Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04
    Awards

    ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04

    June 2, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಪ್ರೌಢಶಾಲೆ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮದಿನೋತ್ಸವ ಹಾಗೂ ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಮಡಿಕೇರಿಯ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 04 ಜೂನ್ 2025ರಂದು ಬೆಳಿಗ್ಗೆ 11-00 ಗಂಟೆಗೆ ನಡೆಯಲಿದೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರು ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲೆಯ ಹಿರಿಯ ಸಾಹಿತಿಗಳಾದ ನಾಗೇಶ್ ಕಾಲೂರುರವರು ನಡೆಸಿಕೊಡಲಿದ್ದಾರೆ. ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಯ ಪ್ರಥಮ ವರ್ಷದ ಪುರಸ್ಕೃತರಾದ ಸಾಹಿತಿ ಶ್ರೀಮತಿ ಸ್ಮಿತಾ ಅಮೃತರಾಜ್ ಸಂಪಾಜೆ ಇವರಿಗೆ ಆಕಾಶವಾಣಿಯ ನಿವೃತ್ತ ಉದ್ಘೋಷಕರು, ಸಾಹಿತಿಯೂ ಆದ ಸುಬ್ರಾಯ ಸಂಪಾಜೆಯವರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

    ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 141ನೇ ಜನ್ಮದಿನೋತ್ಸವದ ಸಲುವಾಗಿ ಓರ್ವ ಹಿರಿಯ ಸಾಧಕರನ್ನು ಸನ್ಮಾನಿಸಲಾಗುತ್ತಿದ್ದೆ. ಮಡಿಕೇರಿಯ ಆಕಾಶವಾಣಿಯಲ್ಲಿ 29 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಹಲವಾರು ಉತ್ಕೃಷ್ಟ ಗ್ರಂಥಗಳನ್ನು ರಚನೆ ಮಾಡಿದ ಸಾಹಿತಿ ಸುಬ್ರಾಯ ಸಂಪಾಜೆ ಇವರನ್ನು ಗೌರವಿಸಲಾಗುತ್ತಿದೆ. ಸಾಧಕರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್ ರವರು ಸನ್ಮಾನಿಸಲಿದ್ದಾರೆ. ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕುರಿತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹ್ಮದ್ ರವರು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದತ್ತಿದಾನಿ ಮತ್ತು ಸಾಹಿತಿಯೂ ಆದ ಶ್ರೀಮತಿ ವಿಜಯ ವಿಷ್ಣು ಭಟ್, ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್. ವಿಜಯ, ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕೆ.ವಿ. ಶಶಿಕಲಾ, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷರಾದ ಶ್ರೀಮತಿ ಪುದಿಯನೆರವನ ರೇವತಿ ರಮೇಶ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ರವರು ಭಾಗವಹಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್ ರವರು ತಿಳಿಸಿದ್ದಾರೆ.

    award baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ
    Next Article ಯಶಸ್ವಿ ಕಲಾವೃಂದದಿಂದ ಗಾನ ಗಾರುಡಿಗ ದಿ. ಕಾಳಿಂಗ ನಾವಡರಿಗೆ ಗಾನ ನಮನ
    roovari

    Add Comment Cancel Reply


    Related Posts

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.