Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಲಾಲ್ ಬಾಗ್ ನಲ್ಲಿ ‘ತೇಜಸ್ವಿ ನಾಟಕೋತ್ಸವ’

    January 17, 2026

    ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ’ಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

    January 17, 2026

    ಅಮೃತ ಸೋಮೇಶ್ವರರ ನಾಟಕಗಳ ಇಂಗ್ಲೀಷ್ ಅನುವಾದ ಕೃತಿ ಬಿಡುಗಡೆ

    January 17, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ‘ರಂಗ ರಂಗೋಲಿ’ ರಾಜ್ಯ ಮಟ್ಟದ ಕನ್ನಡ ನಾಟಕೋತ್ಸವ | ಜುಲೈ 9, 10 ಮತ್ತು 11
    Drama

    ಬೆಂಗಳೂರಿನಲ್ಲಿ ‘ರಂಗ ರಂಗೋಲಿ’ ರಾಜ್ಯ ಮಟ್ಟದ ಕನ್ನಡ ನಾಟಕೋತ್ಸವ | ಜುಲೈ 9, 10 ಮತ್ತು 11

    July 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಅಕಾಡೆಮಿ ಆಫ್ ಮ್ಯೂಜಿಕ್ (ರಿ.) ಮತ್ತು ಚೌಡಯ್ಯ ಸ್ಮಾರಕ ಭವನ ಅರ್ಪಿಸುವ ‘ರಂಗ ರಂಗೋಲಿ’ ರಾಜ್ಯ ಮಟ್ಟದ ಕನ್ನಡ ನಾಟಕೋತ್ಸವವನ್ನು ದಿನಾಂಕ 9, 10 ಮತ್ತು 11 ಜುಲೈ 2025ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡದ ಮಹಾನ್ ಸಾಹಿತಿಗಳ ಅತ್ಯಂತ ಪ್ರಸಿದ್ಧ ಕಾದಂಬರಿಗಳು ರಂಗ ರೂಪವಾಗಿ ಅನಾವರಣಗೊಳ್ಳುವ ರಾಜ್ಯ ಮಟ್ಟದ ನಾಟಕೋತ್ಸವ ಇದಾಗಿದೆ.

    ದಿನಾಂಕ 9 ಜುಲೈ 2025ರಂದು ಸಂಜೆ 6-30 ಗಂಟೆಗೆ ಹಾವೇರಿ ಜಿಲ್ಲೆಯ ಶೇಷಗಿರಿ ಗ್ರಾಮದ ಶ್ರೀ ಗಜಾನನ ಯುವಕ ಮಂಡಳಿ ತಂಡದಿಂದ ಜ್ಞಾನಪೀಠ ಪುರಸ್ಕೃತ ಲೇಖಕ ಕುವೆಂಪು ಅವರ ಮಹಾಕಾವ್ಯ ಶ್ರೀ ರಾಮಾಯಣ ದರ್ಶನಂ ಆಧಾರಿತ ‘ವಾಲಿ ವಧೆ’ ನಾಟಕ ಪ್ರದರ್ಶನಗೊಳ್ಳಲಿದೆ. ಗಣೇಶ ಮಂದರ್ತಿ ಇವರು ರಂಗ ಪಠ್ಯ, ವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದು, ಪದ್ಮಶ್ರೀ ಎಮ್.ಎಸ್. ಸತ್ಯು ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಇವರಿಗೆ ಇದೇ ಸಂದರ್ಭದಲ್ಲಿ ರಂಗ ಗೌರವ ನೀಡಲಾಗುವುದು.

    ದಿನಾಂಕ 10 ಜುಲೈ 2025ರಂದು ಸಂಜೆ 6-30 ಗಂಟೆಗೆ ಕನ್ನಡ ರಂಗಭೂಮಿಯಲ್ಲಿ ಹೊಸ ಮಾದರಿಯ ರಂಗ ಪ್ರಯೋಗಗಳ ಅನ್ವೇಷಣೆಯ ನಿರ್ದಿಗಂತ ತಂಡದವರಿಂದ ‘ಮೈ ಮನಗಳ ಸುಳಿಯಲ್ಲಿ’ ಕಾದಂಬರಿಯ ರಂಗ ರೂಪ ಪ್ರಸ್ತುತಗೊಳ್ಳಲಿದೆ. ಅಮಿತ್ ಜೆ. ರೆಡ್ಡಿ ಇವರು ರಂಗ ಪಠ್ಯ ವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದು, ಇದೇ ಸಂದರ್ಭದಲ್ಲಿ ಪ್ರಕಾಶ್ ರಾಜ್ ಇವರಿಗೆ ರಂಗ ಗೌರವ ನೀಡಲಾಗುವುದು.

    ದಿನಾಂಕ 11 ಜುಲೈ 2025ರಂದು ಬೆಳಗ್ಗೆ 10-00 ಗಂಟೆಗೆ ಬೆಂಗಳೂರಿನ ಸೆಂಟರ್ ಫಾರ್ ಸಿನಿಮಾ ಮತ್ತು ಡ್ರಾಮಾ ತಂಡದಿಂದ ಡಾ. ಎಸ್.ಎಲ್. ಭೈರಪ್ಪ ಇವರ ಶ್ರೇಷ್ಠ ಕಾದಂಬರಿ ‘ಪರ್ವ’ ಪ್ರಕಾಶ್ ಬೆಳವಾಡಿ ಇವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದ್ದು, ಇದೇ ಸಂದರ್ಭದಲ್ಲಿ ಇವರಿಗೆ ರಂಗ ಗೌರವ ನೀಡಲಾಗುವುದು.

    baikady drama felicitation roovari
    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿ ಪುರಭವನದಲ್ಲಿ ಗೌರವಾರ್ಪಣಾ ಮತ್ತು ಯಕ್ಷಗಾನ ಕಾರ್ಯಕ್ರಮ
    Next Article ಬ್ರಹ್ಮಾವರದ ಎಸ್.ಎಮ್.ಎಸ್. ಕಾಲೇಜಿನಲ್ಲಿ ‘ಮಾಯಾಮೃಗ’ ಮತ್ತು ‘ಎದೆಯ ಹಣತೆ’ ಪ್ರದರ್ಶನ | ಜುಲೈ 08
    roovari

    Add Comment Cancel Reply


    Related Posts

    ಬೆಂಗಳೂರಿನ ಲಾಲ್ ಬಾಗ್ ನಲ್ಲಿ ‘ತೇಜಸ್ವಿ ನಾಟಕೋತ್ಸವ’

    January 17, 2026

    ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ’ಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

    January 17, 2026

    ಅಮೃತ ಸೋಮೇಶ್ವರರ ನಾಟಕಗಳ ಇಂಗ್ಲೀಷ್ ಅನುವಾದ ಕೃತಿ ಬಿಡುಗಡೆ

    January 17, 2026

    ಕಾಜಾಣ ರಂಗ ಶಾಲೆಯಿಂದ ರಂಗ ತರಬೇತಿ | ಫೆಬ್ರುವರಿ 01 

    January 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.