Subscribe to Updates

    Get the latest creative news from FooBar about art, design and business.

    What's Hot

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಧ್ರುವ ಪಟ್ಟ ಫೌಂಡೇಷನ್ ಬೆಳ್ತಂಗಡಿ ಘಟಕದ 3ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ
    Yakshagana

    ಯಕ್ಷಧ್ರುವ ಪಟ್ಟ ಫೌಂಡೇಷನ್ ಬೆಳ್ತಂಗಡಿ ಘಟಕದ 3ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ

    December 7, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಳ್ತಂಗಡಿ: ಯಕ್ಷಧ್ರುವ ಪಟ್ಟ ಫೌಂಡೇಷನ್ ಬೆಳ್ತಂಗಡಿ ಘಟಕದ 3ನೇ ವಾರ್ಷಿಕೋತ್ಸವ ‘ಯಕ್ಷ ಸಂಭ್ರಮ -2024’ ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಘಟಕದ ಗೌರವಾಧ್ಯಕ್ಷ ಶಶಿಧ‌ರ್ ಶೆಟ್ಟಿ ಇವರ ನೇತೃತ್ವದಲ್ಲಿ 14 ಡಿಸೆಂಬರ್ 2024ರಂದು ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರ ಶರತ್ ಕೃಷ್ಣ ಪಡುವೆಟ್ನಾಯ ದಿನಾಂಕ 04 ಡಿಸೆಂಬರ್ 2024ರಂದು ಲೋಕಾರ್ಪಣೆ ಗೊಳಿಸಿದರು.
    ಯಕ್ಷ ಧ್ರುವ ಪಟ್ಲ ಫೌಂಡೇಷನ್ ಹಲವಾರು ಅಶಕ್ತ ಕಲಾವಿದರ ಬಾಳಿಗೆ ಬೆಳಕಾಗಿ ಸಮಾಜದ ಮೆಚ್ಚುಗೆಗೆ ಪಾತ್ರವಾಗಿದೆ. 2 ವರ್ಷಗಳಿಂದ ಬೆಳ್ತಂಗಡಿ ತಾಲ್ಲೂಕಿನಲ್ಲಿ ಶಶಿಧರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಉಜಿರೆ ಜನಾರ್ದನ ದೇವಸ್ಥಾನದ ವಠಾರದಲ್ಲಿ ಕಾರ್ಯಕ್ರಮ ನಡೆದಿದೆ. ತಾಲ್ಲೂಕಿನ ವಿವಿಧೆಡೆ ಕಾರ್ಯಕ್ರಮ ಆಯೋಜಿಸುವ ಅವರ ಯೋಚನೆಯಂತೆ, ಈ ಬಾರಿಯ 3ನೇ ವರ್ಷದ ಕಾರ್ಯಕ್ರಮ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದರು. ಇದೇ ಸಂದರ್ಭದಲ್ಲಿ ಶರತ್ ಕೃಷ್ಣ ಪಡುವೆಟ್ನಾಯ ಇವರನ್ನು ಗೌರವಿಸಲಾಯಿತು.
    ಘಟಕದ ಪದಾಧಿಕಾರಿಗಳಾದ ಸುರೇಶ್ ಶೆಟ್ಟಿ ಲಾಯಿಲ, ಶಿತಿಕಂಠ ಭಟ್, ಭುಜಬಲಿ ಧರ್ಮಸ್ಥಳ, ರಘುರಾಮ ಶೆಟ್ಟಿ, ವಸಂತ ಸುವರ್ಣ, ರವಿ ಚಕ್ಕಿತ್ತಾಯ, ಜಯಪ್ರಕಾಶ್ ಶೆಟ್ಟಿ, ರಾಜು ಶೆಟ್ಟಿ, ಪ್ರಕಾಶ್‌ ಶೆಟ್ಟಿ ನೊಚ್ಚ, ರವೀಂದ್ರ ಶೆಟ್ಟಿ, ಜಯಂತ ಶೆಟ್ಟಿ, ಕೃಷ್ಣ ಆಚಾರ್ಯ, ವಸಂತ ಶೆಟ್ಟಿ, ಕೃಷ್ಣ ಐತಾಳ ಪಂಜಿರ್ಪು, ವಿಶ್ವನಾಥ ಶೆಟ್ಟಿ, ವೆಂಕಟರಮಣ ಶೆಟ್ಟಿ ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕರಾವಳಿ ಲೇಖಕಿಯರ-ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಹಾಗೂ ಸನ್ಮಾನ
    Next Article ಡಾ. ಸಿದ್ದಣ್ಣ ಭಾಡಗಿ ಮುದೋಳ, ಬಾಗಲಕೋಟ ಜಿಲ್ಲಾಧ್ಯಕ್ಷರಾಗಿ ಆಯ್ಕೆ.
    roovari

    Add Comment Cancel Reply


    Related Posts

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 12, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.