Subscribe to Updates

    Get the latest creative news from FooBar about art, design and business.

    What's Hot

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಸುಗಮ ಸಂಗೀತ’ ಕಾರ್ಯಕ್ರಮ | ಮೇ 25        

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್ ನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ
    Drama

    ಆಳ್ವಾಸ್ ನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

    March 31, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡಬಿದಿರೆ : ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ‘ವಿಶ್ವರಂಗಭೂಮಿ ದಿನಾಚರಣೆ’ ಅಂಗವಾಗಿ ‘ರಂಗಗೀತೆ- ಉಪನ್ಯಾಸ- ಸನ್ಮಾನ- ನಾಟಕ’ ಕಾರ್ಯಕ್ರಮವು ದಿನಾಂಕ 28 ಮಾರ್ಚ್ 2025ರ
    ಶುಕ್ರವಾರದಂದು ನಡೆಯಿತು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ “ರಂಗ ಚಟುವಟಿಕೆಯೇ ನನ್ನ ಬದುಕಿನ ಯಶಸ್ಸಿನ ಸೂತ್ರ. ಸಮಾಜ ಮತ್ತು ಬದುಕಿಗೆ ರಂಗಭೂಮಿ ಕೊಡುಗೆ ಅಪಾರ. ಪಠ್ಯಕ್ಕಿಂತ ರಂಗ ಚಟುವಟಿಕೆಗಳ ನೆನಪು ನನಗೆ ಇಂದಿಗೂ ಚಿರಸ್ಥಾಯಿಯಾಗಿದೆ. ‘ಭೋಜ ಶೆಟ್ಟಿ ನಮ್ಮ ಸಮಕಾಲೀನರು. ರಂಗದಲ್ಲಿ ಅವರ ಒಡನಾಟವೇ ಸುಂದರ. ಲಂಕೇಶ್ ಬರೆದ ‘ಪೋಲಿಸರಿದ್ದಾರೆ ಎಚ್ಚರಿಕೆ’ ನಾಟಕದ ‘ರುದ್ರಮೂರ್ತಿ’ ಪಾತ್ರ ಸೇರಿದಂತೆ ತಾವು ನಿರ್ವಹಿಸಿದ ‘ಗುಂಡ’, ‘ತುಘಲಕ್’, ‘ಬಯ್ಯಮಲ್ಲಿಗೆ’ ನಾಟಕದಲ್ಲಿ ತಾವು ನಿರ್ವಹಿಸಿದ ‘ವಿದೂಷಕ’ ಪಾತ್ರ ಸೇರಿದಂತೆ ಎಲ್ಲ ಪಾತ್ರಗಳನ್ನು ತೃಪ್ತ ಭಾವದಿಂದ ನಿರ್ವಹಿಸಿದ್ದೇನೆ. ವಿಠಲ್ ಮಾಸ್ಟರ್ ಮೂಲಕ ಭರತ ನಾಟ್ಯ ಕಲಿತು ದೇಶ- ವಿದೇಶಗಳಲ್ಲಿ ಪ್ರದರ್ಶನ ನೀಡಿದ್ದೇನೆ. ‘ಮೂಕಾನಭಿಯ, ಮ್ಯಾಜಿಕ್ ಕಲಿತು ಪ್ರಯೋಗಿಸಿದ ಅನುಭವ ನನ್ನನ್ನು ಗಟ್ಟಿಗೊಳಿಸಿದೆ. ಮಕ್ಕಳೇ ನೀವು ಎಲ್ಲಿಯೇ ಪ್ರದರ್ಶನ ನೀಡಿದರೂ, ನಾನು ಪ್ರೇಕ್ಷಕನಾಗಿದ್ದೇನೆ ಎಂಬುದನ್ನು ನೆನಪಿಸಿಕೊಳ್ಳಿ. ‘ಬೆಸ್ತರ, ಬೇಡರ ನೃತ್ಯ ನಿರಂತರವಾಗಿ ಮಾಡಿದ್ದೇನೆ. ಅದೇ ರೀತಿ ಅವಿರತವಾಗಿ ತೊಡಗಿಸಿಕೊಂಡಾಗ ಬದುಕಿನ ಯಶಸ್ಸು ದೊರೆಯುತ್ತದೆ. ‘ಬದುಕೇ ಒಂದು ನಾಟಕ, ವಿವಿಧ ಹಂತದಲ್ಲಿ ನಾವು ನಟನೆ ಮಾಡಬೇಕಾಗುತ್ತದೆ” ಎಂದರು.

    ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಹಾಗೂ ಹಿರಿಯ ರಂಗಕರ್ಮಿ ಡಾ. ನರಸಿಂಹಮೂರ್ತಿ ಆರ್. ಮಾತನಾಡಿ “ಲಲಿತಕಲೆಗಳ ಸಂಗಮ ಕ್ಷೇತ್ರವೇ ‘ರಂಗಭೂಮಿ’. ಪಂಚೇಂದ್ರಿಯ ಮೂಲಕ ನೆಮ್ಮದಿ ನೀಡುವ ಮನುಷ್ಯ ಕೃತ ಕ್ರಿಯೆಗಳೇ ಕಲೆ. ಪ್ರಾಚೀನ ಭಾರತದಲ್ಲಿ 64 ಕಲೆಗಳನ್ನು ಗುರುತಿಸಲಾಗಿದೆ. ನಾಟಕ ಎಂಬುದು ‘ಕಲಾ ರಸಾಯನ’. ವಿಭಿನ್ನ ರುಚಿ ಉಳ್ಳವರ ಭೋಜನವೇ ನಾಟಕ. ಎಲ್ಲರಿಗೂ ಏಕ ಕಾಲದಲ್ಲಿ ಕಲೆಗಳ ಖಾದ್ಯ ಲಭ್ಯ. ನಾಟಕ ಅರಿವು- ಮನುಷ್ಯತ್ವ ಮೂಡಿಸಬೇಕು. ‘ದೇಗುಲಗಳಿಗೆ ಹೋಗದಿದ್ದರೂ ರಂಗಭೂಮಿಯನ್ನು ಕಳೆದುಕೊಳ್ಳಬೇಡಿ’ ಎಂದು ಬರ್ನಾಡ್ ಷಾ ಹೇಳಿದ್ದಾರೆ” ಎಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ರಂಗಕರ್ಮಿ ಜೀವನ್ ರಾಮ್ ಸುಳ್ಯ “ನಾಟಕವಿಲ್ಲದೇ ಜೀವನ ಇಲ್ಲ. ನಾವು ರಂಗದಲ್ಲಿ ನಾಟಕಕಾರರು ಆದರೆ ಎಲ್ಲರೂ ಜೀವನದಲ್ಲಿ ನಾಟಕಕಾರರು. ಪಾತ್ರಗಳು ಮಾತ್ರ ವಿಭಿನ್ನ. ಎಲ್ಲ ವೃತ್ತಿಗಳು ‘ನಾಟಕ’ ಬಯಸುತ್ತವೆ” ಎಂದರು

    ಕಾರ್ಯಕ್ರಮದಲ್ಲಿ ರಂಗಭೂಮಿಯ ಹಿರಿಯ ಮತ್ತು ಚಲನಚಿತ್ರ ಕಲಾವಿದ ಎಂ. ಭೋಜ ಶೆಟ್ಟಿ ತೋಟದಮನೆ ಅವರನ್ನು ಸನ್ಮಾನಿಸಲಾಯಿತು. ಜೀವನ್ ರಾಮ್ ಸುಳ್ಯ, ವಿದುಷಿ ಸುಮನಾ ಪ್ರಸಾದ್ ಮತ್ತು ಮಮತಾ ಕಲ್ಮಕಾರು ಇವರು ‘ಸಾವಿರದ ಮಾಯೆ…’, ‘ಸಣ್ಣ ಹುಡುಗಿ ನಿನ್ನ…’ ‘ ಮದುವೆ ಎಂಬ ಮೂರಕ್ಷರ…’ ‘ಅಂತಿಂಥ ಮದುವೆಯಲ್ಲ, ಊಟ’ ‘ಗೋರ್ ಮಾಟಿ…’ ರಂಗಗೀತೆಗಳನ್ನು ಹಾಡಿದರು. ಚಿನ್ಮಯ ಕಮಲಾಕರ ಭಟ್ ಹಾಗೂ ಮನುಜ ನೇಹಿಗೆ ಸುಳ್ಯ ಹಿನ್ನೆಲೆಯಲ್ಲಿ ಸಾಥ್ ನೀಡಿದರು.

    ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಧ್ಯಾಪಕ ಡಾ.ಯೋಗೀಶ್ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು.
    ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಮ್ ಸುಳ್ಯ ನಿರ್ದೇಶನದಲ್ಲಿ ಶಶಿರಾಜ್ ಕಾವೂರು ಬರೆದ ‘ಏಕಾದಶಾನನ’ ನಾಟಕವನ್ನು ಕೇಂದ್ರದ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ಮನುಜ ನೇಹಿಗೆ ಸುಳ್ಯ ಸಂಗೀತ ನೀಡಿದರು.

    baikady drama kannada Music roovari theatre
    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ | ಅಸ್ಪೃಶ್ಯತೆ ನೋವಿನ ‘ಬೆಲ್ಲದ ದೋಣಿ’ ನಾಟಕ
    Next Article ಮೈಸೂರಿನ ವಾಸವಿ ವಿದ್ಯಾನಿಕೇತನದಲ್ಲಿ ‘ಪುಟಾಣಿ ಪರ್ ಪಂಚ’ ಮಕ್ಕಳ ಬೇಸಿಗೆ ಶಿಬಿರ | ಏಪ್ರಿಲ್ 10 ರಿಂದ ಮೇ 01
    roovari

    Add Comment Cancel Reply


    Related Posts

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಸುಗಮ ಸಂಗೀತ’ ಕಾರ್ಯಕ್ರಮ | ಮೇ 25        

    May 21, 2025

    ಕರ್ನಾಟಕ ನಾಟಕ ಅಕಾಡೆಮಿಯಿಂದ ತಿಂಗಳ ನಾಟಕ ಸಂಭ್ರಮ

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.