Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿಗರನ್ನು ರಂಜಿಸಿದ ರಂಗಾಯಣ ಮೈಸೂರಿನ ‘ನಾಂದಿ’ ನಾಟಕೋತ್ಸವ
    Drama

    ಮಂಗಳೂರಿಗರನ್ನು ರಂಜಿಸಿದ ರಂಗಾಯಣ ಮೈಸೂರಿನ ‘ನಾಂದಿ’ ನಾಟಕೋತ್ಸವ

    May 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅರೆಹೊಳೆ ಪ್ರತಿಷ್ಠಾನವು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ, ಕಲಾಭಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಕಾರದಿಂದ ಆಯೋಜಿಸಿದ್ದ ರಂಗಾಯಣ ಮೈಸೂರಿನ ‘ನಾಂದಿ’ ನಾಟಕೋತ್ಸವವು ದಿನಾಂಕ 24-05-2024 ರಿಂದ 26-05-2024ರ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಆಡಿಟೋರಿಯಂನಲ್ಲಿ ನಡೆಯಿತು.

    ನಾಟಕೋತ್ಸವದ ಎರಡನೇ ದಿನ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೈಸೂರು ರಂಗಾಯಣದ ಪ್ರಿನ್ಸಿಪಾಲ್ ಎಸ್. ರಾಮನಾಥ “ರಂಗಭೂಮಿಯ ಕೋರ್ಸ್ ಗಳ ಮೂಲಕ ನಾಟಕಗಳನ್ನು ಕಟ್ಟುವುದು ಅಥವಾ ಅಭಿನಯಿಸುವುದಕ್ಕಿಂತಲೂ ಮಿಗಿಲಾಗಿ ಅದು ಬದುಕಲು ಕಲಿಸುತ್ತದೆ. ಈ ಹಿನ್ನೆಲೆಯಲ್ಲಿ ಹೆಚ್ಚೆಚ್ಚು ಯುವ ಜನತೆ ರಂಗಶಿಕ್ಷಣದಲ್ಲಿ ತೊಡಗಿಕೊಳ್ಳಬೇಕು.” ಎಂದು ಕರೆ ನೀಡಿದರು. ದಿನಾಂಕ 31-05-2024ರಂದು ಸೇವಾ ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರು ರಂಗಾಸಕ್ತರ ಪರವಾಗಿ ಅಭಿನಂದಿಸಲಾಯಿತು.

    ಅರೆಹೊಳೆ ಪ್ರತಿಷ್ಠಾನದ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್, ಜಾದೂಗಾರ ಕುದ್ರೋಳಿ ಗಣೇಶ್, ಸಂತ ಅಲೋಶಿಯಸ್ ಕಾಲೇಜಿನ ಕ್ರಿಸ್ಟೋಫರ್ ನೀನಾಸಂ, ಡಾ. ದಿನೇಶ್ ನಾಯ್ಕ್, ನಂದಗೋಕುಲ ನಿರ್ದೇಶಕಿ ಶ್ವೇತಾ ಅರೆಹೊಳೆ, ಕಲಾಭಿಯ ಉಜ್ವಲ್ ಯು. ವಿ., ರಂಗಾಯಣದ ಶಿಕ್ಷಕ ಅಮಿತ್ ರೆಡ್ಡಿ ಉಪಸ್ಥಿತರಿದ್ದರು. ನಂತರ ರಂಗಾಯಣ ವಿದ್ಯಾರ್ಥಿಗಳಿಂದ ಕೀರ್ತಿನಾಥ ಕುರ್ತುಕೋಟಿ ರಚನೆಯ ‘ಆ ಮನಿ’ ನಾಟಕ ಪ್ರದರ್ಶನಗೊಂಡಿತು. ನಾಟಕವನ್ನು ಮಂಜುನಾಥ ಬಡಿಗೇರ ನಿರ್ದೇಶಿಸಿದ್ದರು. ನಾಟಕೋತ್ಸವದ ಮೊದಲ ದಿನ ಹೈಸ್ನಾಂ ತೋಂಬ ನಿರ್ದೇಶನದ ‘ವೃಕ್ಷರಾಜ’ ಹಾಗೂ ಕಡೆಯದಿನ ಮೂಲ ವಿಲಿಯಂ ಶೇಕ್ಸ್ ಪಿಯರ್ ಅವರ ‘ವೆನಿಸಿನ ವ್ಯಪಾರ’ ನಿರ್ದೇಶಕ ಅಮಿತ್ ಜೆ. ರೆಡ್ಡಿ ನಿರ್ದೇಶನದಲ್ಲಿ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ
    Next Article ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ
    roovari

    Add Comment Cancel Reply


    Related Posts

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ವಿಶ್ವಾವಸು ನಾಟಕ ಪ್ರಾರಂಭೋತ್ಸವ | ಮೇ 17 ಮತ್ತು 18

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.