Subscribe to Updates

    Get the latest creative news from FooBar about art, design and business.

    What's Hot

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗ ಚಿನ್ನಾರಿಯ ‘ಕಾಸರಗೋಡು ಕನ್ನಡ ಹಬ್ಬ’ದ ಪ್ರಯುಕ್ತ ಗಮಕ ವಾಚನ ವ್ಯಾಖ್ಯಾನ ಹಾಗೂ ಹರಿಕಥೆ
    Harikathe

    ರಂಗ ಚಿನ್ನಾರಿಯ ‘ಕಾಸರಗೋಡು ಕನ್ನಡ ಹಬ್ಬ’ದ ಪ್ರಯುಕ್ತ ಗಮಕ ವಾಚನ ವ್ಯಾಖ್ಯಾನ ಹಾಗೂ ಹರಿಕಥೆ

    June 28, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ರಂಗ ಚಿನ್ನಾರಿ ಕಾಸರಗೋಡು(ರಿ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಕಾಸರಗೋಡು ಚಿನ್ನಾ ಅವರ ಸಂಚಾಲಕತ್ವದಲ್ಲಿ , ಕಾಸರಗೋಡು ಕನ್ನಡ ಹಬ್ಬದ ಪ್ರಯುಕ್ತ, ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಸಭಾಂಗಣದಲ್ಲಿ, ಕಾಟುಕುಕ್ಕೆ ಭಜನಾ ಟ್ರಸ್ಟ್ (ರಿ) ಪ್ರಾಯೋಜಕತ್ವದಲ್ಲಿ ತಾರೀಖು 26.06.23 ಶನಿವಾರದಂದು ಸಾಯಂಕಾಲ 5.30ರಿಂದ ಶ್ರದ್ಧಾ ನಾಯರ್ಪಳ್ಳ ಹಾಗೂ ಮೇಧಾ ನಾಯರ್ಪಳ್ಳ ಸಹೋದರಿಯರಿಂದ ‘ಕರ್ಣಾವಸಾನ’ ಕಥಾನಕದ ಗಮಕ ವಾಚನ ವ್ಯಾಖ್ಯಾನ ಹಾಗೂ ಕಲಾರತ್ನ ಶ್ರೀ ಶಂ.ನಾ.ಅಡಿಗ ಇವರಿಂದ ‘ಶ್ರೀ ಸುಬ್ರಹ್ಮಣ್ಯ ಮಹಿಮೆ ಎಂಬ ಹರಿಕಥೆ ಕಾರ್ಯಕ್ರಮ ಜರಗಿತು.
    ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಮಧುಸೂದನ ಪುಣಿಚಿತ್ತಾಯರು ನೆರವೇರಿಸಿದರು. ಅಧ್ಯಕ್ಷತೆಯನ್ನು ಆಡಳಿತ ಮೊಕ್ತೇಸರರಾದ ತಾರಾನಾಥ್ ರೈ ಪಡ್ಡಂಬೈಲು ಗುತ್ತು ವಹಿಸಿದ್ದರು. ಗಡಿಪ್ರದೇಶದಲ್ಲಿ ಕನ್ನಡ ಕುಂಠಿತವಾಗುತ್ತಿರುವ ಇಂತಹ ಸಂದರ್ಭದಲ್ಲಿ ರಂಗ ಚಿನ್ನಾರಿಯು ಮಾಡುತ್ತಿರುವ ಈ ಕನ್ನಡ ಹಬ್ಬದ ಉತ್ಸವವು ನಿಜಕ್ಕೂ ಶ್ಲಾಘನೀಯ. ಇವರ ನಿರಂತರವಾದ ಕನ್ನಡ ಚಟುವಟಿಕೆಗಳು ಇತರರಿಗೆ ಮಾದರಿಯಾಗಬೇಕೆಂದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ವಿದ್ಯಾಸಂಸ್ಥೆಯ ಮೆನೇಜರ್ ಆದ ಶ್ರೀ ಪುರುಷೋತ್ತಮ ಭಟ್ ಅವರು ತಿಳಿಸಿದರು. ರಂಗಕರ್ಮಿ, ರೂವಾರಿ ಶ್ರೀ ಕಾಸರಗೋಡು ಚಿನ್ನಾ ಅವರು ಪ್ರತಿ ವರ್ಷವೂ ಕೂಡ ಕನ್ನಡ ಹಬ್ಬವನ್ನು ಏರ್ಪಡಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದೂ, ಹಳ್ಳಿಗಳಲ್ಲಿ ಕನ್ನಡ ಇನ್ನೂ ಜೀವಂತವಾಗಿದ್ದುಕೊಂಡು ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಕೂಡ ಪ್ರಾಮಾಣಿಕವಾದಂತಹ ಕೆಲಸವನ್ನು ಮಾಡಬೇಕೆಂದು ಅವರು ಕನ್ನಡಿಗರಲ್ಲಿ ವಿನಂತಿ ಮಾಡಿಕೊಂಡರು.. ವೇದಿಕೆಯಲ್ಲಿ ಶ್ರೀ ಸತೀಶ್ಚಂದ್ರ ಭಂಡಾರಿ ಉಪಸ್ಥಿತರಿದ್ದರು. ಭಜನಾ ಟ್ರಸ್ಟಿನ ನಿರ್ದೇಶಕರಾದ ಹರಿದಾಸ ಶ್ರೀ ರಾಮಚಂದ್ರ ಮಣಿಯಾಣಿ ಸ್ವಾಗತಿಸಿ, ಸಂಕೀರ್ತನಾಕಾರರಾದ ಶ್ರೀ ರಾಮಕೃಷ್ಣ ಕಾಟುಕುಕ್ಕೆ ವಂದನಾರ್ಪಣೆಗೈದರು. ಗಾಯಕ ಶ್ರೀ ಕಿಶೋರ್ ಪೆರ್ಲ ಅವರು ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಿರ್ದೇಶಕ, ಗೀತ ರಚನೆಕಾರ ಸಿ.ವಿ.ಶಿವಶಂಕರ್ ನಿಧನ
    Next Article ಮಂಗಳೂರಿನ ಕಲಾಭಿ ಥಿಯೇಟರ್ ನಿಂದ ‘ರಂಗ ಸಂಗೀತ ಕಾರ್ಯಾಗಾರ’ | 01 ಮತ್ತು 02 ಜುಲೈ
    roovari

    Add Comment Cancel Reply


    Related Posts

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿ ಪ್ರಧಾನ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.