Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣ ಪ್ರಶಸ್ತಿ ಪ್ರದಾನ ಸಮಾರಂಭ 2023
    News

    ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣ ಪ್ರಶಸ್ತಿ ಪ್ರದಾನ ಸಮಾರಂಭ 2023

    February 9, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    08 ಫೆಬ್ರವರಿ 2023, ಮಂಗಳೂರು: “ಇಂದು ನಾವು ಇಬ್ಬರು ವ್ಯಕ್ತಿಗಳನ್ನಲ್ಲ, ಎಸ್.ವಿ.ಪಿ.ಯವರ ಎರಡು ತತ್ವಗಳಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದ್ದೇವೆ” – ಡಾ. ಬಿ. ಎ. ವಿವೇಕ ರೈ.
    ಪ್ರೊ.ಎಸ್.ವಿ.ಪರಮೇಶ್ವರ ಭಟ್ಟ ಪ್ರತಿಷ್ಠಾನ ಮಂಗಳೂರು ಇದರ ಆಶ್ರಯದಲ್ಲಿ ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣ ಪ್ರಶಸ್ತಿ ಪ್ರದಾನ ಸಮಾರಂಭ 2023 ಸೈಂಟ್ ಅಲೋಶಿಯಸ್ ಕಾಲೇಜಿನ ಸಾನಿಧ್ಯ ಸಭಾ ಭವನದಲ್ಲಿ ಫೆ.8ರಂದು ಸಂಪನ್ನಗೊಂಡಿತು. ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಬಿ.ಎ.ವಿವೇಕ ರೈಯವರು ಅಧ್ಯಕ್ಷ ಸ್ಥಾನದಿಂದ ಮಾತನಾಡುತ್ತಾ ಇಂದು ನಾವು ಇಬ್ಬರು ವ್ಯಕ್ತಿಗಳನ್ನಲ್ಲ ಎಸ್.ವಿ.ಪಿ.ಯವರ ಎರಡು ತತ್ವಗಳನ್ನು ಪ್ರಶಸ್ತಿ ನೀಡಿ ಗೌರವಿಸಿದ್ದೇವೆ ಎಂದರು.”ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ” ಎಂಬ ಮಹಾ ಸಂಶೋಧನಾ ಗ್ರಂಥವನ್ನು ಬರೆದು ಬುದ್ಧನ ಅಹಿಂಸಾ ತತ್ವದ ಕಡೆ ಬೆಳಕು ಚೆಲ್ಲಿದ ತಾಳ್ತಜೆಯವರು ಒಂದು ಕಡೆ, ವಚನ ಸಾಹಿತ್ಯದ ಬಗ್ಗೆ ಸಾಕಷ್ಟು ಕೃಷಿ ಮಾಡಿ ಕಾಯಕ ತತ್ವದ ಕಡೆಗೆ ಒತ್ತು ಕೊಟ್ಟ ಡಾ.ಒ.ಎಲ್.ನಾಗಭೂಷಣ ಸ್ವಾಮಿ ಇನ್ನೊಂದು ಕಡೆ. ಬುದ್ಧ ತತ್ವ ಮತ್ತು ಬಸವ ತತ್ವ ಎರಡನ್ನೂ ಎಸ್.ವಿ. ಪಿ.ಯವರು ತನ್ನ ಜೀವನದಲ್ಲಿ ಅಳವಡಿಸಿಕೊಂಡವರು.” ಎಂದು ತನ್ನ ಗುರುಗಳಾದ ಎಸ್.ವಿ.ಪರಮೇಶ್ವರ ಭಟ್ಟರ ಶಿಷ್ಯರಾದ ,ಅವರನ್ನು ಅತೀ ಹತ್ತಿರದಿಂದ ಬಲ್ಲ ,ಅವರೊಂದಿಗೆ ಕನ್ನಡದ ಸೇವೆ ಮಾಡಿದ ಡಾ ಬಿ.ಎ.ವಿವೇಕ ರೈಯರು ಹೇಳಿದರು.ವಿಶ್ರಾಂತ ಕನ್ನಡ ಪ್ರಾಧ್ಯಾಕರೂ ಮುಂಬಯಿ ವಿಶ್ವ ವಿದ್ಯಾನಿಲಯದ ಹಿರಿಯ ಸಂಶೋಧಕರೂ ಆದ ಡಾ. ತಾಳ್ತಜೆ ವಸಂತ ಕುಮಾರ್ ಇವರಿಗೆ 2023 ನೇ ಸಾಲಿನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇವರನ್ನು ವಿಶ್ರಾಂತ ಕುಲಪತಿಗಳು ಮತ್ತು ನಿವೃತ್ತ ಕನ್ನಡ ಪ್ರಾಧ್ಯಾಕರಾದ ಡಾ. ಕೆ.ಚಿನ್ನಪ್ಪ ಗೌಡ ಅಭಿನಂದಿಸಿದರು. 2023ನೆ ಸಾಲಿನ ಪ್ರಶಸ್ತಿಯನ್ನು ಖ್ಯಾತ ವಿಮರ್ಶಕರು,ಮತ್ತು ಅನುವಾದಕರೂ ಆದ ಡಾ. ಒ.ಎಲ್. ನಾಗಭೂಷಣ ಸ್ವಾಮಿಯವರಿಗೆ ನೀಡಿ ಗೌರವಿಸಲಾಯಿತು. ಡಾ ಸತ್ಯನಾರಾಯಣ ಮಲ್ಲಿ ಪಟ್ಟಣ ನಿವೃತ್ತ ಪ್ರಾಂಶುಪಾಲರು ಮತ್ತು ವಿಶ್ರಾಂತ ಕನ್ನಡ ಪ್ರದ್ಯಪಕರು ನಾಗಭೂಷಣ ಸ್ವಾಮಿಯವರನ್ನು ಅಭಿನಂದಿಸಿ ಮಾತನಾಡಿದರು. ಸೈಂಟ್ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಪ್ರವೀಣ್ ಮಾರ್ಟಿಸ್ ಎಸ್. ಜೆ. ಶುಭಾಂಶನೆಗೈದರು. ಎಸ್. ವಿ. ಪಿ. ಯವರ ಪುತ್ರ ಶ್ರೀ ಎಸ್. ಪಿ.ರಾಮಚಂದ್ರ ಬೆಂಗಳೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ನಾ.ದ.ಶೆಟ್ಟಿ ಮತ್ತು ಡಾ. ನರಸಿಂಹ ಮೂರ್ತಿಯವರು ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಅಂತರಂಗ ಬಹಿರಂಗ ತಂಡದ ‘ಹಿಂಗ್ ಮಾಡಿದ್ರೆ ಹೇಗೆ?’ – ನಾಟಕ ವಿಮರ್ಶೆ
    Next Article ಚಿಕ್ಕ, ಚೊಕ್ಕ, ಶುದ್ಧ ಹಾಸ್ಯಭರಿತ ನಾಟಕ ಸೀತು ಮದುವೆ – ಅನಿಸಿಕೆ
    roovari

    Add Comment Cancel Reply


    Related Posts

    “Sri Krishna Leela Amrutham” Transcends audiences at Bharat Nritya Utsav 2025, Chennai

    February 5, 2025

    ಮಂಗಳೂರಿನಲ್ಲಿ ಗಾಯಕಿ ಸೂರ್ಯಗಾಯತ್ರಿ ‘ರಾಮಂ ಭಜೇ’ | ಜ. 12ರಂದು

    January 11, 2025

    ಮಂಗಳೂರಿನ ಪುರಭವನದಲ್ಲಿ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ | ಜನವರಿ 04

    December 31, 2024

    ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ  

    October 21, 2024

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.