Subscribe to Updates

    Get the latest creative news from FooBar about art, design and business.

    What's Hot

    ಡಾ. ಸುರೇಶ ನೆಗಳಗುಳಿ ಇವರಿಗೆ ‘ನಮ್ಮ ವೈದ್ಯೋ ನಾರಾಯಣ’ ಪ್ರಶಸ್ತಿ

    August 2, 2025

    ವಿಜಯಪುರದಲ್ಲಿ ಕುಮಾರವ್ಯಾಸ ಭಾರತ ವೇದಿಕೆಯಿಂದ ಗಮಕ ಕಾರ್ಯಕ್ರಮ | ಆಗಸ್ಟ್ 03

    August 2, 2025

    ಕೊಪ್ಪಳದಲ್ಲಿ ಕಿರು ಪುಸ್ತಕ ಲೋಕಾರ್ಪಣೆ ಸಮಾರಂಭ | ಆಗಸ್ಟ್ 03

    August 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡು ಚಿನ್ನಾ ಇವರ ನಿರ್ದೇಶನದಲ್ಲಿ ‘ರಂಗ ಸಂಸ್ಕೃತಿ’ ಕಾರ್ಯಾಗಾರ
    Theatre

    ಕಾಸರಗೋಡು ಚಿನ್ನಾ ಇವರ ನಿರ್ದೇಶನದಲ್ಲಿ ‘ರಂಗ ಸಂಸ್ಕೃತಿ’ ಕಾರ್ಯಾಗಾರ

    July 31, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಉಡುಪಿ : ಮಣಿಪಾಲದ ಸರಳೇಬೆಟ್ಟು ಇಲ್ಲಿನ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಇವರ ನೇತೃತ್ವದಲ್ಲಿ ರಂಗ ಚಿನ್ನಾರಿ ಕಾಸರಗೋಡು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಏರ್ಪಡಿಸಲಾದ ಕಾಸರಗೋಡು ಚಿನ್ನಾ ಇವರ ನಿರ್ದೇಶನದಲ್ಲಿ ರಂಗಸಂಸ್ಕೃತಿ ಶಿಬಿರವು ದಿನಾಂಕ 28 ಜುಲೈ 2024ರಂದು ನಡೆಯಿತು.
    ಈ ಶಿಬಿರವನ್ನು ಉದ್ಘಾಟಿಸಿದ ಮಾಧವ ಕೃಪಾ ಸ್ಕೂಲ್‌ನ ಉಪ ಪ್ರಾಂಶುಪಾಲರಾದ ಜ್ಯೋತಿ ಸಂತೋಷ್ ಇವರು ಮಾತನಾಡಿ “ಮಕ್ಕಳು ರಂಗಭೂಮಿಯ ಕಲಾವೇದಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಬದುಕಿನಲ್ಲಿ ಕಷ್ಟ ಎದುರಿಸುವ ಎದೆಗಾರಿಕೆಯೂ ಬರುತ್ತದೆ. ರಂಗ ನಿರ್ದೇಶಕ ಕಾಸರಗೋಡು ಚಿನ್ನಾರವರು ರಂಗ ಸಂಸ್ಕೃತಿ ಮುಖಾಂತರ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಬೆಳಕಿಗೆ ತರುತ್ತಿದ್ದಾರೆ” ಎಂದು ಹೇಳಿದರು.
    ಅಧ್ಯಕ್ಷತೆ ವಹಿಸಿದ್ದ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಮಹೇಶ್ ಠಾಕೂರ್ ಮಾತನಾಡಿ, “ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿವಿಧ ಕಲಾ ಪ್ರಕಾರಗಳ ತರಗತಿಗಳನ್ನು ಉಚಿತವಾಗಿ ಏರ್ಪಡಿಸುತ್ತಿದ್ದೇವೆ. ಇದೀಗ ಈ ಸಾಲಿಗೆ ರಂಗಸಂಸ್ಕೃತಿ ಕೂಡ ಸೇರಿಸಿದ್ದೇವೆ. ಮುಂದಿನ ದಿನಗಳಲ್ಲಿ ಉಡುಪಿ ಪರಿಸರದ ಶಾಲಾ ಕಾಲೇಜುಗಳಲ್ಲಿ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಈ ಕಾರ್ಯ ಮಾಡಲಿದೆ” ಎಂದು ಹೇಳಿದರು.
    ಪರ್ಕಳ ಪ್ರೌಢಶಾಲೆ ಸಂಚಾಲಕ ದಿನೇಶ್ ಹೆಗ್ಡೆ, ಶಿಲ್ಪಾ ಸಾಮಂತ್, ಟ್ರಸ್ಟಿ ರಮಾನಂದ್ ಸಾಮಂತ್, ಕಾರ್ಯದರ್ಶಿ ಅಶ್ವಿನಿ ಮಹೇಶ್ ಠಾಕೂರ್, ನಿತ್ಯಾನಂದ ಪಡ್ರೆ, ರಂಗಕರ್ಮಿ ಶಶಿ ಭೂಷಣ ಕಿಣಿ  ಹಾಗೂ ಇತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಸದಾನಂದ ರಂಗಮಂಟಪದಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ | ಆಗಸ್ಟ್ 01ರಿಂದ 07
    Next Article ನೃತ್ಯಾಂತರಂಗ 115ನೇ ಸರಣಿಯಲ್ಲಿ ಕುಮಾರಿ ಪ್ರಣಮ್ಯ ಪಾಲೆಚ್ಚಾರು ಇವರ ಪ್ರಥಮ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಿ
    roovari

    Comments are closed.

    Related Posts

    ನಾಪೋಕ್ಲುವಿನಲ್ಲಿ ಒಂದು ದಿನದ ಅರೆಭಾಷೆ ಕಥೆ ರಚನೆ ಕಾರ್ಯಾಗಾರ

    August 2, 2025

    ಯಶಸ್ವಿಯಾಗಿ ನಡೆದ ವಿದ್ಯಾರ್ಥಿಗಳ ಸಾಹಿತ್ಯ ಸಾಂಸ್ಕೃತಿಕ ಕಮ್ಮಟ

    July 31, 2025

    ಮೈಸೂರಿನ ಕಲಾಮಂದಿರ ಆವರಣದಲ್ಲಿ ‘ನಟನಾಭ್ಯಾಸ ಶಿಬಿರ’ | ಆಗಸ್ಟ್ 04ರಿಂದ 15

    July 30, 2025

    ‘ಅಂತರಂಗ ಬಹಿರಂಗ’ ದಿಂದ ಒಂದೇದಿನ 2 ನಾಟಕಗಳ ಪ್ರದರ್ಶನ | ಜುಲೈ 27

    July 25, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.