Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಪ್ಪಿನಕುದ್ರುವಿನಲ್ಲಿ ‘ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು’ ಸರಣಿ ಕಾರ್ಯಕ್ರಮ
    Uncategorized

    ಉಪ್ಪಿನಕುದ್ರುವಿನಲ್ಲಿ ‘ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು’ ಸರಣಿ ಕಾರ್ಯಕ್ರಮ

    June 11, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ: ಡಾ. ಸುಧಾ ಮೂರ್ತಿ ಹಾಗೂ ಡಾ. ಪಿ. ದಯಾನಂದ ಪೈ ಪ್ರಾಯೋಜಕತ್ವದಲ್ಲಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಪ್ರಸ್ತುತಪಡಿಸುವ ಸರಣಿ ಕಾರ್ಯಕ್ರಮ ‘ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ‘ ದಿನಾಂಕ 18-06-2023ರಂದು ಕುಂದಾಪುರದ ಉಪ್ಪಿನ ಕುದ್ರುವಿನ ಗೊಂಬೆ ಮನೆಯಲ್ಲಿ ನಡೆಯಲಿದೆ.
    ಈ ಕಾರ್ಯಕ್ರಮವು ಸತತ ಏಳು ವರ್ಷಗಳಿಂದ ನಡೆಯುತ್ತಿದ್ದು, ಇದು ಸರಣಿಯ 84ನೇ ಕಾರ್ಯಕ್ರಮ. ಈ ಬಾರಿ ಶ್ರೀಮತಿ ಮಾಯಾ ಕಾಮತ್ ನೇತೃತ್ವದ ಮಹಾಮಾಯಿ ಭಜನಾ ಮಂಡಳಿ ಮಣಿಪಾಲ ಇವರಿಂದ ‘ ಭಕ್ತಿ ಸಂಗೀತ ‘ ಕಾರ್ಯಕ್ರಮವು ನಡೆಯಲಿರುವುದು. ಇದೇ ಸಂದರ್ಭದಲ್ಲಿ 2022-23 ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉಪ್ಪಿನ ಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ ಕುಮಾರಿ ಮಹಿಮಾ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

    ಉಪ್ಪಿನ ಕುದ್ರು ಗೊಂಬೆಯಾಟ ಅಕಾಡೆಮಿ:
    ಆರು ತಲೆಮಾರುಗಳಿಂದ ಯಕ್ಷಗಾನ ಗೊಂಬೆಯಾಟವನ್ನು ನಡೆಸಿಕೊಂಡು ಬಂದಿರುವ ಉಪ್ಪಿನಕುದ್ರುವಿನ ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಕೇವಲ ಈ ಪ್ರದೇಶದಲ್ಲಷ್ಟೇ ಅಲ್ಲದೆ ರಾಷ್ಟ್ರದಾದ್ಯಂತ ಹಾಗೂ ವಿದೇಶಗಳಲ್ಲಿ ಈ ಕಲೆಯನ್ನು ಪ್ರದರ್ಶಿಸಿದ ಹೆಗ್ಗಳಿಕೆ ಗಳಿಸಿದ್ದು ಮಾತ್ರವಲ್ಲದೆ ಪರಂಪರೆಯ ಹಾಡುಗಾರಿಕೆ ಮತ್ತು ಅರ್ಥಗಾರಿಕೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದೆ. ಪ್ರಸಕ್ತ ಭಾಸ್ಕರ ಕೊಗ್ಗ ಕಾಮತರು ಇದರ ನಿರ್ದೇಶಕರಾಗಿದ್ದು, ಉಪ್ಪಿನಕುದ್ರುವಿನಲ್ಲಿ ಎಲ್ಲ ಮೂಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ರಂಗಮಂದಿರವನ್ನು ನಿರ್ಮಿಸಿ, ಅದನ್ನು ಬೇರೆ ಬೇರೆ ಕಲಾಪ್ರಕಾರಗಳಿಗೂ ಉಚಿತವಾಗಿ ನೀಡುತ್ತಾ ವಿವಿಧ ಕಲಾ ಸಂವರ್ಧನೆಗೆ ಅನುವು ಮಾಡಿಕೊಟ್ಟಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಜಾನಪದ ಸ್ಪರ್ಧೆಗಳು, ಬಹುಮಾನ ವಿತರಣೆ ಹಾಗೂ ಸೇವಾರತ್ನ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ
    Next Article Nrityaangan, Mangaluru – ‘Yuva Nrityotsava 2023’
    roovari

    Add Comment Cancel Reply


    Related Posts

    ಸಂಭ್ರಮದಿಂದ ನಡೆದ ‘ಸಮರ್ಪಣಂ ಕಲೋತ್ಸವ – 2025’

    April 4, 2025

    ಸುಲೋಚನಾ ಪಿ. ಕೆ. ಇವರ ‘ಸತ್ಯದರ್ಶನ’ ಕೃತಿಗೆ ‘ಜಿ. ಪಿ. ರಾಜರತ್ನಂ ಸಂಸ್ಮರಣ ದತ್ತಿ ಪ್ರಶಸ್ತಿ’

    March 22, 2025

    ಜಾಗೃತಿ ಟ್ರಸ್ಟ್ ವತಿಯಿಂದ ‘ಯೋಗಪಥ’ ಕಾದಂಬರಿ ಲೋಕಾರ್ಪಣೆ ಮತ್ತು ಡಾ. ರಾಜಕುಮಾರ್ ಪ್ರಶಸ್ತಿ ಪ್ರದಾನ | ಫೆಬ್ರವರಿ 25

    February 22, 2025

    ಬೆಂಗಳೂರಿನ ಬಿ.ಎಂ.ಶ್ರೀ ಕಲಾಭವನದಲ್ಲಿ ‘ವಾಣಿ ಸ್ಮರಣೆ’ ಒಂದು ಸ್ಮರಣೀಯ ಕಾರ್ಯಕ್ರಮ | ಫೆಬ್ರವರಿ 25

    February 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.