Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿಶ್ವಭಾರತಿ ರಜತ ವೈಭವದಲ್ಲಿ ‘ರಾಮಾಯಣ ದಶಪರ್ವ’ ತಾಳಮದ್ದಳೆಗೆ ಚಾಲನೆ
    Yakshagana

    ವಿಶ್ವಭಾರತಿ ರಜತ ವೈಭವದಲ್ಲಿ ‘ರಾಮಾಯಣ ದಶಪರ್ವ’ ತಾಳಮದ್ದಳೆಗೆ ಚಾಲನೆ

    July 25, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ವಿಶ್ವಭಾರತಿ ಯಕ್ಷಸಂಜೀವಿನಿ ಟ್ರಸ್ಟ್ (ರಿ.) ಮುಡಿಪು ಇದರ ರಜತ ಸಂಭ್ರಮ ಪ್ರಯುಕ್ತ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಇದರ ಸಹಭಾಗಿತ್ವದಲ್ಲಿ ‘ವಿಶ್ವಭಾರತಿ ರಜತ ವೈಭವ’ದ ಅಂಗವಾಗಿ ‘ರಾಮಾಯಣ ದಶಪರ್ವ’ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು 19 ಜುಲೈ 2024ರಂದು ಬಿ.ಸಿ.ರೋಡ್ ತುಳು ಶಿವಳ್ಳಿ ಸಭಾಭವನದಲ್ಲಿ ಚಾಲನೆಗೊಂಡಿತು.

    ಈ ಕಾರ್ಯಕ್ರಮವನ್ನು ಯಕ್ಷದಶಾವತಾರಿ ಶ್ರೀ ಕೆ. ಗೋವಿಂದ ಭಟ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ತುಳು ಶಿವಳ್ಳಿ ಸಂಘ ಬಂಟ್ವಾಳ ಘಟಕ ಅಧ್ಯಕ್ಷರಾದ ಶ್ರೀ ರಾಜಾರಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಸಜೀಪ ಮಾಗಣೆ ತಂತ್ರಿ ಶ್ರೀ ಎಂ. ಸುಬ್ರಮಣ್ಯ ಭಟ್, ಖ್ಯಾತ ಯಕ್ಷಗಾನ ಕಲಾವಿದ ವಿದ್ವಾಂಸ ಉಜಿರೆ ಅಶೋಕ ಭಟ್, ಶಂಕರ ಸೇವಾ ಪ್ರತಿಷ್ಠಾನ ಬಂಟ್ವಾಳ ಅಧ್ಯಕ್ಷರಾದ ಕೈಯೂರು ನಾರಾಯಣ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ಪ್ರಶಾಂತ ಹೊಳ್ಳ ನೇತೃತ್ವದಲ್ಲಿ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಶ್ರೀರಾಮ ಪಟ್ಟಾಭಿಷೇಕ’ ಎಂಬ ಯಕ್ಷಗಾನ ತಾಳಮದ್ದಳೆ ಜರಗಿತು. ಕುಮಾರಿ ಶ್ರೀವಿದ್ಯಾ ಐತಾಳ್, ಪ್ರಶಾಂತ ಕುಮಾರ್ ಗಟ್ಟಿ, ಕುದುರೆ ಕೊಡ್ಲು ರಾಮಮೂರ್ತಿ, ರಾಮದಾಸ್ ವಗೆನಾಡು, ರಾಮ ಹೊಳ್ಳ ಸುರತ್ಕಲ್, ಎಸ್.ಅಶೋಕ್ ಭಟ್, ಉ. ಸುಬ್ರಾಯ ಹೊಳ್ಳ, ನಾ. ಕಾರಂತ ಪೆರಾಜೆ, ಕೊಯಿಲ ಮೋಹನ್ ರಾವ್ ಮತ್ತು ಶ್ರೀಮತಿ ಸುಮಂಗಲಾ ರತ್ನಾಕರ ರಾವ್ ಕಲಾವಿದರಾಗಿ ಭಾಗವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ
    Next Article ಮಂಗಳೂರು ಪುರಭವನದಲ್ಲಿ ‘ಸನಾತನ ಗುರುಪರಂಪರ’
    roovari

    Add Comment Cancel Reply


    Related Posts

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    ಪರಿಚಯ ಲೇಖನ | ‘ಬೆಳೆಯುವ ಯಕ್ಷಸಿರಿ’ ಸಚಿನ್ ಶೆಟ್ಟಿ ನಾಗರಕೊಡಿಗೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.