ಮಂಗಳೂರು : ಪ್ರೊ. ಎಸ್. ವಿ. ಪರಮೇಶ್ವರ ಭಟ್ಟ ಪ್ರತಿಷ್ಠಾನ ಮಂಗಳೂರು ಇವರು ಕನ್ನಡ ವಿಭಾಗ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಮಂಗಳೂರು ಇದರ ಸಹಯೋಗದಲ್ಲಿ ಆಯೋಜಿಸುವ ‘ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣ ಪ್ರಶಸ್ತಿ ಪ್ರದಾನ ಸಮಾರಂಭ – 2025’ ದಿನಾಂಕ 21 ಫೆಬ್ರವರಿ 2025ರ ಶುಕ್ರವಾರದಂದು ಸಂಜೆ 4.00 ಗಂಟೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಾನ್ನಿಧ್ಯ ಸಭಾಂಗಣದಲ್ಲಿ ನಡೆಯಲಿದೆ
2024ನೇ ಸಾಲಿನ ಪ್ರಶಸ್ತಿಗೆ ಖ್ಯಾತ ಸಾಹಿತಿಗಳು ಹಾಗೂ ಪ್ರಕಾಶಕರಾದ ವಾಮನ ನಂದಾವರ ಮತ್ತು ಶ್ರೀಮತಿ ಚಂದ್ರಕಲಾ ನಂದಾವರ ಆಯ್ಕೆಯಾಗಿದ್ದು, ನಿಟ್ಟೆ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ಪ್ರಭಾರ ಮುಖ್ಯಸ್ಥರಾದ ಡಾ. ಸಾಯಿಗೀತ ಅಭಿನಂದಿಸಲಿದ್ದಾರೆ. 2025ನೇ ಸಾಲಿನ ಪ್ರಶಸ್ತಿಗೆ ಕಾಸರಗೋಡಿನ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಪಿ. ಶ್ರೀಕೃಷ್ಣ ಭಟ್ ಆಯ್ಕೆಯಾಗಿದ್ದು, ಮಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಡಾ. ಮೀನಾಕ್ಷಿ ರಾಮಚಂದ್ರ ಅಭಿನಂದಿಸಲಿದ್ದಾರೆ.
ಎಸ್. ವಿ. ಪಿ. ಪ್ರತಿಷ್ಠಾನ, ಮಂಗಳೂರು ಇದರ ಅಧ್ಯಕ್ಷರಾದ ಡಾ. ಬಿ. ಎ. ವಿವೇಕ ರೈ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಸಂತ ಅಲೋಶಿಯಸ್ ಸ್ವಾಯತ್ತ ಮಹಾವಿದ್ಯಾಲಯ ಮಂಗಳೂರು ಇದರ ಕುಲಸಚಿವರಾದ ಡಾ. ಆಲ್ವಿನ್ ವಿ. ಡೆ’ಸಾ ಶುಭಾಶಂಸನೆ ಗೈಯ್ಯಲಿದ್ದಾರೆ. ಪ್ರೊ. ಎಸ್. ವಿ. ಪಿ. ಯವರ ಪುತ್ರ : ಶ್ರೀ ಎಸ್.ಪಿ. ರಾಮಚಂದ್ರ ಬೆಂಗಳೂರು ಉಪಸ್ಥಿತರಿರುವರು. :
ಅಂಕಿತ ಪುಸ್ತಕ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಎಸ್. ವಿ. ಪಿ. ಗೀತಗಾಯನ ಕಾರ್ಯಕ್ರಮ ನಡೆಯಲಿದ್ದು ಶ್ರೀಮತಿ ರತ್ನಾವತಿ ಜೆ. ಬೈಕಾಡಿ ಹಾಗೂ ಶ್ರೀಮತಿ ಜಯಲಕ್ಷ್ಮೀ ಶಾಸ್ತ್ರಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.