Subscribe to Updates

    Get the latest creative news from FooBar about art, design and business.

    What's Hot

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಐಲದಲ್ಲಿ ಮೇಲೈಸಿದ ರಂಗ ಚಿನ್ನಾರಿಯ ‘ಕಾಸರಗೋಡು ಕನ್ನಡ ಹಬ್ಬ’
    Bharathanatya

    ಐಲದಲ್ಲಿ ಮೇಲೈಸಿದ ರಂಗ ಚಿನ್ನಾರಿಯ ‘ಕಾಸರಗೋಡು ಕನ್ನಡ ಹಬ್ಬ’

    June 30, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪಳ : ಗಡಿನಾಡಿನ ಖ್ಯಾತ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆ ರಂಗ ಚಿನ್ನಾರಿ ಕಾಸರಗೋಡು (ರಿ), ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ನಡೆಸುವ ಕಾಸರಗೋಡು ಕನ್ನಡ ಹಬ್ಬ ಸಪ್ತಾಹದ ಐದನೇ ದಿನದ ಕಾರ್ಯಕ್ರಮ ಐಲ ಶ್ರೀ ದುರ್ಗಾಪರಮೇಶ್ವರಿ ಕಲಾಭವನದಲ್ಲಿ ತರುಣ ಕಲಾ ವೃಂದ ಐಲ ಸಂಘಟನೆಯ ಪ್ರಾಯೋಜಕತ್ವದಲ್ಲಿ ದಿನಾಂಕ : 28-06-2023ರಂದು ಜರಗಿತು.

    ಐಲ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಕೋಡಿಬೈಲು ನಾರಾಯಣ ಹೆಗ್ಡೆ ದೀಪ ಬೆಳಗಿಸಿ ಹಬ್ಬವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಶ್ರೀಯುತರು “ಕಾಸರಗೋಡಿನಲ್ಲಿ ಕನ್ನಡದ ಅಸ್ಮಿತೆಯನ್ನು ಉಳಿಸುವಲ್ಲಿ ಇಂತಹ ಕನ್ನಡ ಹಬ್ಬಗಳ ಅಗತ್ಯ ಹಿಂದಿನದಕ್ಕಿಂತ ಇಂದು ಅಧಿಕವಾಗಿದೆ. ಕಾಸರಗೋಡಿನ ಕನ್ನಡಿಗರು ತಮ್ಮ ಭಾಷೆ ಸಂಸ್ಕೃತಿಯನ್ನು ಉಳಿಸುವಲ್ಲಿ ನಿತ್ಯ ಸಮರ್ಪಣಾಭಾವದಿಂದ ಕನ್ನಡದ ಕೆಲಸವನ್ನು ಮಾಡಬೇಕಿದೆ. ಕಾಸರಗೋಡು ಚಿನ್ನಾರ ನೇತೃತ್ವದ ರಂಗಚಿನ್ನಾರಿ ಕಳೆದ ಎರಡು ದಶಕಗಳಿಂದ ನಡೆಸುತ್ತಾ ಬಂದಿರುವ ಕನ್ನಡದ ಸೇವೆ ಎಲ್ಲರಿಗೂ ಅನುಕರಣೀಯ” ಎಂದರು.

    ರಂಗ ಚಿನ್ನಾರಿ ನಿರ್ದೇಶಕ ಕಾಸರಗೋಡು ಚಿನ್ನಾ ಪ್ರಾಸ್ತಾವಿಕ ನುಡಿಗಳನ್ನಾಡಿ ಕಾಸರಗೋಡು ಕನ್ನಡ ಹಬ್ಬದ ಧ್ಯೇಯೋದ್ದೇಶವನ್ನು ತಿಳಿಸಿ ರಂಗ ಚಿನ್ನಾರಿಯ ಚಟುವಟಿಕೆಗಳ ಬಗ್ಗೆ ಸಭಿಕರಿಗೆ ಮಾಹಿತಿ ನೀಡಿದರು. ಹರಿಕಥಾ ಕಲಾವಿದೆ ಶ್ರೀಮತಿ ಮಂಜುಳಾ ಜಿ. ರಾವ್ ಇರಾ, ಹಿರಿಯ ಸಿನಿಮಾ ಪತ್ರಕರ್ತ ಗಣೇಶ ಕಾಸರಗೋಡು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    ಮಂಗಲ್ಪಾಡಿ ಗ್ರಾಮ ಪಂಚಾಯತ್‌ ಸದಸ್ಯ ಕಿಶೋರ್ ಬಂದ್ಯೋಡು ಅಧ್ಯಕ್ಷತೆ ವಹಿಸಿದ್ದ ಸಭಾ ಕಾರ್ಯಕ್ರಮದಲ್ಲಿ ರಂಗಚಿನ್ನಾರಿ ನಿರ್ದೇಶಕ ಕಾಸರಗೋಡು ಚಿನ್ನಾ ಹಾಗೂ ಸತ್ಯನಾರಾಯಣ ಕೆ. ಕೋಳಾರು ಸತೀಶ್ಚಂದ್ರ ಭಂಡಾರಿ ಉಪಸ್ಥಿತರಿದ್ದರು. ತರುಣ ಕಲಾ ವೃಂದ ಬಲ ಸಂಸ್ಥೆಯ ಅಧ್ಯಕ್ಷ ಮೋಹನ್ ದಾಸ್ ಐಲ ಸ್ವಾಗತಿಸಿ, ಕಾರ್ಯದರ್ಶಿ ಕಮಲಾಕ್ಷ ಐಲ ನಿರೂಪಿಸಿ, ವಂದನಾರ್ಪಣೆಗೈದರು. ಸಮಾರಂಭದಲ್ಲಿ ಉದಯೋನ್ಮುಕ ಗಾಯಕ ಕಿಶೋರ್ ಪೆರ್ಲ ಅವರನ್ನು ಗಣ್ಯರ ಸಮಕ್ಷಮ ಗೌರವಿಸಲಾಯಿತು.

    ಬಳಿಕ ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನದ ಶಿಲ್ಪಾ ಜೋಶಿಯವರಿಂದ ‘ನನ್ನೊಳಗಿನ ಅವಳು’ ಏಕವ್ಯಕ್ತಿ ನಾಟಕ ಹಾಗೂ ವಿದ್ವಾನ್ ಉಪೇಂದ್ರ ಮಲ್ಯ ಹಾಗೂ ಬಳಗದವರಿಂದ ‘ಭರತನಾಟ್ಯ’ ಕಾರ್ಯಕ್ರಮ ಜರಗಿ ನೆರೆದಿದ್ದ ಜನಸ್ತೋಮವನ್ನು ರಂಜಿಸಿತು.

    Share. Facebook Twitter Pinterest LinkedIn Tumblr WhatsApp Email
    Previous Article‘ಕಾವ್ಯಕನ್ನಿಕಾ’ ಮಹಿಳಾ ಕಾವ್ಯದ ನೃತ್ಯಾಭಿವ್ಯಕ್ತಿ | ಜುಲೈ 2ರಂದು
    Next Article ಆಳ್ವಾಸ್ ಕಾಲೇಜಿನಲ್ಲಿ ‘ಸಂಸ್ಕೃತ ಚಿಂತನಂ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026

    ನೃತ್ಯ ವಿಮರ್ಶೆ | ಕೀರ್ತನಾಳ ಮನಸೆಳೆದ ನೃತ್ಯಾವಳಿ

    January 12, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಪುತ್ತೂರಿನ ವಿವೇಕಾನಂದ ಶಾಲೆಯಲ್ಲಿ ‘ನೃತ್ಯೋತ್ಕ್ರಮಣ’ ರಂಗಪ್ರವೇಶ ಸ್ಮೃತಿ ಸಂಧ್ಯಾ | ಜನವರಿ 11

    January 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.