Subscribe to Updates

    Get the latest creative news from FooBar about art, design and business.

    What's Hot

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿಜ್ರಂಭಣೆಯಿಂದ ನಡೆದ ಪ್ರೊ. ಎಸ್. ವಿ. ಪರಮೇಶ್ವರ ಭಟ್ಟ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭ
    Awards

    ವಿಜ್ರಂಭಣೆಯಿಂದ ನಡೆದ ಪ್ರೊ. ಎಸ್. ವಿ. ಪರಮೇಶ್ವರ ಭಟ್ಟ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭ

    February 24, 2025Updated:February 25, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: . ಎಸ್. ವಿ. ಪರಮೇಶ್ವರ ಭಟ್ಟ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಪ್ರೊ. ಎಸ್. ವಿ. ಪರಮೇಶ್ವರ ಭಟ್ಟ ಸಂಸ್ಮರಣ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 21 ಫೆಬ್ರವರಿ 2025ರ ಶುಕ್ರವಾರದಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಇದರ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಸಾಹಿತಿ ಚಂದ್ರಕಲಾ ನಂದಾವರ ಹಾಗೂ ನಿವೃತ್ತ ಪ್ರಾಧ್ಯಾಪಕ ಕಾಸರಗೋಡಿನ ಪಿ. ಕೃಷ್ಣ ಭಟ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


    ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಎಸ್‌. ವಿ. ಪಿ. ಪ್ರತಿಷ್ಠಾನದ ಅಧ್ಯಕ್ಷರಾದ ಬಿ. ಎ. ವಿವೇಕ ರೈ ಮಾತನಾಡಿ “ಕನ್ನಡ ಭಾಷಾ ಲೋಕಕ್ಕೆ ಎಸ್‌. ವಿ. ಪಿ. ಅವರ ಕೊಡುಗೆ ಮಹತ್ತರವಾದುದು. ಜಿಲ್ಲೆಯಲ್ಲಿ ಇಂದಿಗೂ ಕನ್ನಡದ ವಾತಾವರಣ ಉಳಿಯಲು ಪರಮೇಶ್ವರ ಭಟ್ಟರ ಕೊಡುಗೆ ಬಹಳಷ್ಟಿದೆ. 1968ರಲ್ಲಿ ಮೈಸೂರ್ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಸ್ಥಾಪನೆ ಆದಾಗ ಮಂಗಳೂರು ಬಂದವರು ಪ್ರೊ. ಪರಮೇಶ್ವರ ಭಟ್ಟರು. ಮಂಗಳೂರಿನ ಎಲ್ಲಾ ಕಾಲೇಜುಗಳಲ್ಲಿ ಕನ್ನಡ ಐಚ್ಛಿಕ ವಿಷಯವಾಗಿ ಬರಬೇಕೆಂದು ಪ್ರಾಯತ್ನಿಸಿದವರು ಎಸ್. ವಿ. ಪಿ. ಯವರು. ಬದುಕಿನಲ್ಲಿ ನೋವುಂಡು ನಗೆಚೆಲ್ಲುವ ಅಜಾತಶತ್ರುವಾಗಿದ್ದ ಇವರು ಕಾವ್ಯ ಜೀವಿಸುವ ಹಾಗೂ ಕಾವ್ಯದ ಪ್ರೀತಿ ಹಂಚುವ ಕೆಲಸ ಮಾಡಿದ್ದರು” ಎಂದರು. ಈ ಪ್ರಶಸ್ತಿಯು ಸ್ಮರಣಿಕೆ ಹಾಗೂ ರೂಪಾಯಿ 25 ಸಾವಿರ ನಗದನ್ನು ಒಳಗೊಂಡಿತ್ತು.


    ಪ್ರೊ. ಎಸ್‌. ವಿ. ಪಿ. ಅವರ ಪುತ್ರ ಎಸ್. ಪಿ. ರಾಮಚಂದ್ರ, ಸೈಂಟ್ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಕುಲಸಚಿವ ಆಲ್ವಿನ್ ಡೇಸಾ ಉಪಸ್ಥಿತರಿದ್ದರು. ಪ್ರಶಸ್ತಿ ಪುರಸ್ಕೃ ತರ ಕುರಿತು ನಿಟ್ಟೆ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಸಾಯಿಗೀತಾ ಹಾಗೂ ನಿವೃತ್ತ ಪ್ರಾಧ್ಯಾಪಕಿ ಮೀನಾಕ್ಷಿ ರಾಮಚಂದ್ರ ಮಾತನಾಡಿದರು.
    ಪ್ರೊ. ವಿಶ್ವನಾಥ ಬದಿಕಾನ ಸ್ವಾಗತಿಸಿ, ಪ್ರೊ. ನರಸಿಂಹಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

    award kannada Literature
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳಾದೇವಿ ದೇವಾಲಯದ ಆವರಣದಲ್ಲಿ ಉದ್ಘಾಟನೆಗೊಂಡ ‘ಯಕ್ಷ ತ್ರಿವೇಣಿ’
    Next Article ‘ಕುಸಲ್ ದ ಅರಸೆ’ ನವೀನ್ ಡಿ. ಪಡೀಲ್ ಇವರಿಗೆ ‘ವಿಶ್ವಪ್ರಭಾ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘#36 ಸತಿ ಸಾವಿತ್ರಿ ನಿವಾಸ’ ಕನ್ನಡ ನಾಟಕ ಪ್ರದರ್ಶನ | ಜೂನ್ 01

    May 30, 2025

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications