Subscribe to Updates

    Get the latest creative news from FooBar about art, design and business.

    What's Hot

    ಶ್ರೀನಿವಾಸ ವಾಡಪ್ಪಿಯವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧ ಲೋಕಾರ್ಪಣೆ

    January 2, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ಪುರಂದರ ಗಾನ ನರ್ತನ’ | ಜನವರಿ 03

    January 2, 2026

    ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಚಾರಸಂಕಿರಣ

    January 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಲಿಗ್ರಾಮ ಗುರುನರಸಿಂಹ ದೇವಳದಲ್ಲಿ ‘ರಾಜಾ ದ್ರುಪದ’ ಯಕ್ಷಗಾನ ಪ್ರದರ್ಶನ
    Cultural

    ಸಾಲಿಗ್ರಾಮ ಗುರುನರಸಿಂಹ ದೇವಳದಲ್ಲಿ ‘ರಾಜಾ ದ್ರುಪದ’ ಯಕ್ಷಗಾನ ಪ್ರದರ್ಶನ

    January 22, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸಾಲಿಗ್ರಾಮ ಗುರುನರಸಿಂಹ ದೇವಳದ ವಾರ್ಷಿಕ ರಥೋತ್ಸವ ದೇವರ ಅವಭೃತೋತ್ಸವದ ಅಂಗವಾಗಿ ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್ ವತಿಯಿಂದ ಯಕ್ಷ ಚಿಂತಕ ಸುಜಯೀಂದ್ರ ಹಂದೆ ಹೆಚ್. ವಿರಚಿತ “ರಾಜಾ ದ್ರುಪದ” ಯಕ್ಷಗಾನದ ಪ್ರದರ್ಶನ ದಿನಾಂಕ 17 ಜನವರಿ 2025 ರಂದು ನಡೆಯಿತು.

    ಕೋಟ ಹಂದೆ ಶ್ರೀ ಮಹಾವಿಷ್ಣು ಮಹಾಗಣಪತಿ ದೇವಾಲಯದ ನಾಗಪ್ಪಯ್ಯ ಹಂದೆ ರಂಗಮಂಟಪದಲ್ಲಿ ನಡೆದ ಈ ಕಾರ್ಯಕ್ರಮವನ್ನು ಚೆಂಡೆ ಬಾರಿಸುವ ಮೂಲಕ ಉದ್ಘಾಟಿಸಿದ ಸಾಹಿತಿ ಹಾಗೂ ಕಲಾಪೋಷಕರಾದ ಹೆಚ್. ಜನಾರ್ದನ ಹಂದೆ ಮಾತನಾಡಿ “ಕಲಾಸೇವೆ ಮಾಡುವ ಕಲಾವಿದರಿಗೆ ಹಾಗೂ ಸಂಘಟಕರಿಗೆ ಪ್ರೋತ್ಸಾಹ ನೀಡಬೇಕಾದುದು ಕಲಾಭಿಮಾನಿಗಳ ಮತ್ತು ದಾನಿಗಳ ಕರ್ತವ್ಯ. ಆಗ ಮಾತ್ರ ನಮ್ಮ ಶ್ರೀಮಂತ ಸಂಸ್ಕೃತಿಯ ಉಳಿವು ಸಾಧ್ಯ. ರಥೋತ್ಸವ ಹಾಗೂ ಅವಭೃತದ ಸಂದರ್ಭದಲ್ಲಿ ಯಕ್ಷಗಾನ ಆಯೋಜಿಸಿರುವುದರಿಂದ ಹಂದೆ ದೇವಳದ ಆಡಳಿತ ಮಂಡಳಿ ಮತ್ತು ಸಂಘಟಕರು ಅಭಿನಂದನಾರ್ಹರು” ಎಂದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಂಗಳೂರಿನ ನಿವೃತ್ತ ಬ್ಯಾಂಕ್ ಅಧಿಕಾರಿ ಹಾಗೂ ಯಕ್ಷ ಚಿಂತಕರಾದ ಡಾ. ಆನಂದ ರಾಮ ಉಪಾಧ್ಯ ಮಾತನಾಡಿ “ನೂರಾರು ವರ್ಷಗಳ ಇತಿಹಾಸದ ಯಕ್ಷಗಾನ ಕಲೆಗೆ ಕಲಾವಿದರ ಕೊಡುಗೆ ಅಪಾರ. ಅಂತೆಯೇ ಡಾ. ಕಾರಂತರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಯೋಗ್ಯವಾದ ಯಕ್ಷಗಾನ ಬಯಲಾಟ ಪ್ರಕಟಿಸಿದ ಬಳಿಕ ಹೆಚ್ಚಿನ ಜನಸ್ಪಂದನೆ ದೊರೆಯಿತು. ಆಟ, ಬಯಲಾಟ, ದಶಾವತಾರ ಆಟ, ಯಕ್ಷಗಾನ ಹೀಗೆ ಹಲವಾರು ಹೆಸರಿನಲ್ಲಿ ಪರಿಷ್ಕರಣೆಗೊಂಡು ವಿದ್ಯಾವಂತರು ಹಾಗೂ ವಿದ್ವಜ್ಜನರು ಹೆಚ್ಚು ಹೆಚ್ಚು ಕಲೆಯ ಕುರಿತು ಆಕರ್ಷಿತರಾದರು ಮತ್ತು ಕಲಾ ಕ್ಷೇತ್ರದಲ್ಲಿ ಹೆಚ್ಚಿನ ಕೃಷಿ ಮಾಡಿದರು. ಹಾಗಾಗಿ ಯಕ್ಷಗಾನಕ್ಕೆ ವಿಶ್ವ ಮಾನ್ಯತೆ ದೊರೆಯಿತು. ಇಂದು ಶಾಲಾ ಶಿಕ್ಷಣದ ಜೊತೆಗೆ ಯಕ್ಷಗಾನ ಶಿಕ್ಷಣ ನೀಡುತ್ತಿರುವುದು ಸಂತೋಷದಾಯಕ ಬೆಳವಣಿಗೆ. ಎಲ್ಲರೂ ಕಲಾವಿದರಾಗದಿದ್ದರೂ ಉತ್ತಮ ಪ್ರೇಕ್ಷಕರಾಗಿ ರೂಪುಗೊಂಡರೆ ಕಲೆಗೆ ಅದೇ ಪೂರಕ ಎಂದರು”.

    ಸಮಾರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಮತ್ತು ಕಲಾ ಪೋಷಕರಾದ ಕಾರ್ಕಡ ತಾರಾನಾಥ ಹೊಳ್ಳ ಮತ್ತು ಹಂದೆ ಶ್ರೀ ಮಹಾವಿಷ್ಣು ಮಹಾಗಣಪತಿ ದೇವಸ್ಥಾನದ ಅಧ್ಯಕ್ಷರಾದ ಅಮರ ಹಂದೆಯವರು ಉಪಸ್ಥಿತರಿದ್ದರು. ಉಪನ್ಯಾಸಕ ರಾಘವೇಂದ್ರ ತುಂಗ ಕೆ. ಕಾರ್ಯಕ್ರಮವನ್ನು ನಿರ್ವಹಿಸಿದರು.


    ಸಭಾಕಾರ್ಯಕ್ರಮದ ಬಳಿಕ ಕೋಟ ಸುದರ್ಶನ ಉರಾಳ ಇವರ ಸಂಯೋಜನೆಯಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಕಲಾವಿದರಾಗಿ ಲಂಬೋದರ ಹೆಗಡೆ, ರಾಘವೇಂದ್ರ ಹೆಗಡೆ, ಸುದೀಪ ಉರಾಳ, ಸುಜಯೀಂದ್ರ ಹಂದೆ, ತಮ್ಮಣ್ಣ ಗಾಂವ್ಕರ್, ಸಂಜೀವ ಹೆನ್ನಾಬೈಲು, ಡಾ. ಶಿವಕುಮಾರ್ ಅಲಗೋಡು, ಆದಿತ್ಯ ಹೆಗಡೆ, ನರಸಿಂಹ ತುಂಗ, ಶ್ರೀರಾಮ್ ಹೆಬ್ಬಾರ್, ಶಶಾಂಕ ಉರಾಳ, ರಾಜು ಪೂಜಾರಿ ಭಾಗವಹಿಸಿದರು.

    Cultural kannada yakshagana
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ವಿದ್ಯಾಗಣಪತಿ ದೇವಸ್ಥಾನದ ಆಶ್ರಯದಲ್ಲಿ ತಿಂಗಳ ಸರಣಿ ತಾಳಮದ್ದಳೆ
    Next Article ಕಾರ್ಕಳದ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ‘ತಾಲೂಕು ಮಟ್ಟದ ಗಮಕ ಸಮ್ಮೇಳನ’ | ಜನವರಿ 25
    roovari

    Add Comment Cancel Reply


    Related Posts

    ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ

    January 2, 2026

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    ಕವಿ, ಸಾಹಿತಿ ಯೋಗೀಶ್ ಕಾಂಚನ್ ಬೈಕಂಪಾಡಿ ನಿಧನ

    December 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.