Subscribe to Updates

    Get the latest creative news from FooBar about art, design and business.

    What's Hot

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರೊ. ಅಭಯ ಕುಮಾರ್ ಗೆ ಎಸ್.ವಿ.ಪಿ. ಕನ್ನಡ ಸಂಸ್ಥೆಯಿಂದ ಬೀಳ್ಕೊಡುಗೆ ಸಮಾರಂಭ
    Literature

    ಪ್ರೊ. ಅಭಯ ಕುಮಾರ್ ಗೆ ಎಸ್.ವಿ.ಪಿ. ಕನ್ನಡ ಸಂಸ್ಥೆಯಿಂದ ಬೀಳ್ಕೊಡುಗೆ ಸಮಾರಂಭ

    July 12, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಕೊಣಾಜೆ : ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕಳೆದ ಹಲವು ವರ್ಷಗಳಿಂದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಲಿರುವ ಪ್ರೊ. ಅಭಯ ಕುಮಾರ್ ಅವರ ಬೀಳ್ಕೊಡುಗೆ ಸಮಾರಂಭ ದಿನಾಂಕ : 30-06-2023ರಂದು ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ. ಸೋಮಣ್ಣ ಹೊಂಗಳ್ಳಿ ಅವರು, “ಪ್ರೊ. ಅಭಯ್‌ ಕುಮಾರ್ ಅವರು ತುಂಬಾ ಸರಳ ವ್ಯಕ್ತಿತ್ವದ ಮತ್ತು ಮಾನವ ಪ್ರೀತಿಯುಳ್ಳ ವ್ಯಕ್ತಿಯಾಗಿದ್ದಾರೆ. ಅವರು ಜಾನಪದ ವಿದ್ವಾಂಸನಾಗಿ ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರ ನಿವೃತ್ತ ಜೀವನವು ಸುಖಮಯವಾಗಿರಲಿ” ಎಂದು ಹಾರೈಸಿದರು.

    ಪ್ರಾಧ್ಯಾಪಕ ಡಾ.ನಾಗಪ್ಪ ಗೌಡ ಅವರು ಮಾತನಾಡಿ, “ಒಳ್ಳೆಯದನ್ನು ಗುರುತಿಸಿ, ಪ್ರೋತ್ಸಾಹಿಸುವ ವ್ಯಕ್ತಿತ್ವ ಪ್ರೊ, ಅಭಯ ಕುಮಾರ್ ಅವರದ್ದು. ಸಮಾಜಮುಖಿಯಾಗಿ ಯೋಚನೆ ಮಾಡುವವರಾಗಿ, ಸಿದ್ಧಾಂತ, ವೈಚಾರಿಕತೆ, ನಿಲುವುಗಳಿಗನುಸಾರವಾಗಿ ಸಮಾಜದಲ್ಲಿ ಬದುಕನ್ನು ಕಟ್ಟಿಕೊಂಡವರು. ಜಾನಪದ ಕ್ಷೇತ್ರದಲ್ಲಿ ಅಪಾರ ಜ್ಞಾನವನ್ನು ಹೊಂದಿದ ಇವರ ಅನುಭವಗಳು ನಿವೃತ್ತಿ ಬಳಿಕ ಕೃತಿಗಳ ಮೂಲಕ ಅನಾವರಣಗೊಳ್ಳಲಿ” ಎಂದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರೊ. ಅಭಯ್ ಕುಮಾರ್ ವಿದ್ಯೆ ನೀಡಿ ಬೆಳೆಸಿದ ಮಂಗಳೂರು ವಿವಿಗೆ ನಾನು ಅಭಾರಿಯಾಗಿದ್ದೇನೆ. ಬದುಕಿನಲ್ಲಿ ಛಲ ಹಿಡಿದು ಮುನ್ನಡೆದರೆ ಖಂಡಿತಾವಾಗಿ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ ಎಂದ ಅವರು, ಬಾಲ್ಯದಿಂದ ತಾವು ನಡೆದು ಬಂದ ಹಾದಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

    ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಮಾತನಾಡಿ “ಪ್ರೊ. ಅಭಯರು ಕನ್ನಡ ವಿಭಾಗವನ್ನು ಬಹಳ ಪ್ರೀತಿಯಿಂದ ನೋಡುತ್ತಿದ್ದರು. ಅವರು ಕರಾವಳಿಯ ತುಳು ಜಾನಪದ ಲೋಕದ ಏಕೈಕ ಶ್ರೇಷ್ಠ ವಿದ್ವಾಂಸರಾಗಿದ್ದಾರೆ” ಎಂದರು.

    ಕಾರ್ಯಕ್ರಮದಲ್ಲಿ ಡಾ. ಪೂವಪ್ಪ ಕಣಿಯೂರು, ಪ್ರೊ. ನಿಕೇತನ, ಡಾ. ಗಣನಾಥ ಎಕ್ಕಾರು, ಡಾ. ಎಂ.ಕೆ. ಮಾಧವ, ಡಾ. ಶ್ರೀನಿವಾಸ ಗಿಳಿಯಾರು, ಡಾ. ಗಿರಿಯಪ್ಪ, ಡಾ. ಆಶಾಲತಾ, ಡಾ. ನಿತಿನ್ ಬಾಳೆಪುಣಿ ಮೊದಲಾದವರು ಉಪಸ್ಥಿತರಿದ್ದರು. ಉಪನ್ಯಾಸಕರಾದ ಡಾ. ಯಶು ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ | ಧಾರವಾಡದ ಸೃಜನ ರಂಗಮಂದಿರದಲ್ಲಿ ‘ಪ್ರಭಾಸ’ – ಅರವಿಂದ ಕುಲಕರ್ಣಿ
    Next Article ಬೆಂಗಳೂರಿನಲ್ಲಿ ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಅವರ ಕಾರ್ಯಗಾರ
    roovari

    Add Comment Cancel Reply


    Related Posts

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026

    ‘ನ್ಯಗ್ರೋಧ’ ಜಯಲಕ್ಷ್ಮಿ ಹೆಗ್ಡೆ ನಡೆದು ಬಂದ ದಾರಿ ಕೃತಿ ಬಿಡುಗಡೆ ಸಮಾರಂಭ

    February 24, 2026

    ನಾರಿ ಚಿನ್ನಾರಿಯಿಂದ ಪದ್ಮಗಿರಿ ಕಲಾಕುಟೀರದಲ್ಲಿ ‘ಪ್ರತಿಭಾನಂದಿನಿ’ | ಫೆಬ್ರವರಿ 25

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.