Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ
    Competition

    ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ

    August 12, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮತ್ತು ಮಣಿಪಾಲ್ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರವು ಸ್ವಾತಂತ್ರೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಉಡುಪಿ ಜಿಲ್ಲಾ ಮಟ್ಟದ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ದಿನಾಂಕ 08 ಆಗಸ್ಟ್ 2024ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇದರ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಇವರು ಮಾತನಾಡಿ “ದೇಶ ಪ್ರೇಮ ಎಲ್ಲರಲ್ಲಿ ಎಳವೆಯಿಂದಲೇ ಬೆಳೆಯಬೇಕು. ದೇಶದ ಬಗೆಗೆ ಪ್ರೇಮವನ್ನು ಹೊಂದಿದಾಗ ಮಾತ್ರ ಸಶಕ್ತ ಭಾರತದ ನಿರ್ಮಾಣ ಸಾಧ್ಯ. ಈ ಹಿನ್ನಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುವ ಉದ್ದೇಶದಿಂದ ರೇಡಿಯೋ ಮಣಿಪಾಲ್ ನಲ್ಲಿ ಆಯೋಜಿಸಲಾದ ದೇಶ ಭಕ್ತಿಗೀತೆ ಸಮೂಹ ಗಾಯನ ಸ್ಪರ್ಧಾ ಕಾರ್ಯಕ್ರಮ ಅಭಿನಂದನೀಯ” ಎಂದು ಹೇಳಿದರು.

    ಮಣಿಪಾಲ್ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ (ಎಮ್.ಐ.ಸಿ.) ಸಂಸ್ಥೆಯ ನಿರ್ದೆಶಕರಾದ ಡಾ. ಪದ್ಮಾರಾಣಿಯವರು ಸ್ವಾಗತ ಮಾತುಗಳನ್ನಾಡಿ “ಇಂತಹ ಸ್ಪರ್ಧಾ ಕಾರ್ಯಕ್ರಮದಿಂದ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಲು ಸಾಧ್ಯ” ಎಂದು ಅಭಿಪ್ರಾಯಪಟ್ಟರು.

    ಉಡುಪಿಯ ಜಿಲ್ಲೆಯ ಒಟ್ಟು ಹನ್ನೊಂದು ಪ್ರೌಢಶಾಲಾ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಮಾಧವ ಕೃಪಾ ಆಂಗ್ಲ ಮಾದ್ಯಮ ಶಾಲೆ ಮಣಿಪಾಲ್ ಇವರು ಪ್ರಥಮ ಬಹುಮಾನವನ್ನು, ಟಿ.ಎಂ.ಎ. ಪೈ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಕುಂಜಿಬೆಟ್ಟು ಇವರು ದ್ವಿತೀಯ ಬಹುಮಾನವನ್ನು ಹಾಗೂ ಜ್ಞಾನಸುಧಾ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಾರ್ಕಳ ಇವರು ತೃತೀಯ ಬಹುಮಾನವನ್ನು ಪಡೆದರು. ಸಮಧಾನಕರ ಬಹುಮಾನವನ್ನು ಸೈಂಟ್ ಫ್ರಾನ್ಸೀಸ್ ಝೇವಿಯರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉದ್ಯಾವರ ಮತ್ತು ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ಹಿರಿಯಡಕ ತಂಡ ಪಡೆದುಕೊಂಡಿತು.

    ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರಾದ ಡಾ. ರಶ್ಮಿ ಅಮ್ಮೆಂಬಳ ಅವರು ಧನ್ಯವಾದ ಸಮರ್ಪಿಸಿದರು. ಮಣಿಪಾಲ್ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಂಸ್ಥೆಯ ವಿದ್ಯಾರ್ಥಿನಿ ಲೆರಿಸಾ ಡಿ’ಸೋಜ ನಿರೂಪಿಸಿದರು. ಸಿಬ್ಬಂದಿಗಳಾದ ಮಂಜುನಾಥ್ ಜಿ.ಹೆಚ್, ಮೋಹನ್ ದಾಸ್ ಪೈ, ಪೀಟರ್ ಡಿಸೋಜ, ಕುಶಲ್ ಕುಮಾರ್ ಬಿ., ಸುಧೀರ್ ಸಾಮಂತ್, ವಿನಾಯಕ್ ಅಂಕೋಲಾ ಮತ್ತಿತರರು ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್ ನಲ್ಲಿ ‘ಉದಯರಾಗ – 54’ | ಆಗಸ್ಟ್ 15
    Next Article ಸಪ್ತಕ ಇವರಿಂದ ‘ಸ್ವರ ಸಂಧ್ಯಾ’ ಕಾರ್ಯಕ್ರಮ | ಆಗಸ್ಟ್ 15
    roovari

    Comments are closed.

    Related Posts

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಮೇ 17

    May 13, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.