Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಭೂಮಿ (ರಿ.) ಉಡುಪಿ ವತಿಯಿಂದ ಡಾ. ಭಾಸ್ಕರಾನಂದ ಕುಮಾ‌ರ್ ಇವರಿಗೆ ‘ರಂಗಭೂಮಿ ಪ್ರಶಸ್ತಿ 2025’
    Awards

    ರಂಗಭೂಮಿ (ರಿ.) ಉಡುಪಿ ವತಿಯಿಂದ ಡಾ. ಭಾಸ್ಕರಾನಂದ ಕುಮಾ‌ರ್ ಇವರಿಗೆ ‘ರಂಗಭೂಮಿ ಪ್ರಶಸ್ತಿ 2025’

    February 6, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ (ರಿ.) ಉಡುಪಿ ಇದರ ವತಿಯಿಂದ ನಡೆಯುತ್ತಿರುವ ಮೂರು ದಿನಗಳ ‘ರಂಗಭೂಮಿ ರಂಗೋತ್ಸವ’ದ ಎರಡನೇ ದಿನ ದಿನಾಂಕ 02 ಫೆಬ್ರವರಿ 2025 ಭಾನುವಾರದಂದು ಪ್ರಸಿದ್ಧ ವೈದ್ಯ ಡಾ. ಭಾಸ್ಕರಾನಂದ ಕುಮಾರ್ ಇವರು ನಾಡಿನ ಸಾಮಾಜಿಕ, ವೈದ್ಯಕೀಯ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿರುವ ಅನನ್ಯ ಕೊಡುಗೆಗಾಗಿ ‘2025ನೇ ಸಾಲಿನ ರಂಗಭೂಮಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

    ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಭಾಸ್ಕರಾನಂದ ಕುಮಾರ್ “ಬಾಲ್ಯದಲ್ಲಿಯೇ ರಂಗ ಭೂಮಿಯತ್ತ ಸೆಳೆತವಿದ್ದ ನಾನು ಮುಂದೆ ಯಕ್ಷಗಾನ ಕ್ಷೇತ್ರದಲ್ಲೂ ಹವ್ಯಾಸಿ ಕಲಾವಿದನಾಗಿ ನನ್ನಿಂದಾದಷ್ಟು ಕಲಾ ಸೇವೆ ಮಾಡಿದ್ದೇನೆ. ವೈದ್ಯ ವೃತ್ತಿಯಲ್ಲಿ ನಡೆಸಿದ ನನ್ನ ಕೆಲವೊಂದು ಸಾಧನೆಗಳು ವಿಶ್ವ ಮಾನ್ಯತೆ ತಂದುಕೊಟ್ಟಿದೆ. ಇದೀಗ ರಂಗಭೂಮಿ ನನ್ನನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತೋಷ ತಂದಿದೆ” ಎಂದರು.

    ಮಂಗಳೂರಿನ ಶಾರದಾ ಸಮೂಹ ಸಂಸ್ಥೆಯ ಪ್ರೊ. ಎಂ.ಬಿ. ಪುರಾಣಿಕ್, ಮಂಗಳೂರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಡಾ. ಭಾಸ್ಕರಾನಂದ ಕುಮಾರ್ ಇವರ ‘ವಾಲಿ’ ಸೇರಿದಂತೆ ಯಕ್ಷಗಾನದ ವಿವಿಧ ಪಾತ್ರಗಳು ಸಭಿಕರನ್ನು ಮನಸೆಳೆದಿದೆ. ಹವ್ಯಾಸಿ ಕಲಾವಿದನಾಗಿ, ಓರ್ವ ವೈದ್ಯನಾಗಿ ಇವರು ನಡೆಸಿದ ಕಲಾಸೇವೆ, ಕಲಾವಿದರಿಗೆ ನೀಡಿದ ನೆರವು ಪ್ರಶಂಸನೀಯ. ಇವರಿಗೆ ಈ ರಂಗಭೂಮಿ ಪ್ರಶಸ್ತಿ ಸಲ್ಲುತ್ತಿರುವುದು ಸಂಸ್ಥೆಯ ಗರಿಮೆಯನ್ನು ಹೆಚ್ಚಿಸಿದೆ” ಎಂದರು.

    ಕಾರ್ಯಕ್ರಮದಲ್ಲಿ ತಲ್ಲೂರ್ಸ್ ಪ್ಯಾಮಿಲಿ ಟ್ರಸ್ಟಿನ ಟ್ರಸ್ಟಿ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ, ರಂಗಭೂಮಿ ಉಡುಪಿಯ ಪ್ರದಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಉಪಾಧ್ಯಕ್ಷರುಗಳಾದ ಎನ್.ಆರ್. ಬಲ್ಲಾಳ್ ಹಾಗೂ ಭಾಸ್ಕರ ರಾವ್ ಕಿದಿಯೂರು ಉಪಸ್ಥಿತರಿದ್ದರು. ರಂಗಭೂಮಿ ರಂಗಶಿಕ್ಷಣ ಸಂಚಾಲಕ ವಿದ್ಯಾವಂತ ಆಚಾರ್ಯ ಸ್ವಾಗತಿಸಿ, ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕಿನ ಅಧ್ಯಕ್ಷ ಹೆಚ್. ಜಯಪ್ರಕಾಶ್ ಕೆದ್ಲಾಯ ಪ್ರಾಸ್ತಾವಿಕ ಮಾತನಾಡಿ, ಡಾ. ವಿಷ್ಣುಮೂರ್ತಿ ನಿರೂಪಿಸಿ, ಶ್ರೀಪಾದ ಹೆಗಡೆ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಬೆಂಗಳೂರಿನ ರಂಗರಥ ಟ್ರಸ್ಟ್ ತಂಡದಿಂದ ಸಾಂಸಾರಿಕ ಹಾಸ್ಯ ನಾಟಕ ‘ಇದ್ದಾಗ ನಿಮ್ಮು ಕದ್ದಾಗ ನಮ್ಮು’ ಪ್ರದರ್ಶನಗೊಂಡಿತು.

    award Kannada drama
    Share. Facebook Twitter Pinterest LinkedIn Tumblr WhatsApp Email
    Previous Article‘ನೃತ್ಯ ಸುಧಾ’ ವಿಂಶತಿ ವರ್ಷಾಚರಣೆ
    Next Article ಕವನ – ಮಾತು ಮರೆತ ಹುಡುಗಿ
    roovari

    Add Comment Cancel Reply


    Related Posts

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.