Subscribe to Updates

    Get the latest creative news from FooBar about art, design and business.

    What's Hot

    ಡಾ. ಪುಂಡಿಕಾಯಿ ಗಣಪಯ್ಯ ಭಟ್ ಇವರೊಂದಿಗೆ ಮಾತುಕತೆ | ಜುಲೈ 05

    July 4, 2025

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಫ.ಗು.ಹಳಕಟ್ಟಿಯವರ 145ನೆಯ ಜನ್ಮದಿನೋತ್ಸವ ಆಚರಣೆ

    July 3, 2025

    ತುಳು ಸಾಹಿತ್ಯ ಅಕಾಡೆಮಿಯಲ್ಲಿ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಐದನೇ ಕಾರ್ಯಕ್ರಮ

    July 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಾರ್ಷಿಕ ತರಬೇತಿ ಶಿಬಿರದ ಸಮಾರೋಪ
    Dance

    ವಾರ್ಷಿಕ ತರಬೇತಿ ಶಿಬಿರದ ಸಮಾರೋಪ

    March 11, 20241 Comment1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಚನ್ನರಾಯಪಟ್ಟಣ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ನಿಲಯ ಚನ್ನರಾಯಪಟ್ಟಣ, ಹಾಗೂ ಪ್ರತಿಮಾ ಟ್ರಸ್ಟ್ ಚನ್ನರಾಯಪಟ್ಟಣ ಸಹಯೋಗದಲ್ಲಿ ನಡೆದ ವಾರ್ಷಿಕ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 05-03-2024ರಂದು ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿರುವ ‘ರಂಗ ಲೋಕ’ದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಹಾಸನ ಜಿಲ್ಲೆ ಕಾರೆಕೆರೆಯ ಕೃಷಿ ಮಹಾವಿದ್ಯಾಲಯದ ಮುಖ್ಯಾಧಿಕಾರಿಯಾಗಿರುವ ಡಾ. ಎಸ್. ಎನ್. ವಾಸುದೇವನ್ ಮಾತನಾಡಿ “ಮಕ್ಕಳು ಇಂತಹ ಚಟುವಟಿಕೆಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ. ನಮ್ಮ ಹಿರಿಯರ ಸಂಸ್ಕೃತಿ, ಸಂಪ್ರದಾಯಗಳಿಗೆ ವೈಜ್ಞಾನಿಕ ಹಿನ್ನೆಲೆ ಇದೆ ಅದನ್ನು ನಾವು ಸರಿಯಾಗಿ ಅರ್ಥೈಹಿಸಿಕೊಳ್ಳ ಬೇಕು. ಇಂತಹ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಸಿಕೊಳ್ಳುವುದರಿಂದ ಮಕ್ಕಳ ಬೌದ್ಧಿಕ ಮಟ್ಟವೂ ಹೆಚ್ಚುತ್ತದೆ.” ಎಂದರು.
    ವೇದಿಕೆಯಲ್ಲಿ ವಿಸ್ತರಣಾಧಿಕಾರಿಗಳಾದ ರಾಜೇಶ್ ಚೌಹಾಣ್, ನಿಲಯ ಮೇಲ್ವಿಚಾರಕಿ ಶ್ರೀಮತಿ ಉಷಾ ರಾಣಿ ಹಾಗೂ ನಿಲಯ ಪಾಲಕರಾದ ಶ್ರೀಮತಿ ಜೆ. ಎಮ್. ಪ್ರತಿಭಾ ಹಾಗೂ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಅರುಣ್ ಉಪಸ್ಥಿತರಿದ್ದರು.
    ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಕಂಸಾಳೆ, ರಂಗಕುಣಿತ, ಕಿರುನಾಟಕ, ಸೋಬಾನೆ ಪದ, ಜನಪದ ಸಮೂಹ ಗೀತ ಗಾಯನ, ಭ್ರೂಣ ಹತ್ಯೆಯ ರೂಪಕ ಹೀಗೆ ಆನೇಕ ಕಾರ್ಯಕ್ರಮಗಳು ಜರಗಿದವು.

    Share. Facebook Twitter Pinterest LinkedIn Tumblr WhatsApp Email
    Previous Article ಲಾವಣ್ಯ (ರಿ.) ಬೈಂದೂರು ‘ರಂಗಪಂಚಮಿ-2024’ಯ ಸಮಾರೋಪ ಕಾರ್ಯಕ್ರಮ
    Next Article ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಬ್ಯಾರಿ ಮಹಿಳಾ ಕವಿಗೋಷ್ಠಿ
    roovari

    1 Comment

    1. ಉಮೇಶ್ ತೆಂಕನಹಳ್ಳಿ on March 11, 2024 4:25 pm

      ಧನ್ಯವಾದಗಳು ಸರ್

      Reply

    Add Comment Cancel Reply


    Related Posts

    ಬೆಂಗಳೂರಿನ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಸಂಗೀತ ನೃತ್ಯೋತ್ಸವ’ | ಜುಲೈ 04

    July 2, 2025

    ಸಾಹಿತ್ಯಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾದ ಕ.ಚು.ಸಾ.ಪ. ಅಂತರ ರಾಜ್ಯಮಟ್ಟದ ಸಮ್ಮೇಳನ

    July 2, 2025

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025

    ‘ನುಡಿ ತೋರಣ’ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಬೆಂಗಳೂರು ಇದರ ತ್ರೈವಾರ್ಷಿಕ ಸಾಹಿತ್ಯ ಸಮಾವೇಶ -2025 | ಜೂನ್ 29

    June 28, 2025

    1 Comment

    1. ಉಮೇಶ್ ತೆಂಕನಹಳ್ಳಿ on March 11, 2024 4:25 pm

      ಧನ್ಯವಾದಗಳು ಸರ್

      Reply

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.