Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಪುಣ್ಯನೆಲ ಪೆರಣಂಕಿಲ’ ಭಕ್ತಿ ಕರಂಡಿಕೆ ಬಿಡುಗಡೆ
    Music

    ‘ಪುಣ್ಯನೆಲ ಪೆರಣಂಕಿಲ’ ಭಕ್ತಿ ಕರಂಡಿಕೆ ಬಿಡುಗಡೆ

    May 24, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ: ಉಡುಪಿ ಜಿಲ್ಲೆಯ ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಾಲಯದಲ್ಲಿ ಮೇ 21ರಂದು ಜರಗಿದ ನೂತನ ಗರ್ಭಗುಡಿಯ ಷಢಾಧಾರ, ನಿಧಿ ಕುಂಭ ಪ್ರತಿಷ್ಠೆ ಮತ್ತು ಗರ್ಭನ್ಯಾಸ ಕಾರ್ಯಕ್ರಮದಲ್ಲಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವೇದಮೂರ್ತಿ ಪೆರ್ಣಂಕಿಲ ಹರಿದಾಸ ಭಟ್ ಮುಂಬೈ ಅವರ ಸಂಪೂರ್ಣ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ 8 ಹಾಡುಗಳ ‘ಪುಣ್ಯನೆಲ ಪೆರಣಂಕಿಲ’ ತುಳು-ಕನ್ನಡ ಭಕ್ತಿಗೀತಾ ಸಂಗಮದ ಧ್ವನಿ ಕರಂಡಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು “ಶ್ರೀ ಮಹಾಲಿಂಗೇಶ್ವರ ಮತ್ತು ಉದ್ಭವ ಗಣಪತಿಯ ಸಾನಿಧ್ಯವಿರುವ ಪೆರ್ಣಂಕಿಲ ಕ್ಷೇತ್ರವು ಅತ್ಯಂತ ಪುರಾತನವಾಗಿದ್ದು ಅದರ ಮಹಿಮೆಯನ್ನು ಎಲ್ಲರೂ ತಿಳಿಯುವಂತಾಗಬೇಕು. ಅದಕ್ಕಾಗಿ ಗೀತಾ ಸಾಹಿತ್ಯವನ್ನು ರಚಿಸಿ ನಾಡಿನ ಶ್ರೇಷ್ಠ ಸಂಗೀತಜ್ಞರ ಧ್ವನಿಯಲ್ಲಿ ಭಕ್ತಿ ಕರಂಡಿಕೆಯನ್ನು ಸಿದ್ಧಗೊಳಿಸಿರುವುದು ಶ್ಲಾಘನೀಯ. ಇದರಿಂದ ಕ್ಷೇತ್ರದ ಪುರಾಣ-ಇತಿಹಾಸಗಳು ಜನಮಾನಸಕ್ಕೆ ತಲುಪಲಿ” ಎಂದು ಹೇಳಿದ್ದಾರೆ.

    ಸಮಾರಂಭದಲ್ಲಿ 2 ತುಳು ಹಾಗೂ 6 ಕನ್ನಡ ಹಾಡುಗಳ ಭಕ್ತಿಗೀತಾ ಸಾಹಿತ್ಯವನ್ನು ರಚಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಕವಿ – ಸಾಹಿತಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಸಮಗ್ರ ಯೋಜನೆಯ ನೇತೃತ್ವ ವಹಿಸಿದ ಮುಂಬೈ ಕಲಾ ಸೌರಭ ಸಂಗೀತ ಸಂಸ್ಥೆಯ ನಿರ್ದೇಶಕ, ಗಾಯಕ ಪದ್ಮನಾಭ ಸಸಿಹಿತ್ಲು ಅವರನ್ನು ಪೇಟ ತೊಡಿಸಿ, ಶಾಲು-ಹಾರ ಮತ್ತು ಫಲ ಮಂತ್ರಾಕ್ಷತೆ ನೀಡಿ ಸ್ವಾಮೀಜಿ ಸನ್ಮಾನಿಸಿದರು. ಭಕ್ತಿ ಸಾಹಿತ್ಯಕ್ಕೆ ಕಂಠದಾನ ನೀಡಿದ ಪ್ರಸಿದ್ಧ ಗಾಯಕರಾದ ವಿದ್ಯಾಭೂಷಣ ಬೆಂಗಳೂರು, ಎಂ.ಡಿ. ಪಲ್ಲವಿ, ಸುಪ್ರಿಯಾ ರಘುನಂದನ್, ಶ್ರಾವ್ಯ ಆಚಾರ್, ಶ್ರದ್ಧಾ ವಿನಯ್ ಮುಂಬಯಿ ಹಾಗೂ ರಾಗ ಸಂಯೋಜನೆ ಮಾಡಿದ ಬಿ.ವಿ. ಶ್ರೀನಿವಾಸ್ ಬೆಂಗಳೂರು ಮತ್ತು ತೋನ್ಸೆ ಪುಷ್ಕಳ ಕುಮಾರ್ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಸಂಗೀತದಲ್ಲಿ ಸಹಕರಿಸಿದ ಬೆಂಗಳೂರಿನ ಗಿಟಾರ್ ಶ್ರೀ ಶ್ರೀನಿವಾಸ ಆಚಾರ್ ಮತ್ತು ಬಿ.ಎಸ್. ವೇಣುಗೋಪಾಲ ರಾಜ್ ಅವರನ್ನು ಗೌರವಿಸಲಾಯಿತು.

    ಯೋಜನೆಯ ಪ್ರಾಯೋಜಕರು ಮತ್ತು ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ವಿದ್ವಾನ್ ಪೆರ್ಣಂಕಿಲ ಹರಿದಾಸ ಭಟ್ ಸ್ವಾಗತಿಸಿ ಪ್ರಸ್ತಾವನೆಗೈದರು. ಶ್ರೀ ಪೇಜಾವರ ಅಧೋಕ್ಷಜ ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು. ಗೌರವ ಪ್ರಧಾನ ಕಾರ್ಯದರ್ಶಿ ಶ್ರೀಶ ನಾಯಕ್ ವಂದಿಸಿದರು. ಶಿಕ್ಷಕ ಉಮೇಶ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

    ಕಾರ್ಯಕ್ರಮದ ಅಂಗವಾಗಿ ಮುಂಬಯಿಯ ಅಮಿತ ಕಲಾನಿಕೇತನ ತಂಡದಿಂದ ‘ನೃತ್ಯಾರ್ಪಣ’ ಜರಗಿತು. ಮುಂಬಯಿಯ ಅಮಿತ ಕಲಾಮಂದಿರದ ನಿರ್ದೇಶಕಿ ಅಮಿತಾ ಜತಿನ್ ಅವರು ‘ಪುಣ್ಯನೆಲ ಪೆರ್ಣಂಕಿಲ’ ದ್ವನಿ ಸುರುಳಿಯ ಎಲ್ಲಾ ಹಾಡುಗಳಿಗೆ ನೃತ್ಯ ಸಂಯೋಜಿಸಿ ಪ್ರದರ್ಶಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | “ದಿವ್ಯ ಗಾನಶ್ರೀ” – ದಿವ್ಯಶ್ರೀ ಭಟ್ ಪುತ್ತಿಗೆ
    Next Article ಕಲಾಕುಂಚದಿಂದ ವ್ಯಂಗ್ಯಚಿತ್ರ ರಚನಾ ತರಬೇತಿ ಶಿಬಿರ
    roovari

    Add Comment Cancel Reply


    Related Posts

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಕೊಡಗು ಕಲಾವಿದರ ಸಂಘದಿಂದ ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ

    May 24, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.