Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ರಾಷ್ಟ್ರಕವಿ ಕುವೆಂಪು ದತ್ತಿ ಉಪನ್ಯಾಸ ಮಾಲಿಕೆ-2026 | ಮಾರ್ಚ್ 11
    Literature

    ರಾಷ್ಟ್ರಕವಿ ಕುವೆಂಪು ದತ್ತಿ ಉಪನ್ಯಾಸ ಮಾಲಿಕೆ-2026 | ಮಾರ್ಚ್ 11

    March 7, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಂಬಯಿ : ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಮಿತ್ರವೃಂದ ಮುಳುಂದ ಇವರ ಮುಂಬೈ ಜಂಟಿ ಆಯೋಜನೆಯಲ್ಲಿ ‘ರಾಷ್ಟ್ರಕವಿ ಕುವೆಂಪು ದತ್ತಿ ಉಪನ್ಯಾಸ ಮಾಲಿಕೆ-2026’ ಕಾರ್ಯಕ್ರಮವು ದಿನಾಂಕ 11 ಮಾರ್ಚ್ 2026ರಂದು ಜೆ.ಪಿ. ನಾಯಕ್ ಭವನ, ಮುಂಬೈ ವಿಶ್ವವಿದ್ಯಾಲಯ, ವಿದ್ಯಾನಗರಿ, ಸಾಂತಾಕ್ರೂಜ್ (ಪೂ.) ಇಲ್ಲಿ ಮಧ್ಯಾಹ್ನ 3-00 ಗಂಟೆಗೆ ನಡೆಯಲಿದೆ.

    ಈ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕರು, ಹಿರಿಯ ಕವಿ, ಸಾಹಿತಿ, ವಿದ್ವಾಂಸರಾದ ಆನಂದ ಝಂಜರವಾಡ ಇವರು ಉಪನ್ಯಾಸಕರಾಗಿ ಆಗಮಿಸಲಿದ್ದು, ‘ಮರಾಠಿ ಬೇಂದ್ರೆ- ಕನ್ನಡ ಬೇಂದ್ರೆ’ ಎಂಬ ವಿಷಯದ ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ. ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಹಿರಿಯ ಪ್ರಾಧ್ಯಾಪಕರೂ ಆದ ಪ್ರೊ. ಜಿ.ಎನ್. ಉಪಾಧ್ಯ ಇವರು ಆಶಯ ನುಡಿಗಳನ್ನಾಡಲಿದ್ದಾರೆ. ಈ ಕಾರ್ಯಕ್ರಮದ ಸಂಯೋಜನೆಯನ್ನು ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪೂರ್ಣಿಮಾ ಸುಧಾಕರ್ ಶೆಟ್ಟಿಯವರು ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕನ್ನಡ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಪ್ರೊ. ಜಿ.ಎನ್. ಉಪಾಧ್ಯ ಹಾಗೂ ಮಿತ್ರವೃಂದ ಮುಳುಂದ ಮುಂಬೈಯ ಸಂಚಾಲಕರಾದ ಎಸ್.ಕೆ. ಸುಂದರ್ ವಿನಂತಿಸಿಕೊಂಡಿದ್ದಾರೆ.

    ಆನಂದ ಝುಂಜರವಾಡ : ಕವಿ ಆನಂದ ಝಂಜರವಾಡ ಅವರು ಬಾಗಲಕೋಟೆಯಲ್ಲಿ 1952 ಜೂನ್ 25ರಂದು ಜನಿಸಿದರು. ಕಾವ್ಯ ರಚನೆ ಹಾಗೂ ವಿಮರ್ಶೆ ಇವರ ಆಸಕ್ತಿಯ ಕ್ಷೇತ್ರ. ಪದಗಳ ಪರಿಧಿಯಲ್ಲಿ, ಖನನೋತ್ಸವ, ಎಲ್ಲಿದ್ದಾನೆ ಮನುಷ್ಯ? ಮುಂತಾದವು ಇವರ ಪ್ರಮುಖ ಕವನ ಸಂಕಲನಗಳು. ‘ಪ್ರೇತಕಾಂಡ’ ಒಂದು ಹಂತದವರೆಗಿನ ಅವರ ಸಮಗ್ರ ಕಾವ್ಯ ಸಂಗ್ರಹವಾದರೂ ಅ ನಂತರವೂ ಇನ್ನೂ ಮೂರು ಸಂಕಲನಗಳು ಪ್ರಕಟವಾಗಿವೆ. ಪ್ರಸನ್ನವೆಂಕಟದಾಸರ ಬದುಕನ್ನು ಕುರಿತು ಇವರು ಬರೆದ ನಾಟಕ ‘ಹಕ್ಕಿಯ ಹೆಗಲೇರಿ’ ಪ್ರಯೋಗಗಳನ್ನು ಕಾಣುತ್ತಲೇ ಇದೆ. ಅವರ ಹಲವು ಚಿಂತನಶೀಲ ಬರಹಗಳ ಸಂಗ್ರಹಗಳೂ ಪ್ರಕಟವಾಗಿವೆ. ಟಿಳಕರ ‘ಗೀತಾ ರಹಸ್ಯ’ದ ಆಲೂರರ, ಕೆರೂರು ವಾಸುದೇವಾಚಾರ್ಯರ ಅನುವಾದದ ಎರಡನೆಯ ಆವೃತ್ತಿಯನ್ನು ಇವರು ಸಂಪಾದಿಸಿಕೊಟ್ಟಿದ್ದಾರೆ. 37 ವರ್ಷ ನ್ಯಾಯಾಂಗದಲ್ಲಿ ಕರಣಿಕರಾಗಿ ದುಡಿದು, ಈಗ ನಿವೃತ್ತ ಬದುಕನ್ನು ಅವರ ಪ್ರೀತಿಯ ಕವಿ ಬೇಂದ್ರೆ ಅವರ ನೆಲೆಯಾದ ಧಾರವಾಡದಲ್ಲಿ ನಡೆಸಿದ್ದಾರೆ. ಪು.ತಿ.ನ. ಪ್ರಶಸ್ತಿ, ಉಗ್ರಾಣ ಪ್ರಶಸ್ತಿ, ಗಳಗನಾಥ ಪ್ರಶಸ್ತಿ ಇವು ಇವರಿಗೆ ಸಂದ ಹಲವು ಪ್ರಶಸ್ತಿಗಳಲ್ಲಿ ಕೆಲವು. ಇವರ ಖನನೋತ್ಸವ ಕಾವ್ಯಕ್ಕೆ ಕವಿ ಮುದ್ದಣ ಸ್ಮಾರಕ ಬಹುಮಾನ, ವರ್ಧಮಾನ ಪ್ರಶಸ್ತಿ ಬಂದಿವೆ. ‘ಎಲ್ಲಿದ್ದಾನೆ ಮನುಷ್ಯ’ ಕೃತಿಗೆ ದಿನಕರ ದೇಸಾಯಿ ಸ್ಮಾರಕ ಬಹುಮಾನ ಲಭಿಸಿದೆ.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleವಿವೇಕಾನಂದ ಕಾಲೇಜಿನಲ್ಲಿ ‘ಪತ್ರಕರ್ತ ಮೇಷ್ಟ್ರು’ ಕಾರ್ಯಾಗಾರ ಕಾರ್ಯಕ್ರಮ
    Next Article ಬೈಂದೂರು ಶ್ರೀ ಶಾರದಾ ವೇದಿಕೆಯಲ್ಲಿ ‘ರಂಗಶ್ರೀ-ರಂಗಹಬ್ಬ’ದ ಎರಡನೇ ದಿನದ ಕಾರ್ಯಕ್ರಮ
    roovari

    Add Comment Cancel Reply


    Related Posts

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.