Subscribe to Updates

    Get the latest creative news from FooBar about art, design and business.

    What's Hot

    ಎ.ಆರ್. ನಾರಾಯಣ ಘಟ್ಟ ಮತ್ತು ಸರೋಜಮ್ಮ ಗಾಂಧಿ ಪುದವಟ್ಟು ದತ್ತಿ ಪುರಸ್ಕಾರಕ್ಕೆ ಡಾ. ಎಚ್.ಎಸ್. ಸುರೇಶ್ ಆಯ್ಕೆ

    September 17, 2025

    ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿಗೆ ಕ.ಸಾ.ಪ. ವತಿಯಿಂದ ಪುಸ್ತಕಗಳ ಕೊಡುಗೆ

    September 17, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಂಕ್ರಾಂತಿ’ | ಸೆಪ್ಟೆಂಬರ್ 20

    September 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಶಸ್ವಿಯಾಗಿ ಸಂಪನ್ನಗೊಂಡ ತಾಲ್ಲೂಕು ಮಟ್ಟದ ಸಾಹಿತ್ಯ ಹಾಗೂ ಸಾಂಸ್ಕೃತಿಕ ರಸಪ್ರಶ್ನೆಯ ಕಾರ್ಯಕ್ರಮ
    Competition

    ಯಶಸ್ವಿಯಾಗಿ ಸಂಪನ್ನಗೊಂಡ ತಾಲ್ಲೂಕು ಮಟ್ಟದ ಸಾಹಿತ್ಯ ಹಾಗೂ ಸಾಂಸ್ಕೃತಿಕ ರಸಪ್ರಶ್ನೆಯ ಕಾರ್ಯಕ್ರಮ

    November 30, 2024Updated:January 7, 2025No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗಕ್ಕೆ ಏರ್ಪಡಿಸಿದ ಕನ್ನಡ ನಾಡು ನುಡಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ರಸಪ್ರಶ್ನೆ ಕಾರ್ಯಕ್ರಮವು ದಿನಾಂಕ 28 ನವೆಂಬರ್ 2024ರಂದು ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಪತ್ರಕರ್ತ ಡಾನ್ ರಾಮಣ್ಣ ಮಾತನಾಡಿ “ಇದೊಂದು ಉತ್ತಮವಾದ ಕಾರ್ಯಕ್ರಮ. ಇಂತಹ ಚಟುವಟಿಕೆಗಳು ಮಕ್ಕಳ ಕಲಿಕೆಗೆ ಇನ್ನಷ್ಟು ಸ್ಪೂರ್ತಿ ನೀಡಲಿದೆ.” ಎಂದು ತಿಳಿಸಿದರು.
    ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಉದ್ದೇಶ ಹಾಗೂ ಅಗತ್ಯತೆಗಳ ಬಗ್ಗೆ ಸಭೆಗೆ ತಿಳಿಸಿದ ಸಾಂಸ್ಕೃತಿಕ ವೇದಿಕೆಯ ಗೌರವ ಅಧ್ಯಕ್ಷರಾದ ಶ್ರೀಮತಿ ಸುಧೀಷ್ಣಾ ಕುಮಾರಿ “ಕನ್ನಡ ನಾಡು, ನುಡಿ, ಸಾಹಿತ್ಯವನ್ನು ಹಾಗೂ ನಮ್ಮ ಸಾಂಸ್ಕೃತಿಕ ವೈಭವವನ್ನು ಮಕ್ಕಳು ಅರಿಯುವ ಅಗತ್ಯವಿದೆ. ಮಕ್ಕಳಲ್ಲಿ ಓದುವ ಅಭ್ಯಾಸ ಕಡಿಮೆಯಾಗಿದೆ. ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ಮಕ್ಕಳನ್ನು ಓದಲು ಹಚ್ಚುತ್ತವೆ. ಇನ್ನಷ್ಟು ಜ್ಞಾನ ಸಂಪಾದಿಸುವ ಕುತೂಹಲ ಕೆರಳಿಸುವ ವಿಷಯ ಸಂಗ್ರಹಿಸುವ ಆಸಕ್ತಿಯನ್ನು ಮಕ್ಕಳಲ್ಲಿ ಮೂಡಿಸುತ್ತದೆ. ಆ ಕಾರಣದಿಂದ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ‘ ಎಂದು ತಿಳಿಸಿದರು.
    ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಗಣೇಶ ವೈ ಇವರು ಒಂದು ಪುಟ್ಟ ಕಥೆಯ ಮೂಲಕ ಮಕ್ಕಳಿಗೆ ಮಾತೃ ಭಾಷೆಯ ಮಹತ್ವದ ಕುರಿತು ಅರಿವು ಮೂಡಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರಮೇಶ್ ಶೆಟ್ಟಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಗೀತಾ ರಮೇಶ್, ನೌಕರರ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಪುಟ್ಟಪ್ಪ ಕೆ. ವಿ., ಅಕ್ಷರ ದಾಸೋಹದ ನೋಡಲ್ ಅಧಿಕಾರಿಯಾದ ಶ್ರೀ ಪ್ರವೀಣ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಇದರ ಕಾರ್ಯದರ್ಶಿಗಳಾದ ಶ್ರೀಮತಿ ಗಾಯತ್ರಿ ಶೇಷಗಿರ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು.
    ಶ್ರೀಮತಿ ಚೈತ್ರ ಅರುಣ್ ಪ್ರಾರ್ಥಿಸಿ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ತೀರ್ಥಹಳ್ಳಿಯ ಮಕ್ಕಳು ನಾಡಗೀತೆಯನ್ನು ಹಾಡಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಶ್ರೀ ಮಹಾಬಲೇಶ್ವರ ಹೆಗಡೆ ಪ್ರಾಸ್ತಾವಿಕ ನುಡಿಗಳನ್ನು ಆಡಿ ಇಂದಿನ ಕಾರ್ಯಕ್ರಮದ ರೂಪುರೇಷೆಗಳನ್ನು ಸಭೆಗೆ ತಿಳಿಸಿದರು.


    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀಮತಿ ರೇಣುಕಾ ಹೆಗಡೆ ಮಾತನಾಡಿ “ರಸಪ್ರಶ್ನೆ ಕಾರ್ಯಕ್ರಮವು ಒಂದು ಮನಸ್ಸಿನ ಕ್ರೀಡೆಯಾಗಿದೆ. ಇದನ್ನು ಆಡಲು ಜ್ಞಾನ ಮತ್ತು ಕೌಶಲ್ಯ ಎರಡೂ ಬೇಕು, ಇದರಿಂದ ಮನರಂಜನೆ ಮಾತ್ರವಲ್ಲದೆ ಜ್ಞಾನಾರ್ಜನೆಯೂ ಆಗುತ್ತದೆ. ವಿದ್ಯಾರ್ಥಿಗಳು ಹೊಸ ವಿಷಯವನ್ನು ತಿಳಿಯುವ ಕುತೂಹಲ ಮತ್ತು ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ರಸಪ್ರಶ್ನೆ ಉಪಯುಕ್ತವಾಗುತ್ತದೆ. ಮಕ್ಕಳನ್ನು ಕ್ರಿಯಾಶೀಲವಾಗಿಸಿ, ಸ್ಪರ್ಧಾಮನೋಭಾವವನ್ನು ಮೂಡಿಸಲು ಇದು ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಯೋಚಿಸಿ ಇದನ್ನು ಆಯೋಜಿಸಿದ್ದೇವೆ.” ಎಂದು ತಿಳಿಸಿದರು.
    ವೇದಿಕೆ ಕಾರ್ಯಕ್ರಮದ ನಂತರ ರಸಪ್ರಶ್ನೆಯ ಡಿಜಿಟಲ್ ಸುತ್ತು ಪ್ರಾಥಮಿಕ ವಿಭಾಗ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ವಿಭಾಗಗಳಿಗೆ ಏಕಕಾಲದಲ್ಲಿ ಪ್ರಾರಂಭಿಸಲಾಯಿತು. ಆಯ್ಕೆಯಾದ ಪ್ರತಿ ವಿಭಾಗದ ನಾಲ್ಕು ತಂಡಗಳಿಗೆ ವೇದಿಕೆಯಲ್ಲಿ ನಾಲ್ಕು ಸುತ್ತುಗಳಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿ ವಿಜೇತರಾದವರಿಗೆ ಪಾರಿತೋಷಕ, ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನಗಳನ್ನು ನೀಡಲಾಯಿತು. ಶಾಲೆಗಳಿಂದ ನೃತ್ಯ, ರೂಪಕ ಮುಂತಾದ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
    ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ಗೋಡು ಇಲ್ಲಿನ ವೈಷ್ಣವಿ ಕೆ. ಪಿ. ಮತ್ತು ಸಾನಿಧ್ಯ ಕೆ.ಡಿ. ಪ್ರಥಮ. ಕುವೆಂಪು ಮಾದರಿ ಹಿರಿಯ ಪ್ರಾಥಮಿಕ ಶಾಲೆ ತೀರ್ಥಹಳ್ಳಿಇಲ್ಲಿನ ಅನುಜ್ಞ ಆರ್. ಆರ್. ಕಶ್ಯಪ್ ಮತ್ತು ಅದ್ವಿತ್ ಗೌಡ ದ್ವಿತೀಯ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರೇಹಳ್ಳಿ ಇಲ್ಲಿನ ಅದ್ವಿತಿ ಮತ್ತು ಅಭಿಷೇಕ್ ತೃತೀಯ ಹಾಗೂ ಸಮಾಧಾನಕರ ಬಹುಮಾನವನ್ನು ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆ ತೀರ್ಥಹಳ್ಳಿ ಇಲ್ಲಿನ ಪೂರ್ವ ಕೆ. ಸಿ. ಮತ್ತು ದ್ರವ್ಯ ಪಿ. ಇವರು ಪಡೆದುಕೊಂಡರು.
    ಪ್ರೌಢಶಾಲಾ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೆಕೇರಿಯ ಏಕತಾ ಡಿ. ಎನ್. ಮತ್ತು ವಿನಯ್ ಕೆ. ಆರ್. ಪ್ರಥಮ, ಸರ್ಕಾರಿ ಪ್ರೌಢಶಾಲೆ ತೂದೂರು ಇಲ್ಲಿನ ಭಾಗ್ಯಶ್ರೀ ಟಿ. ಆರ್. ಮತ್ತು ವರ್ಷ ವೈ. ಕೆ. ದ್ವಿತೀಯ, ಸರ್ಕಾರಿ ಪ್ರೌಢಶಾಲೆ ಕನ್ನಂಗಿ ಇಲ್ಲಿನ ಅನುಪ್ ಕೆ. ಎಸ್. ಮತ್ತು ನಮಿತಾ ಹೆಚ್. ಹೆಚ್. ತೃತೀಯ ಹಾಗೂ ಸರ್ಕಾರಿ ಪ್ರೌಢಶಾಲೆ ಹುಂಚದ ಕಟ್ಟೆ ಇಲ್ಲಿನ ಅದಿತಿ ಜೀ. ಜೆ. ಮತ್ತು ಧನ್ಯ ಜಿ. ಆರ್. ಸಮಾಧಾನಕರ ಬಹುಮಾನ ಪಡೆದುಕೊಂಡಿದ್ದಾರೆ.
    ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು. ತೀರ್ಥಹಳ್ಳಿ ಇಲ್ಲಿನ ಪ್ರೀತಮ್ ಬಿ. ಪಿ. ಮತ್ತು ರಜತ್ ಜಿ. ಆರ್. ಪ್ರಥಮ, ವಾಗ್ದೇವಿ ಪಿ. ಯು. ಕಾಲೇಜು ತೀರ್ಥಹಳ್ಳಿ ಇಲ್ಲಿನ ಶ್ರೀರಕ್ಷಾ ಕೆ. ವಿ. ಮತ್ತು ದೀಪಿಕಾ ಕೆ. ರಾವ್ ದ್ವಿತೀಯ, ತುಂಗಾ ಪಿ. ಯು. ಕಾಲೇಜು ತೀರ್ಥಹಳ್ಳಿ ಇಲ್ಲಿನ ಸಂಯುಕ್ತ ಬಿ. ಆರ್. ಗೌಡ ಮತ್ತು ಮನಸ್ವಿ ಭಟ್ ತೃತೀಯ ಬಹುಮಾನ ಹಾಗೂ ಸಮಾಧಾನಕರ ಬಹುಮಾನವನ್ನು ತುಂಗಾ ಪಿಯು ಕಾಲೇಜು ತೀರ್ಥಹಳ್ಳಿ ಇಲ್ಲಿನ ಶಂಕರ್ ಹಾಗೂ ಸುರೇಶ್ ಎಸ್. ಎಸ್. ಪಡೆದುಕೊಂಡಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನಲ್ಲಿ ‘ಸಂಗೀತ ಸಮ್ಮೇಳನ 2024’ | ಡಿಸೆಂಬರ್ 2ರಿಂದ 6
    Next Article ಇಂಟಾಕ್ ಮಂಗಳೂರು ವಿಶ್ವ ಪರಂಪರೆಯ ಸಪ್ತಾಹ ‘ಮಂಗಳೂರಿನ ಕಟ್ಟೆಗಳು’ ಪ್ರದರ್ಶನದ ಉದ್ಘಾಟನೆಯೊಂದಿಗೆ ಮುಕ್ತಾಯ
    roovari

    Add Comment Cancel Reply


    Related Posts

    ಕೆ.ಪಿ.ಎಸ್. ವಿದ್ಯಾರ್ಥಿಗಳಿಗೆ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಮೊದಲ ಸ್ಥಾನ

    September 12, 2025

    ಉಡುಪಿ ತುಳು ಕೂಟದ ಹೊಸ ಕಾರ್ಯಕಾರಿ ಸಮಿತಿ ರಚನೆ

    September 12, 2025

    ತುಳು ಭವನದಲ್ಲಿ ವಚನ ಗಾಯನ ಸ್ಪರ್ಧೆ | 16 ಸೆಪ್ಟೆಂಬರ್

    September 4, 2025

    ‘ಚಿತ್ರಾ’ ನಾಟಕ ತಂಡದಿಂದ ‘ಚಿತ್ರಾ – 75’ ನಾಟಕ ಸ್ಪರ್ಧೆ | ಕೊನೆಯ ದಿನಾಂಕ ಸೆಪ್ಟೆಂಬರ್ 15

    August 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.