Subscribe to Updates

    Get the latest creative news from FooBar about art, design and business.

    What's Hot

    ಹಾಸನದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಮಕ್ಕಳಿಂದ ನಾಟಕ ಪ್ರದರ್ಶನ | ಜನವರಿ 06

    January 5, 2026

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು
    Awards

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025Updated:May 29, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಾಸರಗೋಡಿನ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು ಇದರ 19ನೇ ವಾರ್ಷಿಕೋತ್ಸವ ಮತ್ತು ರಂಗಚಿನ್ನಾರಿ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 24 ಮೇ 2025ರಂದು ಕಾಸರಗೋಡಿನ ಕರಂದಕ್ಕಾಡಿನಲ್ಲಿರುವ ‘ಪದ್ಮಗಿರಿ ಕಲಾ ಕುಟೀರ’ದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಸ್ವಾಮೀಜಿ “ಎಲೆಮರೆಯ ಪ್ರತಿಭಾನ್ವಿತರನ್ನು, ಹಿರಿಯ ಕಲಾವಿದರನು ಗುರುತಿಸುವಂತಹ ಹಾಗೂ ಅವರಿಗೆ ವೇದಿಕೆ ಕಲ್ಪಿಸುವ ಕಾರ್ಯ ಅತ್ಯಂತ ಶ್ಲಾಘನೀಯ. ಇದರಿಂದಾಗಿ ಯುವ ಪ್ರತಿಭೆಗಳಿಗೆ ಕಲೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಗುತ್ತದೆ. ಸುಪ್ತವಾಗಿದ್ದ ಪ್ರತಿಭೆ ಅನಾವರಣಗೊಳ್ಳುತ್ತದೆ. ರಂಗಚಿನ್ನಾರಿಯು ಕಲೆ, ಸಾಹಿತ್ಯ, ಸಂಸ್ಕೃತಿಯ ಉಳಿವಿಗಾಗಿ ನಿರಂತರ ಕೈಂಕರ್ಯ ನಡೆಸುತ್ತಿದ್ದು ಯುವ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಮಹತ್ವದ ಕಾರ್ಯ ಮಾಡುತ್ತಿದೆ. ಈಗಾಗಲೇ ನೂರಾರು ಮಂದಿ ಯುವ ಪ್ರತಿಭೆಗಳನ್ನು ಗುರುತಿಸಿ, ವೇದಿಕೆ ಕಲ್ಪಿಸಿ ಅವರಲ್ಲಿ ಸುಪ್ತವಾಗಿದ್ದ ಪ್ರತಿಭೆ ಅರಳುವುದಕ್ಕೆ ಕಾರಣವಾಗಿದೆ” ಎಂದರು.


    ಖ್ಯಾತ ಪತ್ರಕರ್ತ ರವೀಂದ್ರ ಜೋಶಿ ಮಾತನಾಡಿ “ಎರಡು ದಶಕಗಳಿಂದ ನಿರಂತರವಾಗಿ ಕನ್ನಡ ನಾಡು, ನುಡಿ, ಸಂಸ್ಕೃತಿಗಾಗಿ ದುಡಿಯುತ್ತಿರುವುದು ಕಷ್ಟದ ಕೆಲಸವಾದರೂ ಕನ್ನಡ ಭಾಷೆ ಮೇಲಿನ ಅಭಿಮಾನದಿಂದ ರಂಗ ಚಿನ್ನಾರಿ ದುಡಿಯುತ್ತಿರುವುದು ಉಳಿದ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ” ಎಂದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಖ್ಯಾತ ನೇತ್ರ ತಜ್ಞ ಹಾಗೂ ಧರ್ಮದರ್ಶಿಗಳಾದ ಡಾ. ಅನಂತ ಕಾಮತ್ ಮಾತನಾಡಿ “ರಂಗ ಚಿನ್ನಾರಿಯು ಸಾಹಿತ್ಯ, ನಾಟಕ, ಸಂಗೀತ, ಕ್ರೀಡೆ, ಸಿನಿಮಾ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕಾಸರಗೋಡಿದ ಐವರು ಕನ್ನಡಿಗರನ್ನು ಪ್ರಶಸ್ತಿ ನೀಡಿ ಗೌರವ ಧನದೊಂದಿಗೆ ಗೌರವಿಸಿರುವುದು ನಿಜಕ್ಕೂ ಸ್ಲಾ ಘನೀಯ” ಎಂದರು.


    ಸಮಾರಂಭದಲ್ಲಿ ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ ಮಾಧವ ಪಾಟಾಳಿ ಇವರಿಗೆ ‘ಶ್ರೀ ಕೇಶವಾನಂದ ಭಾರತಿ ಪ್ರಶಸ್ತಿ’, ನಾಟಕ ಮತ್ತು ಸಾಹಿತ್ಯ ಕ್ಷೇತ್ರದ  ಸಾಧನೆಗಾಗಿ ರಾಂ ಎಲ್ಲಂಗಳ ಮತ್ತು ಸಂಗೀತ ಕ್ಷೇತ್ರದ ಸಾಧನೆಗಾಗಿ ಶಕುಂತಲಾ ಕೃಷ್ಣ ಭಟ್ ಇವರಿಗೆ ‘ರಂಗಚಿನ್ನಾರಿ ಪ್ರಶಸ್ತಿ’, ಸಿನೆಮಾ ಕ್ಷೇತ್ರದ ಸಾಧನೆಗಾಗಿ ಕಿರಣ್ ರಾಜ್, ಕ್ರೀಡಾ ಕ್ಷೇತ್ರದ ಸಾಧನೆಗಾಗಿ ದೀಕ್ಷಾ ಕೆ. ಇವರಿಗೆ ‘ರಂಗಚಿನ್ನಾರಿ ಯುವ ಪ್ರಶಸ್ತಿ’ಯನ್ನು ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಸ್ವಾಮೀಜಿಯವರು ನೀಡಿ ಗೌರವಿಸಿದರು.

     


    ರಾಷ್ಟ್ರಪ್ರಶಸ್ತಿ ವಿಜೇತ ಸುಬ್ರಹ್ಮಣ್ಯ ಬಾಡೂರು, ಸಾಹಿತಿ ಉಮೇಶ ಮೈಸೂರು, ಉದಯಕುಮಾರ್ ಮನ್ನಿಪ್ಪಾದೆ, ಜನಾರ್ಧನ ಅಣಂಗೂರು, ದಿವ್ಯಗಟ್ಟಿ, ಶರಣ್ಯ, ನಾರಿ ಚಿನಾರಿಯ ಅಧ್ಯಕ್ಷೆ ಸವಿತಾ ಟೀಚರ್, ಯಕ್ಷಗಾನ ಕಲಾವಿದ ಸುಧಾಕರ ಸಾಲ್ಯಾನ್, ರಂಗಚಿನ್ನಾರಿ ನಿರ್ದೇಶಕರಾದ ಕೋಳಾರು ಸತೀಶ್ಚಂದ್ರ ಭಂಡಾರಿ, ಸತ್ಯನಾರಾಯಣ ಉಪಸ್ಥಿತರಿದ್ದರು. ರಂಗಚಿನ್ನಾರಿ ನಿರ್ದೇಶಕ ಕಾಸರಗೋಡು ಚಿನ್ನಾ ಸ್ವಾಗತಿಸಿ, ನಿರೂಪಿಸಿ, ಬಬಿತಾ ಆಚಾರ್ಯ ಬಾಡೂರು ಪ್ರಾರ್ಥಿಸಿದರು.

    award drama Music yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಮಲ್ಲತ್ತಳ್ಳಿ ಕಲಾಗ್ರಾಮದಲ್ಲಿ ನಾಟಕ ಪ್ರದರ್ಶನ | ಮೇ 30
    Next Article ‘ಕವನ ವಾಚನ ವಿಡಿಯೋ ಸ್ಪರ್ಧೆ 2025’ | ಕೊನೆಯ ದಿನಾಂಕ ಜೂನ್ 15
    roovari

    Add Comment Cancel Reply


    Related Posts

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಸುನಾದ ಸಂಗೀತ ಕಲಾಶಾಲೆಯ ಸುನಾದ ಸಂಗೀತೋತ್ಸವ ಸಂಭ್ರಮ

    January 3, 2026

    ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ | ಜನವರಿ 04

    January 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.