ಬೆಂಗಳೂರು : ದೃಶ್ಯ (ರಿ.) ರಂಗತಂಡ ಪ್ರಯೋಗಿಸುತ್ತಿರುವ ದಾಕ್ಷಾಯಿಣಿ ಭಟ್ ಎ. ಇವರ ರಂಗರೂಪ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ರಕ್ತ ಧ್ವಜ’ ನಾಟಕ ಪ್ರದರ್ಶನವನ್ನು ದಿನಾಂಕ 22 ಜನವರಿ 2026ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕವು ಬಸವರಾಜ್ ಕಟ್ಟೀಮನಿಯವರ ‘ರಕ್ತ ಧ್ವಜ’ ಕತೆ ಹಾಗೂ ಆರ್. ಬಸವರಾಜ್ ರವರ ‘ಈಸೂರಿನ ಚಿರಂಜೀವಿಗಳು’ ಕಾದಂಬರಿ ಆಧಾರಿತ ಕಥೆಯಾಗಿದೆ. ಇದೇ ಸಂದರ್ಭದಲ್ಲಿ ಪಿಚ್ಚಳ್ಳಿ ಶ್ರೀನಿವಾಸ್ ಇವರು ಸಿಜಿಕೆ ಕುರಿತು ಮಾತನಾಡಲಿದ್ದಾರೆ.

