ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ 141ನೇ ಜಯಂತ್ಯುತ್ಸವ ಮತ್ತು ಶ್ರೀಮತಿ ಮಹಾಲಕ್ಷ್ಮಿ ಟಿ. ಕೃಷ್ಣರಾಜು ದತ್ತಿ, ಶ್ರೀಮತಿ ವಿ. ಗೌರಮ್ಮ ಗಂಗಾಧರಯ್ಯ ಮಕ್ಕಳ ಸಿಬ್ಬಂದಿ ಸೇವಾ ದತ್ತಿ, ಶ್ರೀಮತಿ ಎಸ್. ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 04 ಜೂನ್ 2025ರ ಮಂಗಳವಾರ ಸಂಜೆ 5-00 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಚುನಾವಣಾ ಆಯುಕ್ತರಾದ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ ಇವರು ಮಾಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಇವರ ಕುರಿತು ಹಂಪಿ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆ ವಿಶೇಷ ಉಪನ್ಯಾಸ ನೀಡಿಲಿದ್ದಾರೆ. ದತ್ತಿದಾನಿಗಳಾದ ಟಿ. ಕೃಷ್ಣರಾಜು ಮತ್ತು ಡಾ. ಎಂ.ಜಿ. ನಾಗರಾಜು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.
ಶ್ರೀಮತಿ ಮಹಾಲಕ್ಷ್ಮಿ ಟಿ. ಕೃಷ್ಣರಾಜು ಸವಿನೆನಪಿನ ದತ್ತಿ ಪುರಸ್ಕಾರವನ್ನು ಕುಮಾರಿಯರಾದ ಗಂಗಶ್ರೀ ಡಿ., ಚಿನ್ಮಯಿ ಪಿ.ಎಸ್., ಲಿಖಿತ, ಸುಶೀಲಾ ಎಸ್. ಇವರಿಗೂ ಶ್ರೀಮತಿ ವಿ. ಗೌರಮ್ಮ ಗಂಗಾಧರಯ್ಯ ಮಕ್ಕಳ ಸಿಬ್ಬಂದಿ ಸೇವಾ ಪ್ರಶಸ್ತಿಯನ್ನು 29 ವರ್ಷಗಳಿಂದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಾನ್ಯ ಅಧ್ಯಕ್ಷರ ವಾಹನ ಸೇವಕರಾಗಿ ನಿಷ್ಠಯಿಂದ ಸೇವೆ ಸಲ್ಲಿಸುತ್ತಿರುವ ಎಂ.ಟಿ. ತಿಮ್ಮಪ್ಪ ಮತ್ತು ಶ್ರೀಮತಿ ಎಸ್. ರಮಾದೇವಿ ವಿಶ್ವೇತಶ್ವರಯ್ಯ ದತ್ತಿ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷರತ್ತಿನ ಬಿ.ಎಂ.ಶ್ರೀ ಅಚ್ಚುಕೂಟದಲ್ಲಿ ಹಿರಿಯ ಬೈಂಡರ್ ಆಗಿ 25 ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಜಿ. ಸೀತಾರಾಮು ಇವರಿಗೆ ಪ್ರದಾನ ಮಾಡಲಾಗುತ್ತದೆ.