Subscribe to Updates

    Get the latest creative news from FooBar about art, design and business.

    What's Hot

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ. ಶೆಟ್ಟಿಯವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ
    Awards

    ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ. ಶೆಟ್ಟಿಯವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    November 14, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ‘ರಂಗಚಾವಡಿ’ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಸಹಯೋಗದಲ್ಲಿ ‘ರಂಗಚಾವಡಿ ವರ್ಷದ ಹಬ್ಬ’ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ದಿನಾಂಕ 10 ನವೆಂಬರ್ 2024ರಂದು ಜರುಗಿತು.

    ಚಲನಚಿತ್ರ ನಿರ್ಮಾಪಕ ಡಾ. ಸಂಜೀವ ದಂಡೆಕೇರಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತನಾಡಿದ ಅವರು, “ರಂಗಚಾವಡಿ ಪ್ರಶಸ್ತಿ ಸ್ವೀಕರಿಸುತ್ತಿರುವ ಹಿರಿಯ ರಂಗಕರ್ಮಿ ಕಿಶೋರ್ ಡಿ. ಶೆಟ್ಟಿಯವರದು ಸಾವಿರಾರು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ. ಅವರನ್ನು ಪಡೆದಿರುವುದು ನಮ್ಮ ತುಳುನಾಡಿನ ಸಮಸ್ತ ಕಲಾವಿದರ ಪುಣ್ಯ. ಬಡಹೆಣ್ಣುಮಕ್ಕಳ ಮದುವೆ, ಬಡಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಕಿಶೋರ್ ಶೆಟ್ಟಿಯವರು ಸದಾ ನೆರವು ನೀಡಿದವರು. ಇವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಂದಿದ್ದು, ಸಂಘಟನೆಯ ಈ ಕ್ರಮ ಶ್ಲಾಘನೀಯವಾದುದು“ ಎಂದರು.

    ವೇದಿಕೆಯಲ್ಲಿ ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ. ಶೆಟ್ಟಿಯವರಿಗೆ ‘ರಂಗಚಾವಡಿ ಪ್ರಶಸ್ತಿ-2024’ ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು, “ನನ್ನ ತಂಡದ ಕಲಾವಿದರಿಂದ ನಾನಿದ್ದೇನೆ, ಅವರಿಲ್ಲದೆ ನಾನೇನೂ ಇಲ್ಲ. ನಾನು ಮಾಡಿರುವ ದಾನ ಧರ್ಮ ಏನೂ ಇಲ್ಲ. ನೊಂದವರಿಗೆ ನೆರವಾಗುವುದು ದೇವರ ಸೇವೆ. ಇದು ನನಗೆ ಅಪ್ಪ ಅಮ್ಮ ಕಲಿಸಿದ್ದು, ಈ ಪ್ರಶಸ್ತಿಯನ್ನು ಬಹಳ ಖುಷಿಯಿಂದ ಸ್ವೀಕರಿಸುತ್ತಿದ್ದೇನೆ. ಇಂತಹ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ” ಎಂದರು.

    ಶ್ರೀ ಡೆವಲಪರ್ಸ್ ಸಂಸ್ಥೆಯ ಮಾಲಕ ಗಿರೀಶ್‌ ಎಂ. ಶೆಟ್ಟಿ ಕಟೀಲು ಇವರು ಮಾತನಾಡಿ “ಬಾಳ ಜಗನ್ನಾಥ ಶೆಟ್ಟಿಯವರು ರಂಗಭೂಮಿ ಕಲಾವಿದರನ್ನು ಗುರುತಿಸಲು ಹುಟ್ಟುಹಾಕಿದ ‘ರಂಗಚಾವಡಿ’ ಸಂಘಟನೆ ಇಂದು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಕಲಾವಿದರನ್ನು ಗುರುತಿಸಿ ಬೆನ್ನು ತಟ್ಟುತ್ತಿರುವ ಇಂತಹ ಸಂಘಟನೆಯ ಕಾರ್ಯ ಶ್ಲಾಘನೀಯ” ಎಂದರು.

    ವೇದಿಕೆಯಲ್ಲಿ ಉದ್ಯಮಿ ಸಮಾಜ ಸೇವಕ ಅನಿಲ್ ಶೆಟ್ಟಿ ತೇವು-ಸೂರಿಂಜೆ, ಬಂಟರ ಸಂಘ ಸುರತ್ಕಲ್ ಇದರ ನಿರ್ದೇಶಕ ಜಗದೀಶ್ ಶೆಟ್ಟಿ ಪೆರ್ಮುದೆ, ಜಯಕಿರಣ ಪತ್ರಿಕೆ ಮಾಲಕ ಪ್ರಕಾಶ್ ಪಾಂಡೇಶ್ವರ್, ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಇದರ ಅಧ್ಯಕ್ಷ ರಮೇಶ್‌ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್. ಪೂಂಜ, ಉದ್ಯಮಿ ಜಯರಾಮ ಶೇಖ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ, ಚಿತ್ರಾ ಜೆ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಗಿರೀಶ್ ಸಾಗರ ದೇವರನ್ನು ಸ್ತುತಿಸಿದರು. ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ ಅಭಿನಂದನಾ ಭಾಷಣಗೈದರು.‌ ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಗಾನಲಹರಿ ಮತ್ತು ಲಯನ್ ಕಿಶೋರ್ ಶೆಟ್ಟಿಯವರ ಸಾರಥ್ಯದ ಶ್ರೀ ಲಲಿತೆ ಕಲಾವಿದರಿಂದ ನವನೀತ ಶೆಟ್ಟಿ ರಚಿಸಿರುವ ‘ಶನಿ ಮಹಾತ್ಮೆ’ ತುಳು ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಫೌಂಡೇಷನ್ ಬೆಂಗಳೂರು ವತಿಯಿಂದ ಯಕ್ಷಗುರು ಕೋಟ ಸುದರ್ಶನ ಉರಾಳರಿಗೆ ಸನ್ಮಾನ
    Next Article ಉಡುಪಿಯಲ್ಲಿ ‘ಗೋವಿಂದ ಪೈ ಸಂಶೋಧನ ಸಂಪುಟ 1’ ಅನಾವರಣ ಸಮಾರಂಭ | ನವೆಂಬರ್ 16
    roovari

    Add Comment Cancel Reply


    Related Posts

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.