂಪಾದಕರಾಗಿಯೂ ಕಾರ್ಯವೆಸಗಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿ ನಿರಂಜನರ ಜನ್ಮದಿನಾಚರಣೆ
    Next Article ಕರ್ನಾಟಕ ಗಮಕ ಕಲಾ ಪರಿಷತ್ ದ.ಕ. ಜಿಲ್ಲೆ, ಪುತ್ತೂರು ಘಟಕದ ವತಿಯಿಂದ ‘ಗಮಕ ವಾಚನ-ವ್ಯಾಖ್ಯಾನ’
    roovari

    Add Comment Cancel Reply


    Related Posts

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.