ಉಡುಪಿ : ರಾಗ ಧನ ಉಡುಪಿ (ರಿ) ಸಂಸ್ಥೆ ಮತ್ತು ಶ್ರೀ ಎಲ್ಲೂರು ಲಕ್ಷ್ಮೀನಾರಾಯಣ ರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ (ರಿ.) ಇವರ ಸಹಯೋಗದೊಂದಿಗೆ ‘ರಾಗರತ್ನ ಮಾಲಿಕೆ- 4’ ಸರಣಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ದಿನಾಂಕ 21 ಜೂನ್ 2026ನೇ ಭಾನುವಾರ ಸಂಜೆ 4-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಸಂಜೆ ಗಂಟೆ 4-00ರಿಂದ ಚೆನ್ನೈಯ ಸ್ವರಾತ್ಮಿಕ ಶ್ರೀಕಾಂತ್ ಇವರ ಹಾಡುಗಾರಿಕೆಗೆ ವಯೋಲಿನ್ ನಲ್ಲಿ ತನ್ಮಯಿ ಉಪ್ಪಂಗಳ ಮತ್ತು ಮೃದಂಗಂನಲ್ಲಿ ಸುನಾದ ಕೃಷ್ಣ ಅಮೈ ಸಹಕರಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ತಿಳಿಸಿದ್ದಾರೆ.

