Subscribe to Updates

    Get the latest creative news from FooBar about art, design and business.

    What's Hot

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನೀರ್ಮಜೆ ಪುಂಡೂರು ಮನೆಯಂಗಳದಲ್ಲಿ ಪುಣಿಂಚಿತ್ತಾಯ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ಕೃತಿಬಿಡುಗಡೆ
    Awards

    ನೀರ್ಮಜೆ ಪುಂಡೂರು ಮನೆಯಂಗಳದಲ್ಲಿ ಪುಣಿಂಚಿತ್ತಾಯ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ಕೃತಿಬಿಡುಗಡೆ

    January 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಲೆ, ಸಾಹಿತ್ಯ, ಸಂಸ್ಕೃತಿಗೆ ಮಹೋನ್ನತ ಕೊಡುಗೆಯಿತ್ತು ಅಮರರಾದ ಪುಂಡೂರು ದಾಮೋದರ ಪುಣಿಂಚಿತ್ತಾಯ ಪ್ರತಿಷ್ಠಾನದ ನೇತೃತ್ವದಲ್ಲಿ ಸಾಹಿತ್ಯ, ಕಲೋಪಾಸಕ ಕೀರ್ತಿಶೇಷ ರಾಮಚಂದ್ರ ಪುಣಿಂಚಿತ್ತಾಯರ ಪ್ರಥಮ ವರ್ಷಾಂತಿಕ ಸಂಸ್ಮರಣೆಯೊಂದಿಗೆ ನಾಡಿನ ಹಿರಿಯ ಕವಿ, ಕಲಾಸಾಹಿತ್ಯ ಚಿಂತಕ, ಅರ್ಥದಾರಿ ಡಾ.ರಮಾನಂದ ಬನಾರಿ ಅವರಿಗೆ ದಂಪತಿ ಸಹಿತ ಪುಂಡೂರು ದಾಮೋದರ ಪುಣಿಂಚಿತ್ತಾಯ ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 18-01-2024ರಂದು ನಡೆಯಿತು.

    ಪುಂಡೂರು ನೀರ್ಮಜೆಯ “ಶ್ರೀ ರಂಜಿನಿ” ಮನೆಯಂಗಳದಲ್ಲಿ ತಂತ್ರಿ ಉಳಿಯ ವಿಷ್ಣು ಆಸ್ರ ಇವರ ಅಧ್ಯಕ್ಷತೆ ಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಉದ್ಘಾಟಿಸಿ, ದಿ.ರಾಮಚಂದ್ರ ಪುಣಿಂಚಿತ್ತಾಯರು ರಚಿಸಿದ “ಭಕ್ತಿ ಭಾವ ಯಾನ” ಎಂಬ ಭಕ್ತಿಗೀತೆಗಳ ಕೃತಿ ಬಿಡುಗಡೆಗೈದು ಆಶೀರ್ವಚನವಿತ್ತರು. ನೂತನ ಕೃತಿಗೆ ಮುನ್ನುಡಿ ಬರೆದ ಡಾ. ಬೇ.ಸೀ. ಗೋಪಾಲಕೃಷ್ಣ ಭಟ್ ಕೃತಿ ಪರಿಚಯ ಮಾಡಿದರು.

    ವಿದ್ವಾಂಸ ಡಾ. ಎಂ. ಪ್ರಭಾಕರ ಜೋಷಿ ಅತಿಥಿಯಾಗಿ ಶುಭಾಶಂಸನೆಗೈದು “ಪುಂಡೂರು ಮನೆತನದ ಕಲಾ,ಸಾಹಿತ್ಯ, ಸಾಂಸ್ಕೃತಿಕ ಕೊಡುಗೆಯಲ್ಲಿ ಗಡಿನಾಡಿನ ಇತಿಹಾಸವೇ ಹುದುಗಿದೆ. ಅದರ ಅಧ್ಯಯನ ನಡೆಯಬೇಕು ಎಂದರು.” ಇದೇ ಸಂದರ್ಭದಲ್ಲಿ ಪ್ರತಿಷ್ಠಾನದ ಹಿರಿಯ ಸದಸ್ಯ ಶ್ರೀಪತಿ .ಟಿ ಅವರನ್ನು ಗೌರವಿಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಪುರುಷೋತ್ತಮ ಪುಣಿಂಚಿತ್ತಾಯ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸ್ನೇಹಲತಾ ಅಮ್ಮಣ್ಣಾಯ ಮತ್ತು ಸೌಮ್ಯ ಸರಸ್ವತಿ ಪ್ರಾರ್ಥನೆಯನ್ನು ಹಾಡಿ, ಗುರುರಂಜನ್ ಪುಣಿಂಚಿತ್ತಾಯ ಸನ್ಮಾನ ಪತ್ರ ವಾಚಿಸಿ, ಸತ್ಯಮೂರ್ತಿ ಮಂಗಲ್ಪಾಡಿ ಕಾರ್ಯಕ್ರಮ ನಿರೂಪಿಸಿ, ವಾಮದೇವ ಪುಣಿಂಚಿತ್ತಾಯ ವಂದಿಸಿದರು.

    ಸಂಸ್ಮರಣೆಯ ಅಂಗವಾಗಿ ಹಿರಿಯ ಕಲಾವಿದರು ಪಾಲ್ಗೊಂಡ “ಕರ್ಮಬಂಧ” ತಾಳಮದ್ದಳೆ ನಡೆಯಿತು. ಅರ್ಥಗಾರಿಕೆಯಲ್ಲಿ ಡಾ.ಎಂ.ಪ್ರಭಾಕರ ಜೋಷಿ, ಡಾ. ರಮಾನಂದ ಬನಾರಿ, ಶ್ರೀಕರ ಭಟ್ ಮರಾಠೆ ಭಾಗವಹಿಸಿ ಮಾತಿನ ಮಂಟಪ ಕಟ್ಟಿದರು. ಹಿಮ್ಮೇಳದಲ್ಲಿ ಭಾಗವತರಾಗಿ ದಿನೇಶ ಅಮ್ಮಣ್ಣಾಯ ಹಾಗೂ ಚಂಡೆ,ಮದ್ದಳೆಯಲ್ಲಿ ಮನೋಜ್ಞ ಭಾಗವತಿಕೆಯಲ್ಲಿ ನಡೆದ ಕೂಟದ ಹಿಮ್ಮೇಳದಲ್ಲಿ ಲಕ್ಷೀಶ ಅಮ್ಮಣ್ಣಾಯ, ಅಡೂರು ಮೋಹನ ಸರಳಾಯ ಭಾಗವಹಿಸಿದರು.4

    Share. Facebook Twitter Pinterest LinkedIn Tumblr WhatsApp Email
    Previous Articleಶಿವಮೊಗ್ಗದ ಕರ್ನಾಟಕ ಸಂಘದಿಂದ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    Next Article ಉಡುಪಿಯ ಬಡಗುಪೇಟೆಯಲ್ಲಿ ಉದ್ಘಾಟನೆಗೊಂಡ ‘ಜನಪದ’ ಕಾರ್ಯಾಗಾರ
    roovari

    Add Comment Cancel Reply


    Related Posts

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಮೈಸೂರಿನಲ್ಲಿ ಸಿತಾರ್ ವಾದನ, ಪುಸ್ತಕ ಲೋಕಾರ್ಪಣೆ ಮತ್ತು ಸಿತಾರ್ ತರಗತಿಗಳ ಪ್ರಾರಂಭೋತ್ಸವ | ಮೇ 31

    May 30, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.