Subscribe to Updates

    Get the latest creative news from FooBar about art, design and business.

    What's Hot

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಸುನಾದ ಸಂಗೀತ ಕಲಾಶಾಲೆಯ ಸುನಾದ ಸಂಗೀತೋತ್ಸವ ಸಂಭ್ರಮ

    January 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆ ಹಯಗ್ರೀವದಲ್ಲಿ ‘ರಂಗಾರ್ಪಣ’ ಹಾಗೂ ಮೇಳಕ್ಕೆ ತೆರಳುವ ಉದಯೋನ್ಮುಖ ಕಲಾವಿದರಿಗೆ ಅಭಿನಂದನೆ
    Cultural

    ತೆಕ್ಕಟ್ಟೆ ಹಯಗ್ರೀವದಲ್ಲಿ ‘ರಂಗಾರ್ಪಣ’ ಹಾಗೂ ಮೇಳಕ್ಕೆ ತೆರಳುವ ಉದಯೋನ್ಮುಖ ಕಲಾವಿದರಿಗೆ ಅಭಿನಂದನೆ

    February 2, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ : ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ (ರಿ.)ಕೊಮೆ, ತೆಕ್ಕಟ್ಟೆ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದೊಂದಿಗೆ ಕೇಂದ್ರದಲ್ಲಿ ತರಬೇತಿ ಪಡೆದ ಮಕ್ಕಳ ರಂಗ ಪ್ರವೇಶ ಕಾರ್ಯಕ್ರಮ ‘ರಂಗಾರ್ಪಣ’ ಹಾಗೂ ಮೇಳಕ್ಕೆ ಪಾದಾರ್ಪಣೆ ಮಾಡುತ್ತಿರುವ ಕಲಾವಿದರಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 10-12-2023ರಂದು ನಡೆಯಿತು.

    ಕಾರ್ಯಕ್ರಮದಲ್ಲಿ ಕೇಂದ್ರದಿಂದ ಮೇಳಕ್ಕೆ ಪಾದಾರ್ಪಣೆ ಮಾಡುತ್ತಿರುವ ನೀಲಾವರ ಮೇಳದ ಪ್ರದಾನ ಭಾಗವತ ನವೀನ್ ಕೋಟ, ಅಮೃತೇಶ್ವರಿ ಮೇಳದ ಚಂಡೆವಾದಕ ರಾಹುಲ್ ಕುಂದರ್ ಕೋಡಿ, ಸೌಕೂರು ಮೇಳದ ಚಂಡೆವಾದಕ ವಿಘ್ನೇಶ್ ಆಚಾರ್ ಹಾಗೂ ಮೇಗರವಳ್ಳಿ ಮೇಳದ ಸಂಗೀತಗಾರ ಸತೀಶ್ ಉಳ್ಳೂರು ಇವರನ್ನು ಅಮೃತೇಶ್ವರಿ ಮೇಳದ ಯಜಮಾನರಾದ ಆನಂದ ಸಿ. ಕುಂದರ್ ಅಭಿನಂದಿಸಿದರು.

    ಬಳಿಕ ಮಾತನಾಡಿದ ಅವರು “ಕರಾವಳಿಯಲ್ಲಿ ಸಮಾಜದ ಸಂಸ್ಕೃತಿ ಉಳಿಯುವಲ್ಲಿ ಬಹುದೊಡ್ಡ ಪಾಲು ಕೊಟ್ಟದ್ದು ಯಕ್ಷಗಾನ. ಮಕ್ಕಳಲ್ಲಿ ಸಂಸ್ಕೃತಿಯ ಬೆಳಕು ಚೆಲ್ಲಿ ಸುಂದರ ಸಮಾಜವನ್ನು ರೂಪಿಸುವ ಕಾರ್ಯ ಕರಾವಳಿ ಭಾಗದಲ್ಲಿ ಮುಂಚೂಣಿಯಲ್ಲಿದೆ. ನಿರಂತರ ಬೇರೆ ಬೇರೆ ಕಲಾ ವಿಭಾಗದಲ್ಲಿ ತೊಡಗಿಸಿಕೊಂಡ ಸಂಸ್ಥೆಯ ಸಾಧನೆ ಶ್ಲಾಘನೀಯ. ಪ್ರತೀ ವರ್ಷ ಮೇಳಕ್ಕೆ ಕಲಾವಿದರನ್ನು ಒಳ್ಳೆಯ ಸಾಂಪ್ರದಾಯಿಕ ಲೇಪ ಕೊಟ್ಟು ಕೊಡುಗೆಯಾಗಿ ನೀಡುತ್ತಿರುವುದು ನಿಜಕ್ಕೂ ಸ್ತುತ್ಯರ್ಹ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಾಂಸ್ಕೃತಿಕ ಲೇಪನ ಅತ್ಯಗತ್ಯ.” ಎಂದು ಹೇಳಿದರು.

    ಅಭಿನಂದನೆ ಸ್ವೀಕರಿಸಿದ ನೀಲಾವರ ಮೇಳದ ನವೀನ್ ಕೋಟ ಮಾತನಾಡಿ “ಸಂಸ್ಥೆಯು ಬೆಳೆಯುವಲ್ಲಿ ಮುಖ್ಯ ಕಾರಣ ಗುರುಗಳು. ಸಮರ್ಥ ಗುರುವಿದ್ದರೆ ಕಲಿಯುವ ಆಸಕ್ತಿ ಇದ್ದವರಿಗೆ ಯಕ್ಷಗಾನ ಸುಲಭ ಸಾಧ್ಯವಾಗುತ್ತದೆ. ಈ ಕಾರಣಕ್ಕಾಗಿಯೇ ತೆಕ್ಕಟ್ಟೆ ಕೇಂದ್ರಕ್ಕೆ ಯಕ್ಷಗಾನ ಕಲಿಕೆಗಾಗಿ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹ ಸಂಸ್ಥೆಯ ಶಿಷ್ಯನಾಗಿ ನಾನು ಬೆಳೆದಿದ್ದೇನೆ ಎಂದು ಹೇಳಲು ಹೆಮ್ಮೆಯಾಗುತ್ತದೆ.” ಎಂದರು.

    ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ, ಚಿತ್ರಕಲಾ ಗುರು ಗಿರೀಶ್ ವಕ್ವಾಡಿ, ಬ್ರೇಕ್ ಡಾನ್ಸ್ ಗುರು ಸುಧೀರ್ ತಲ್ಲೂರು, ಕೇಂದ್ರದ ಎಲ್ಲಾ ಯಕ್ಷಗಾನ ಶಿಷ್ಯರು ಉಪಸ್ಥಿತರಿದ್ದರು. ಗುರುಗಳಾದ ಲಂಬೋದರ ಹೆಗಡೆಯವರು ಪ್ರಾಸ್ತಾವಿಕ ಮಾತನ್ನಾಡಿ, ಪ್ರದೀಪ್ ಸಾಮಗ ಕೇಂದ್ರದ ಬಗೆಗಿನ ಅಭಿಪ್ರಾಯವನ್ನು ಮಂಡಿಸಿ, ಸುಮನಾ ನೇರಂಬಳ್ಳಿ ಕಾರ್ಯಕ್ರಮ ನಿರ್ವಹಿಸಿ ಮೇಘನಾ ಧನ್ಯವಾದಗೈದರು. ಬಳಿಕ ಕೇಂದ್ರದ ಎಲ್ಲಾ ವಿಭಾಗದ ಶಿಷ್ಯರಿಂದ ‘ರಂಗಾರ್ಪಣ’ ಪ್ರಸ್ತುತಿಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleತೆಂಕುತಿಟ್ಟಿನ ಮೇರು ಕಲಾವಿದ ಕೆ.ಗೋವಿಂದ ಭಟ್ ಅವರಿಗೆ ‘ಕುಂಬ್ಳೆ ಸುಂದರರಾವ್ ಸಂಸ್ಮರಣಾ ಪ್ರಶಸ್ತಿ’ ಪ್ರದಾನ
    Next Article ರಂಗಸಂಪದದವರಿಂದ ‘ನೀನಾಸಂ ತಿರುಗಾಟ’ದ ನಾಟಕ ಪ್ರದರ್ಶನ
    roovari

    Add Comment Cancel Reply


    Related Posts

    ಇಡ್ಯಾದಲ್ಲಿ ‘ದಶಮಾನ ವರ್ಷ ಸಂಭ್ರಮಾಚರಣೆ’ಯ ಸಮಾರೋಪ ಸಮಾರಂಭ

    January 3, 2026

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    ಕವಿ, ಸಾಹಿತಿ ಯೋಗೀಶ್ ಕಾಂಚನ್ ಬೈಕಂಪಾಡಿ ನಿಧನ

    December 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.