Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿಶ್ವಮಂಗಳದಲ್ಲಿ ಕ.ಸಾ.ಪ.ದಿಂದ ರಾಜ್ಯೋತ್ಸವ
    Cultural

    ವಿಶ್ವಮಂಗಳದಲ್ಲಿ ಕ.ಸಾ.ಪ.ದಿಂದ ರಾಜ್ಯೋತ್ಸವ

    November 4, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಡಿಪು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ ಮತ್ತು ವಿಶ್ವಮಂಗಳ ವಿದ್ಯಾ ಸಂಸ್ಥೆ ಕೊಣಾಜೆ ಇವುಗಳ ಸಹಯೋಗದೊಂದಿಗೆ ದಿನಾಂಕ 01 ನವೆಂಬರ್ 2024ರಂದು ಕನ್ನಡ ರಾಜ್ಯೋತ್ಸವ ಸಮಾರಂಭವು ವಿಶ್ವಮಂಗಳ ಸಭಾ ಭವನದಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದ ನಿವೃತ್ತ ಮುಖ್ಯೋಪಾಧ್ಯಾಯ ರಾಜಾರಾಮ್ ರಾವ್ ಮೀಯಪದವು “ನಮ್ಮ ಕಾಲಕ್ಕೆ ಅಗತ್ಯವಾದ ಹೊಸ ಶಬ್ದಗಳನ್ನು ರಚಿಸುವುದು, ಇಂಗ್ಲೀಷ್ ಮತ್ತಿತರ ಭಾಷೆಗಳ ಪದಗಳಿಗೆ ಸಂವಾದಿಯಾದ ಆಕರ್ಷಕ ಪದಗಳನ್ನು ಬಳಸುವುದು ಇತ್ಯಾದಿಗಳ ಮೂಲಕ ಕನ್ನಡದ ಪದಸಂಪತ್ತು ಬೆಳೆಸಬೇಕಿದೆ” ಎಂದು ಹೇಳಿದರು.

    ಸಮಾರಂಭದಲ್ಲಿ ವಿಶ್ವಮಂಗಳ ರಕ್ಷಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಇವರು ಅಧ್ಯಕ್ಷತೆ ವಹಿಸಿದ್ದರು. ಕ.ಸಾ.ಪ. ಉಳ್ಳಾಲ ಘಟಕ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ, ಗೌರವ ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರ್, ಸೋಮೇಶ್ವರ ಗ್ರಾಮ ಸಂಚಾಲಕರಾದ ತೋನ್ಸೆ ಪುಷ್ಕಳ ಕುಮಾರ್, ವಿಶ್ವಮಂಗಳದ ಮುಖ್ಯ ಶಿಕ್ಷಕರುಗಳಾದ ಪೂರ್ಣಿಮಾ ಡಿ. ಶೆಟ್ಟಿ, ಪ್ರಿಯಾ, ಶೋಭಾವತಿ, ಹಂಸಗೀತ, ಕ.ಸಾ.ಪ. ಪದಾಧಿಕಾರಿಗಳಾದ ಶಿಕ್ಷಕ ರಾಧಾಕೃಷ್ಣ ರಾವ್, ಸುರೇಂದ್ರ ರೈ ಗ್ರಾಮಚಾವಡಿ ಮತ್ತಿತರರು ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ಪ್ರಿಯಾ ಸ್ವಾಗತಿಸಿ, ದಿಲೀಪ್ ರೈ ನಿರೂಪಿಸಿದರು. ತೋನ್ಸೆ ಪುಷ್ಕಳ ಕುಮಾರ್ ಇವರಿಂದ ಕನ್ನಡ ಹಾಡುಗಳ ಪ್ರಸ್ತುತಿ ಹಾಗೂ ವಿಶ್ವಮಂಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಲೋಕರ್ಪಣೆಗೊಂಡ ಡಾ. ಸುಬ್ರಹ್ಮಣ್ಯ ಭಟ್ಟರ ನಾಲ್ಕನೇ ಕಾದಂಬರಿ ‘ಸುಜ್ಞಾನಿ ಸಹದೇವ’
    Next Article ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ನಾಡು-ನುಡಿ ಚಿಂತನೆ – ಕನ್ನಡ ಭಾವ ಗಾಯನ’
    roovari

    Add Comment Cancel Reply


    Related Posts

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ಕೊಡಗು ಕಲಾವಿದರ ಸಂಘದಿಂದ ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ

    May 24, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.