Subscribe to Updates

    Get the latest creative news from FooBar about art, design and business.

    What's Hot

    ಆನ್ಲೈನ್ ರಾಜ್ಯಮಟ್ಟದ ಹಿಂದೂಸ್ತಾನಿ ಸಂಗೀತ ಸ್ಪರ್ಧೆ | 03 ಆಗಸ್ಟ್

    July 4, 2025

    ಕೊಪ್ಪಳದಲ್ಲಿ ‘ವಚನ ಸಂರಕ್ಷಣಾ ದಿನಾಚರಣೆ’

    July 4, 2025

    ಕೋಲ್ಕತಾದಲ್ಲಿ ‘ಸಮ’ ಸಂಗೀತ ಕಛೇರಿ | ಜುಲೈ 06

    July 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಸಭೆ
    Literature

    ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಸಭೆ

    January 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ನಿಟ್ಟಿನಲ್ಲಿ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕಿನ ಬಳಿ ಇರುವ ಅನುರಾಗ ವಠಾರದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ನುಡಿನಮನ ಕಾರ್ಯಕ್ರಮವು ದಿನಾಂಕ 13-01-2024ರಂದು ನಡೆಯಿತು.

    “ಅಮೃತ ಸೋಮೇಶ್ವರ ಅವರು ಬಹುಭಾಷಾ ಪಂಡಿತರು, ಅವರು ಮಲಯಾಳಂ, ಕನ್ನಡ, ತುಳು ಭಾಷೆಯಲ್ಲಿ ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ, ಯಕ್ಷಗಾನ, ನಾಟಕ ರಂಗಗಳಲ್ಲಿ ಇವರ ಕೊಡುಗೆ ಅಪಾರ, ಎಳ್ಳಷ್ಟು ಕೋಪವಿಲ್ಲದ, ಸಾಧು ಧರ್ಮವನ್ನು ಅಳವಡಿಸಿಕೊಂಡ ಮಹಾನ್ ಚೇತನ ಅಮೃತ ಸೋಮೇಶ್ವರ ಅವರು” ಎಂದು ಹಿರಿಯ ಸಾಹಿತಿಗಳಾದ ಪ್ರೊ. ವಿ.ಬಿ. ಅರ್ತಿಕಜೆ ಅವರು ಅಮೃತ ಸೋಮೇಶ್ವರ ಅವರ ಜೊತೆಗಿನ ಒಡನಾಟವನ್ನು ಸ್ಮರಿಸುತ್ತಾ ಶ್ರದ್ಧಾಂಜಲಿ ಅರ್ಪಿಸಿದರು.

    ಹಿರಿಯ ಸಾಹಿತಿಗಳಾದ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಜಯಾನಂದ ಪೆರಾಜೆ, ನಲ್ಕ ಗೋಪಾಲಕೃಷ್ಣ ಆಚಾರ್, ಭಾಸ್ಕರ್ ಬಾರ್ಯ, ಹರಿನಾರಾಯಣ ಮಾಡವು, ಡಾ.ಹೆಚ್.ಜಿ. ಶ್ರೀಧರ್, ಅಬೂಬಕ್ಕರ್ ಆರ್ಲಪದವು, ಪುತ್ತೂರು ಉಮೇಶ್ ನಾಯಕ್ ಮುಂತಾದವರು ಅಮೃತ ಸೋಮೇಶ್ವರ ಅವರ ಜೊತೆಗಿನ ಒಡನಾಟದ ಅಮೃತಗಳಿಗೆಯನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಶ್ರೀ ಸುಬ್ರಹ್ಮಣ್ಯ ಶರ್ಮಾ ಅವರು ಜಿ.ಎಸ್.ಶಿವರುದ್ರಪ್ಪ ಅವರು ರಚಿಸಿದ ಹಾಡಿನ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.

    ಕರ್ನಾಟಕ ಸಂಘದ ಅಧ್ಯಕ್ಷರಾದ ಬಿ.ಪುರಂದರ ಭಟ್, ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಶ್ರೀ ಲಕ್ಷ್ಮೀಶ ತೋಳ್ಪಾಡಿ, ಹಿರಿಯ ಸಾಹಿತಿಗಳಾದ ನಾರಾಯಣ ರೈ ಕುಕ್ಕುವಳ್ಳಿ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೋಶ್ಯಾಧ್ಯಕ್ಷರಾದ ಬಿ. ಐತಪ್ಪ ನಾಯ್ಕ್ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಪದಾಧಿಕಾರಿಗಳು ಹಾಗೂ ಅಮೃತ ಸೋಮೇಶ್ವರ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.

     

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಕಲಾಗ್ರಾಮದಲ್ಲಿ ‘ವಿಷಾದ ಗಾಥೆ’ ಕವಿತೆಗಳ ಸಂಕಲನದ ಲೋಕಾರ್ಪಣೆ | ಜನವರಿ 28
    Next Article ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ಸದಸ್ಯರಿಂದ ‘ವೀರಮಣಿ ಕಾಳಗ’ ತಾಳಮದ್ದಳೆ  
    roovari

    Add Comment Cancel Reply


    Related Posts

    ಕೊಪ್ಪಳದಲ್ಲಿ ‘ವಚನ ಸಂರಕ್ಷಣಾ ದಿನಾಚರಣೆ’

    July 4, 2025

    ಕೊ. ಅ. ಉಡುಪ ಪ್ರಶಸ್ತಿಗೆ ಸಾಹಿತಿ ಡಾ. ಬಿ. ಪ್ರಭಾಕರ ಶಿಶಿಲ ಆಯ್ಕೆ

    July 4, 2025

    ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಕಮ್ಮಟ ಮತ್ತು ಪ್ರಶಸ್ತಿ ಪ್ರದಾನ | ಜುಲೈ 06

    July 4, 2025

    ಪುಸ್ತಕ ವಿಮರ್ಶೆ | ವಿಭಿನ್ನ ದೃಷ್ಟಿಯ ಪ್ರವಾಸಕಥನ ಶಿವಾನಂದ ಕರ್ಕಿಯವರ ‘ಗಿರಗಿಟ್ಲೆ’

    July 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.