Subscribe to Updates

    Get the latest creative news from FooBar about art, design and business.

    What's Hot

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯೋಗೀಶ ಶರ್ಮಾ ಬಳ್ಳಪದವು ಇವರಿಗೆ ‘ಸಂಗೀತ ಜ್ಯೋತಿಶ್ರೀ ಪ್ರಶಸ್ತಿ’ಯ ಗೌರವ
    Awards

    ಯೋಗೀಶ ಶರ್ಮಾ ಬಳ್ಳಪದವು ಇವರಿಗೆ ‘ಸಂಗೀತ ಜ್ಯೋತಿಶ್ರೀ ಪ್ರಶಸ್ತಿ’ಯ ಗೌರವ

    May 19, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ನೀಲೇಶ್ವರಂ : ಕಲ್ಯಾಶೇರಿ ಕೃಷ್ಣನ್ ನಂಬ್ಯಾರ್ ಭಾಗವತರ್ ಸ್ಮಾರಕ ಸಂಗೀತ ಸಭೆಯ ಪ್ರಥಮ ‘ಸಂಗೀತ ಜ್ಯೋತಿಶ್ರೀ ಪ್ರಶಸ್ತಿ’ಯನ್ನು ಪ್ರಸಿದ್ಧ ಸಂಗೀತಜ್ಞ ಯೋಗೀಶ ಶರ್ಮಾ ಬಳ್ಳಪದವು ಇವರಿಗೆ ದಿನಾಂಕ 04 ಮೇ 2025ರಂದು ಪ್ರದಾನ ಮಾಡಲಾಯಿತು. ಈ ಪ್ರಶಸ್ತಿ ಸಮರ್ಪಣೆಯು ಸಂಘದ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿಶೇಷ ಸಮಾರಂಭದಲ್ಲಿ ಜರುಗಿತು.

    ಕಾರ್ಯಕ್ರಮವನ್ನು ಬೇಕಲ್ ಗೋಕುಲಂ ಗೋಶಾಲಾ ಟ್ರಸ್ಟಿನ ವಿಷ್ಣು ಪ್ರಸಾದ್ ಹೆಬ್ಬಾರ್ ಇವರು ಉದ್ಘಾಟಿಸಿ, ಪ್ರಶಸ್ತಿಯನ್ನು ಯೋಗೀಶ ಶರ್ಮಾರವರಿಗೆ ಪ್ರದಾನಿಸಿದರು. ಸಭೆಯ ಅಧ್ಯಕ್ಷತೆಯನ್ನು ನರೇಂದ್ರನ್ ಕರಿಂಗಾಟ್ ವಹಿಸಿದ್ದರು ಹಾಗೂ ಪ್ರೊ. ಕೆ.ಪಿ. ಜಯರಾಜನ್ ಅವರು ಮುಖ್ಯ ಪ್ರಭಾಷಣ ನೀಡಿದರು.

    ಯೋಗೀಶ ಶರ್ಮಾ ಬಳ್ಳಪದವು ಇವರ ಸಾಧನೆಗಳ ಪರಿಚಯವನ್ನು ಶ್ರೀಮತಿ ನಿರಂಜಿನಿ ಜಯರಾಜ್ ನೀಡಿದರು. ಸಂಗೀತ ಕ್ಷೇತ್ರದಲ್ಲಿ ಸುದೀರ್ಘ ಕಾಲದ ನಿಷ್ಠೆಯಿಂದ ಮಾಡಿದ ಕೆಲಸಗಳು, ವೈಶಿಷ್ಟ್ಯಪೂರ್ಣ ಕಲಾಪ್ರದರ್ಶನ ಮತ್ತು ಗುರುವಾಗಿ ನೀಡಿದ ಕೊಡುಗೆಗಳಿಗೆ ಯೋಗೀಶ ಶರ್ಮಾರವರಿಗೆ ಈ ಪ್ರಶಸ್ತಿ ಲಭಿಸಿದೆ. ಎಂ.ಕೆ. ಗೋಪಕುಮಾರ್, ಕೆ.ಎಂ. ಗೋಪಾಲಕೃಷ್ಣನ್ ಮುಂತಾದ ಗಣ್ಯರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಕೆ.ಎಸ್. ಕುಮಾರ್ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಎಂ.ಕೆ. ಬಾಬುರಾಜ್ ಧನ್ಯವಾದವಿತ್ತರು. ಕಾರ್ಯಕ್ರಮದ ಭಾಗವಾಗಿ ನಡೆದ ಪಂಚರತ್ನ ಕೀರ್ತನೆ ಗಾಯನದಲ್ಲಿ ಹಲವಾರು ಕಲಾವಿದರು ಪಾಲ್ಗೊಂಡರು. ಅಂತಿಮವಾಗಿ ಯೋಗೀಶ ಶರ್ಮಾ ಬಳ್ಳಪದವು ಇವರ ಸಂಗೀತ ಕಚೇರಿ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿದ್ದು, ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆಯಿತು.

    award baikady Music roovari
    Share. Facebook Twitter Pinterest LinkedIn Tumblr WhatsApp Email
    Previous Articleಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ
    Next Article ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 25
    roovari

    Add Comment Cancel Reply


    Related Posts

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 25

    May 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.