Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರದಲ್ಲಿ ‘ವರ್ಷ ಸಂಭ್ರಮ-19’
    Bharathanatya

    ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರದಲ್ಲಿ ‘ವರ್ಷ ಸಂಭ್ರಮ-19’

    November 14, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಬಪ್ಪಳಿಗೆ ಜೈನ ಭವನದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರವು ದಿನಾಂಕ 05-11-2023ರಂದು ಏರ್ಪಡಿಸಿದ ‘ವರ್ಷ ಸಂಭ್ರಮ-19’ ಕಾರ್ಯಕ್ರಮಕ್ಕೆ ಮಂಗಳೂರು ಕೊಲ್ಯ ನಾಟ್ಯ ನಿಕೇತನದ ನೃತ್ಯಗುರು, ಶಾಂತಲಾ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಉಳ್ಳಾಲ ಮೋಹನ ಕುಮಾರ್ ಇವರು ಚಾಲನೆ ನೀಡಿ ಮಾತನಾಡುತ್ತಾ “ಸಂಸ್ಕೃತಿ, ಪರಂಪರೆ ಉಳಿವಿಗೆ ಸನಾತನ ನೃತ್ಯದ ಸಂಪ್ರದಾಯ ಉಳಿಯಬೇಕು. ಈ ನಿಟ್ಟಿನಲ್ಲಿ ಶಾಸ್ತ್ರೀಯ ನೃತ್ಯ ತರಗತಿಗಳನ್ನು ನಡೆಸುವ ಮೂಲಕ ಸಾಕಷ್ಟು ಶ್ರಮ ಪಡುತ್ತೇವೆ. ಇಂತಹ ನೃತ್ಯವನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ಇನ್ನಷ್ಟು ನೃತ್ಯಗುರುಗಳನ್ನು ತಯಾರು ಮಾಡಬೇಕಾಗಿದೆ” ಎಂದು ಹೇಳಿದರು.

    ಮುಖ್ಯ ಅತಿಥಿಯಾಗಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ, “ಗುರು-ಶಿಷ್ಯರ ಸಂಬಂಧ ಹೇಗೆ ಇರಬೇಕು ಎಂಬುದಕ್ಕೆ ಈ ವೇದಿಕೆ ಸಾಕ್ಷಿಯಾಗಿದೆ. ಸಂಸ್ಕೃತಿ ಪೋಷಣೆಯ ಇಂತಹ ಕಲೆಯನ್ನು ಮಕ್ಕಳು ಬೆಳೆಸಿಕೊಳ್ಳಬೇಕು” ಎಂದು ಆಶಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ‘ಗ್ರಾಮೀಣ ಪ್ರದೇಶದ ಅನೇಕ ಪ್ರತಿಭೆಗಳಿಗೆ ನೃತ್ಯೋಪಾಸನಾ ಕಲಾ ಕೇಂದ್ರ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ” ಎಂದರು. ಈ ಸಂದರ್ಭ ವೀರಮಂಗಲ ಶ್ರೀಕೃಷ್ಣ ಕಲಾಕೇಂದ್ರದ ನೃತ್ಯಗುರು ವಿದ್ವಾನ್ ಗೋಪಾಲಕೃಷ್ಣ ಕೆ. ಅವರಿಗೆ ನೃತ್ಯೋಪಾಸನಾ ಗೌರವ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಅವರು, “ಕಷ್ಟಪಟ್ಟು ಕಲಿತ ಕಲಾ ವಿದ್ಯೆಯನ್ನು ಯಾವುದೇ ಕಾರಣಕ್ಕೂ ಬಿಡಬೇಡಿ” ಎಂದು ಹೇಳಿದರು.

    ಇದೇ ವೇಳೆ ನೃತ್ಯಗುರುಗಳಾದ ವಿದ್ವಾನ್‌ ಉಳ್ಳಾಲ ಮೋಹನ ಕುಮಾರ್ ಹಾಗೂ ಅವರ ಪುತ್ರಿ ವಿದುಷಿ ರಾಜಶ್ರೀ ಉಳ್ಳಾಲ್ ಅವರನ್ನು ವಿದುಷಿ ಶಾಲಿನಿ ಆತ್ಮಭೂಷಣ್ ಗೌರವಿಸಿದರು. ಕಲಾ ಕೇಂದ್ರದ ವಿದ್ಯಾರ್ಥಿಗಳು ವಿದುಷಿ ಶಾಲಿನಿ ಆತ್ಮಭೂಷಣ್ ಅವರಿಗೆ ಗುರು ಕಾಣಿಕೆ ಸಮರ್ಪಿಸಿದರು. ನೃತ್ಯ ಪೋಷಣೆ ಕಾರ್ಯಕ್ರಮದಡಿ ಉಚಿತ ನೃತ್ಯ ಶಿಕ್ಷಣಕ್ಕೆ ಬಡ ವಿದ್ಯಾರ್ಥಿಗಳ ದತ್ತು ಸ್ವೀಕರಿಸುವ ಕಾರ್ಯಕ್ರಮದಡಿ ಮೂವರಿಗೆ ನೃತ್ಯ ಪೋಷಣೆ ಸಮರ್ಪಿಸಲಾಯಿತು. ಶೃತಿ ಸ್ವಾಗತಿಸಿ, ಮಮತಾ ವಂದಿಸಿ, ಉಪನ್ಯಾಸಕಿ ಡಾ. ವಿಜಯಾ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು.

    ವರ್ಷ ಸಂಭ್ರಮ ಕಾರ್ಯಕ್ರಮದಲ್ಲಿ ಕಲಾ ಕೇಂದ್ರದ ಪುತ್ತೂರು ಹಾಗೂ ಉಪ್ಪಿನಂಗಡಿ ಶಾಖೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನಗೊಂಡಿತು. ಹಿಮ್ಮೇಳದಲ್ಲಿ ನಟುವಾಂಗ ವಿದುಷಿ ಶಾಲಿನಿ ಆತ್ಮಭೂಷಣ್, ಹಾಡುಗಾರಿಕೆಯಲ್ಲಿ ವಿದ್ವಾನ್ ಕೃಷ್ಣಾಚಾರ್ ಪಾಣೆಮಂಗಳೂರು ಹಾಗೂ ವಸಂತ ಕುಮಾರ್ ಗೋಸಾಡ, ಮೃದಂಗದಲ್ಲಿ ವಿದ್ವಾನ್ ಗೀತೇಶ್‌ ನೀಲೇಶ್ವರ, ಕೊಳಲಿನಲ್ಲಿ ವಿದ್ವಾನ್ ರಾಜಗೋಪಾಲ್‌ ಕಾಞಂಗಾಡ್ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleರತ್ನವರ್ಮ ಹೆಗ್ಗಡೆ ಪ್ರಶಸ್ತಿಗೆ ಅಪ್ರಕಟಿತ ತುಳು ನಾಟಕ ಹಸ್ತಪ್ರತಿ ಆಹ್ವಾನ | 2024ರ ಜನವರಿ 10 ಕೊನೆಯ ದಿನ
    Next Article ಮಲ್ಪೆ ವಾಸುದೇವ ಸಾಮಗ ಸಂಸ್ಮರಣೆಯಲ್ಲಿ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ 
    roovari

    Add Comment Cancel Reply


    Related Posts

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಮೂವತ್ತರ ಸಂಭ್ರಮದ ಕಾರ್ಯಕ್ರಮದ ಉದ್ಘಾಟನೆ

    July 5, 2025

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.