Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ಕಾಂಚನದಲ್ಲಿ ಸಂಗೀತ ಕಲಾ ಶಾಲೆ ಲೋಕಾರ್ಪಣೆ | ಫೆಬ್ರುವರಿ 05ರಿಂದ 07

    February 2, 2026

    ಕಟೀಲಿನ ‘ಚಿತ್ರಕೂಟ’ದಲ್ಲಿ ಭಾಗವಹಿಸಲು ಚಿತ್ರಕಲಾವಿದರಿಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 2, 2026

    ಉಡುಪಿಯಲ್ಲಿ ಶ್ರೀ ಪುರಂದರದಾಸರು ಹಾಗೂ ಸಂಗೀತ ತ್ರಿಮೂರ್ತಿ ಉತ್ಸವ -2026 | ಫೆಬ್ರವರಿ 06ರಿಂದ 08

    February 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರದಲ್ಲಿ ‘ವರ್ಷ ಸಂಭ್ರಮ-19’
    Bharathanatya

    ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರದಲ್ಲಿ ‘ವರ್ಷ ಸಂಭ್ರಮ-19’

    November 14, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಬಪ್ಪಳಿಗೆ ಜೈನ ಭವನದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರವು ದಿನಾಂಕ 05-11-2023ರಂದು ಏರ್ಪಡಿಸಿದ ‘ವರ್ಷ ಸಂಭ್ರಮ-19’ ಕಾರ್ಯಕ್ರಮಕ್ಕೆ ಮಂಗಳೂರು ಕೊಲ್ಯ ನಾಟ್ಯ ನಿಕೇತನದ ನೃತ್ಯಗುರು, ಶಾಂತಲಾ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಉಳ್ಳಾಲ ಮೋಹನ ಕುಮಾರ್ ಇವರು ಚಾಲನೆ ನೀಡಿ ಮಾತನಾಡುತ್ತಾ “ಸಂಸ್ಕೃತಿ, ಪರಂಪರೆ ಉಳಿವಿಗೆ ಸನಾತನ ನೃತ್ಯದ ಸಂಪ್ರದಾಯ ಉಳಿಯಬೇಕು. ಈ ನಿಟ್ಟಿನಲ್ಲಿ ಶಾಸ್ತ್ರೀಯ ನೃತ್ಯ ತರಗತಿಗಳನ್ನು ನಡೆಸುವ ಮೂಲಕ ಸಾಕಷ್ಟು ಶ್ರಮ ಪಡುತ್ತೇವೆ. ಇಂತಹ ನೃತ್ಯವನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ಇನ್ನಷ್ಟು ನೃತ್ಯಗುರುಗಳನ್ನು ತಯಾರು ಮಾಡಬೇಕಾಗಿದೆ” ಎಂದು ಹೇಳಿದರು.

    ಮುಖ್ಯ ಅತಿಥಿಯಾಗಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ, “ಗುರು-ಶಿಷ್ಯರ ಸಂಬಂಧ ಹೇಗೆ ಇರಬೇಕು ಎಂಬುದಕ್ಕೆ ಈ ವೇದಿಕೆ ಸಾಕ್ಷಿಯಾಗಿದೆ. ಸಂಸ್ಕೃತಿ ಪೋಷಣೆಯ ಇಂತಹ ಕಲೆಯನ್ನು ಮಕ್ಕಳು ಬೆಳೆಸಿಕೊಳ್ಳಬೇಕು” ಎಂದು ಆಶಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ‘ಗ್ರಾಮೀಣ ಪ್ರದೇಶದ ಅನೇಕ ಪ್ರತಿಭೆಗಳಿಗೆ ನೃತ್ಯೋಪಾಸನಾ ಕಲಾ ಕೇಂದ್ರ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ” ಎಂದರು. ಈ ಸಂದರ್ಭ ವೀರಮಂಗಲ ಶ್ರೀಕೃಷ್ಣ ಕಲಾಕೇಂದ್ರದ ನೃತ್ಯಗುರು ವಿದ್ವಾನ್ ಗೋಪಾಲಕೃಷ್ಣ ಕೆ. ಅವರಿಗೆ ನೃತ್ಯೋಪಾಸನಾ ಗೌರವ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಅವರು, “ಕಷ್ಟಪಟ್ಟು ಕಲಿತ ಕಲಾ ವಿದ್ಯೆಯನ್ನು ಯಾವುದೇ ಕಾರಣಕ್ಕೂ ಬಿಡಬೇಡಿ” ಎಂದು ಹೇಳಿದರು.

    ಇದೇ ವೇಳೆ ನೃತ್ಯಗುರುಗಳಾದ ವಿದ್ವಾನ್‌ ಉಳ್ಳಾಲ ಮೋಹನ ಕುಮಾರ್ ಹಾಗೂ ಅವರ ಪುತ್ರಿ ವಿದುಷಿ ರಾಜಶ್ರೀ ಉಳ್ಳಾಲ್ ಅವರನ್ನು ವಿದುಷಿ ಶಾಲಿನಿ ಆತ್ಮಭೂಷಣ್ ಗೌರವಿಸಿದರು. ಕಲಾ ಕೇಂದ್ರದ ವಿದ್ಯಾರ್ಥಿಗಳು ವಿದುಷಿ ಶಾಲಿನಿ ಆತ್ಮಭೂಷಣ್ ಅವರಿಗೆ ಗುರು ಕಾಣಿಕೆ ಸಮರ್ಪಿಸಿದರು. ನೃತ್ಯ ಪೋಷಣೆ ಕಾರ್ಯಕ್ರಮದಡಿ ಉಚಿತ ನೃತ್ಯ ಶಿಕ್ಷಣಕ್ಕೆ ಬಡ ವಿದ್ಯಾರ್ಥಿಗಳ ದತ್ತು ಸ್ವೀಕರಿಸುವ ಕಾರ್ಯಕ್ರಮದಡಿ ಮೂವರಿಗೆ ನೃತ್ಯ ಪೋಷಣೆ ಸಮರ್ಪಿಸಲಾಯಿತು. ಶೃತಿ ಸ್ವಾಗತಿಸಿ, ಮಮತಾ ವಂದಿಸಿ, ಉಪನ್ಯಾಸಕಿ ಡಾ. ವಿಜಯಾ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು.

    ವರ್ಷ ಸಂಭ್ರಮ ಕಾರ್ಯಕ್ರಮದಲ್ಲಿ ಕಲಾ ಕೇಂದ್ರದ ಪುತ್ತೂರು ಹಾಗೂ ಉಪ್ಪಿನಂಗಡಿ ಶಾಖೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನಗೊಂಡಿತು. ಹಿಮ್ಮೇಳದಲ್ಲಿ ನಟುವಾಂಗ ವಿದುಷಿ ಶಾಲಿನಿ ಆತ್ಮಭೂಷಣ್, ಹಾಡುಗಾರಿಕೆಯಲ್ಲಿ ವಿದ್ವಾನ್ ಕೃಷ್ಣಾಚಾರ್ ಪಾಣೆಮಂಗಳೂರು ಹಾಗೂ ವಸಂತ ಕುಮಾರ್ ಗೋಸಾಡ, ಮೃದಂಗದಲ್ಲಿ ವಿದ್ವಾನ್ ಗೀತೇಶ್‌ ನೀಲೇಶ್ವರ, ಕೊಳಲಿನಲ್ಲಿ ವಿದ್ವಾನ್ ರಾಜಗೋಪಾಲ್‌ ಕಾಞಂಗಾಡ್ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleರತ್ನವರ್ಮ ಹೆಗ್ಗಡೆ ಪ್ರಶಸ್ತಿಗೆ ಅಪ್ರಕಟಿತ ತುಳು ನಾಟಕ ಹಸ್ತಪ್ರತಿ ಆಹ್ವಾನ | 2024ರ ಜನವರಿ 10 ಕೊನೆಯ ದಿನ
    Next Article ಮಲ್ಪೆ ವಾಸುದೇವ ಸಾಮಗ ಸಂಸ್ಮರಣೆಯಲ್ಲಿ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ 
    roovari

    Add Comment Cancel Reply


    Related Posts

    ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಡಾ. ಸಾಯಿಗೀತಾ ಮತ್ತು ವಿದುಷಿ ರಾಜಶ್ರೀ ಉಳ್ಳಾಲ್‌ ಆಯ್ಕೆ

    January 31, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ದಿವ್ಯಾ ರವಿ ಇವರಿಂದ ‘ವರ್ಕಾರಿ’ ನೃತ್ಯ ಪ್ರದರ್ಶನ | ಫೆಬ್ರುವರಿ 01

    January 30, 2026

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ‘ನಾಟ್ಯಮೋಹನ ನವತ್ಯುತ್ಸಹ’ ನೃತ್ಯ ಸರಣಿ 25 | ಜನವರಿ 30

    January 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.