ಬೆಂಗಳೂರು : ವಿಜಯನಗರ ಬಿಂಬ (ರಿ.) ಇದರ ರಂಗ ಶಿಕ್ಷಣ ಕೇಂದ್ರ ಹಿರಿಯರ ವಿಭಾಗದ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಪಯುಕ್ತ 13ನೇ ವರ್ಷದ ಡಿಪ್ಲೋಮೊ ವಿದ್ಯಾರ್ಥಿಗಳಿಂದ ರಾಷ್ಟ್ರಕವಿ ಕುವೆಂಪುರವರ ‘ರಕ್ತಾಕ್ಷಿ’ ನಾಟಕ ಪ್ರದರ್ಶನವನ್ನು ದಿನಾಂಕ 27 ಮಾರ್ಚ್ 2026ರಂದು ಸಂಜೆ 4-00 ಮತ್ತು 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರದರ್ಶನಗೊಳ್ಳುವ ಈ ನಾಟಕವನ್ನು ಡಾ. ಸುಷ್ಮಾ ಎಸ್. ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 98452 65967, 98441 52967, 98457 34967, 98800 33018 ಮತ್ತು 98440 17881 ಸಂಖ್ಯೆಯನ್ನು ಸಂಪರ್ಕಿಸಿರಿ.

