Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶಾಸ್ತ್ರೀಯ ಶೈಲಿಯ ವಿಶೇಷ ಕಲಾವಿದ ರಥ ಶಿಲ್ಪಿ ಪರಮೇಶ್ವರಾಚಾರ್ಯ

    June 24, 2025

    ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ಮತ್ತು ಸಂಗೀತ ದಿನಾಚರಣೆ

    June 23, 2025

    ಮಂಗಳೂರಿನ ಅಮೃತ ಕಾಲೇಜಿನಲ್ಲಿ ತುಳು ನಾಟಕ ಕಾರ್ಯಾಗಾರ | ಜೂನ್ 24

    June 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ
    Competition

    ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ

    May 27, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ಆಶ್ರಯದಲ್ಲಿ ಸಾಹಿತಿ ದಿ. ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ ಹಾಗೂ ಅವರ ಬದುಕು ಬರಹದ ಕುರಿತು ಉಪನ್ಯಾಸ ಕಾರ್ಯಕ್ರಮವು ಉಡುಪಿಯ ಯಕ್ಷಗಾನ ಕಲಾರಂಗದ ಐ. ವೈ. ಸಿ. ಸಭಾಂಗಣದಲ್ಲಿ ದಿನಾಂಕ 26-05-2024ರಂದು  ನಡೆಯಿತು.

    ಕಾರ್ಯಕ್ರಮದಲ್ಲಿ ಮೇಟಿ ಅವರೊಂದಿಗಿನ ನಾಲ್ಕು ದಶಕಗಳ ಒಡನಾಟದ ನೆನಪುಗಳನ್ನು ಮೆಲುಕು ಹಾಕಿದ ನಾಡಿನ ಖ್ಯಾತ ವಿಮರ್ಶಕ ಹಾಗೂ ಲೇಖಕರಾದ ಜಿ. ಪಿ. ಪ್ರಭಾಕರ್ ತುಮರಿ “ಸಾಹಿತಿ ದಿ. ಮೇಟಿ ಮುದಿಯಪ್ಪನವರು ಮಾನವೀಯತೆ ಪ್ರಧಾನವಾದ ಬಹುಮುಖ ವ್ಯಕ್ತಿತ್ವ ಹೊಂದಿದವರು. ವಿವಿಧ ಸಂಘ- ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದುದು ಮಾತ್ರವಲ್ಲದೆ, ರಂಗ ನಟರಾಗಿ ಪ್ರತಿಭೆ ತೋರಿದ್ದಾರೆ. ಅವರದ್ದು ಸಾಮಾನ್ಯರಲ್ಲಿ ಸಾಮಾನ್ಯನಾಗುವ ಗುಣ. ಯಾವುದೇ ಅಹಂಕಾರ ಇಲ್ಲದ, ಎಲ್ಲರೊಂದಿಗೆ ಬೆರೆಯುವ ಅವರ ಗುಣವೇ ಎಲ್ಲರಿಗೂ ಅವರನ್ನು ಪ್ರಿಯವಾಗಿಸಿದೆ. ಉಡುಪಿಗೆ ಉತ್ತರ ಕರ್ನಾಟಕದಿಂದ ವಲಸೆ ಬಂದವರನ್ನು ಒಟ್ಟು ಸೇರಿಸಿ ಕನಕದಾಸ ಸಮಾಜ ಸೇವಾ ಸಂಘವನ್ನು ಸ್ಥಾಪಿಸಿ ಸ್ವಾಭಿಮಾನ ತುಂಬಿದವರು. ಇನ್ನು ಕನಕದಾಸನ ಕುರಿತು ಉಡುಪಿಯಲ್ಲಿ ವಿವಾದ ಎದ್ದಾಗ ಅದನ್ನು ಅತ್ಯಂತ ಸೌಹಾರ್ದವಾಗಿ, ಸುಖಾಂತ್ಯವಾಗಿ ಮಾಡಲು ಅದರ ನೇತೃತ್ವವನ್ನು ವಹಿಸಿದ್ದರು. ಇವರ ಸಂಸ್ಮರಣೆಯನ್ನು ಮಾಡುತ್ತಿರುವುದು ಬಹಳ ಅರ್ಥಪೂರ್ಣ ಕಾರ್ಯ.” ಎಂದರು.

    ಕಾರ್ಯಕ್ರಮದಲ್ಲಿ ಮೇಟಿ ಮುದಿಯಪ್ಪ ನೆನಪಿನಲ್ಲಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಯುವ ಕಥಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಡಾ. ನಮೃತಾ ಬಿ. , ದ್ವಿತೀಯ ಬಹುಮಾನ ಪಡೆದ ಡಾ. ಜಿ. ಪಿ. ನಾಗರಾಜ್ ಹಾಗೂ ಮೆಚ್ಚುಗೆ ಬಹುಮಾನ ಪಡೆದ ರಾಮಾಂಜಿ ನಮ್ಮಭೂಮಿ ,ಮಂಜುನಾಥ್ ಕಾರ್ತಟ್ಟು ಹಾಗೂ ಮಂಜುನಾಥ್ ಹಿಲಿಯಾಣ ಇವರಿಗೆ ಬಹುಮಾನ ವಿತರಿಸಲಾಯಿತು.

    ಇದೇ ಸಂದರ್ಭದಲ್ಲಿ ತೀರ್ಪುಗಾರರಾಗಿ ಸಹಕರಿಸಿದ್ದ ಹಿರಿಯ ಸಾಹಿತಿ ಡಾ. ಜನಾರ್ದನ್ ಭಟ್ಟ ಹಾಗೂ ತುಳು ಸಾಹಿತ್ಯ ಅಕಾಡೆಮಿಗೆ ಸದಸ್ಯರಾಗಿ ಆಯ್ಕೆಯಾದ ಉದ್ಯಾವರ ನಾಗೇಶ್ ಕುಮಾರ್ ಇವರನ್ನು ಗೌರವಿಸಲಾಯಿತು. ಸಮಾರಂಭದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕೇಂದ್ರ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ   ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ ಇದರ ವಿಶ್ವಸ್ಥರಾದ  ಹಿರಿಯಡ್ಕ ಮುರಳೀಧರ ಉಪಾಧ್ಯ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನಿರಂಜನ ಚೋಳಯ್ಯ, ಮೇಟಿ ಮುದಿಯಪ್ಪ ಅವರ ಪುತ್ರಿ ಶಾಂತಾ ಮೇಟಿ ಉಪಸ್ಥಿತರಿದ್ದರು.

    ಕ. ಸಾ. ಪ. ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಆಶಯ ಮಾತುಗಳೊಂದಿಗೆ ಸ್ವಾಗತಿಸಿ, ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ನಿರೂಪಿಸಿ, ಗೌರವ ಕಾರ್ಯದರ್ಶಿ ರಂಜಿನಿ ವಸಂತ್ ಧನ್ಯವಾದ ಸಮರ್ಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ನಾಡಿನ ಖ್ಯಾತ ನಿರ್ದೇಶಕ ಡಾ. ಶ್ರೀಪಾದ್ ಭಟ್ ನಿರ್ದೇಶನದ ‘ಮಂಟೇಸ್ವಾಮಿ ಕಾವ್ಯ ಪ್ರಯೋಗ’  ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ಸಂಪನ್ನಗೊಂಡ ‘ನಾಯಕಾ-ನಾಯಿಕಾ ಭಾವ’ದ ಒಂದು ದಿನದ ಕಾರ್ಯಗಾರ
    Next Article ಮಂಗಳೂರಿಗರನ್ನು ರಂಜಿಸಿದ ರಂಗಾಯಣ ಮೈಸೂರಿನ ‘ನಾಂದಿ’ ನಾಟಕೋತ್ಸವ
    roovari

    Add Comment Cancel Reply


    Related Posts

    ‘ಬನ್ನಂಜೆ 90 – ಉಡುಪಿ ನಮನ’ ಕಾರ್ಯಕ್ರಮದ ಪೂರ್ವಭಾವಿ ಸಭೆ

    June 23, 2025

    ವಿಜಯಶ್ರೀ ಸಬರದ ಹಾಗೂ ಡಿ. ಕೆ. ರಾಜೇಂದ್ರ ಇವರಿಗೆ ಪ್ರೊ. ಕು. ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ

    June 23, 2025

    2025ನೇ ಸಾಲಿನ ಕೊಡಗಿನ ಗೌರಮ್ಮ ಕಥಾಸ್ಪರ್ಧೆಗೆ ಸಣ್ಣ ಕಥೆಗಳ ಆಹ್ವಾನ  | ಆಗಸ್ಟ್ 20

    June 23, 2025

    ‘ಕನ್ನಡ ಕಲರವ -2’ ಕಾರ್ಯಕ್ರಮದ ಪ್ರಯುಕ್ತ ಪ್ರಬಂಧ, ಭಾಷಣ ಹಾಗೂ ಸ್ವರಚಿತ ಕವನ ಸ್ಪರ್ಧೆ | ಕೊನೆಯ ದಿನಾಂಕ ಜುಲೈ 20

    June 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.