Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾರ್ಕಳದಲ್ಲಿ ಕನಕದಾಸ ಬಗ್ಗೆ ‘ರಾಷ್ಟ್ರೀಯ ವಿಚಾರ ಸಂಕಿರಣ’
    Literature

    ಕಾರ್ಕಳದಲ್ಲಿ ಕನಕದಾಸ ಬಗ್ಗೆ ‘ರಾಷ್ಟ್ರೀಯ ವಿಚಾರ ಸಂಕಿರಣ’

    March 20, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಉಡುಪಿಯ ಕನಕದಾಸ ಅಧ್ಯಯನ ಸಂಶೋಧನಾ ಪೀಠ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲದ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಹಾಗೂ ಶ್ರೀ ಭುವನೇಂದ್ರ ಕಾಲೇಜು ಆಶ್ರಯದಲ್ಲಿ ‘ರಾಷ್ಟ್ರೀಯ ಚಿಂತನೆ – ಕನಕ ವೈಚಾರಿಕತೆಯ ಸೊಬಗು’ ಎಂಬ ವಿಚಾರದ ಬಗ್ಗೆ ದಿನಾಂಕ 16-03-2024ರಂದು ರಾಷ್ಟ್ರೀಯ ವಿಚಾರ ಸಂಕಿರಣ ಜರುಗಿತು.

    ಈ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ, ದಿಕ್ಸೂಚಿ ಮಾತುಗಳನ್ನಾಡಿದ ನಾಡಿನ ಹಿರಿಯ ವಿದ್ವಾಂಸರೂ, ವಿಶ್ರಾಂತ ಪ್ರಾಚಾರ್ಯರೂ ಆದ ಡಾ. ಪಾದೇಕಲ್ಲು ವಿಷ್ಣು ಭಟ್ “ಭಾರತದಲ್ಲಿ ದಾಸಪರಂಪರೆ, ವಿದ್ವತ್ ಪರಂಪರೆ, ಪ್ರಾಜ್ಞರ ಪರಂಪರೆ ಹೀಗೆ ಹಲವಾರು ವಿಶೇಷ ಪರಂಪರೆಗಳಿವೆ. ಅವುಗಳಲ್ಲಿ ಯಾವುದೂ ಶ್ರೇಷ್ಠ ಮತ್ತು ಕನಿಷ್ಠವೆಂಬುದಿಲ್ಲ. ದಾಸಪರಂಪರೆಯಲ್ಲಿ ಕನಕದಾಸರು ಮುಖ್ಯರಾಗುತ್ತಾರೆ. ಕ್ರಾಂತದರ್ಶಿತ್ವ ಇರುವ ವ್ಯಕ್ತಿತ್ವ ಅವರದು. ಅವರು ಕವಿಗಳೂ ಹೌದು, ಪಂಡಿತರೂ ಹೌದು. ಪುರಾಣದ ಸಂಪೂರ್ಣ ನೆಲೆಗಟ್ಟು ಅವರಲ್ಲಿ ಇದ್ದುದರಿಂದ ಕಾವ್ಯಗಳನ್ನು ಕಟ್ಟುವಲ್ಲಿ ಅವರು ಯಶಸ್ವಿಯಾದರು. ದೋಷಜ್ಞರಾದುದರಿಂದ ಆತ್ಮವಿಮರ್ಶೆಯ ಜೊತೆಗೆ ಸಮಾಜದ ಎಲ್ಲಾ ಆಗುಹೋಗುಗಳನ್ನು ಪರಿಶೀಲಿಸಿ ಸರಿತಪ್ಪುಗಳನ್ನು ಜನರಿಗೆ ಮನನ ಮಾಡಿಸುವ ಕಾಯಕವನ್ನು ಅವರ ಎಲ್ಲಾ ಸಾಹಿತ್ಯದ ಮೂಲಕ ಮಾಡಿದರು. ದೇಸೀ ಮತ್ತು ಮಾರ್ಗವೆಂಬುದು ಎರಡು ದಾರಿಗಳಷ್ಟೇ. ತಲುಪುವ ಗುರಿಯೊಂದೇ ಎಂಬುದನ್ನು ಕನಕರ ದರ್ಶನದಿಂದ ಗಮನಿಸಬಹುದು. ಆ ವ್ಯಕ್ತಿತ್ವವೇ ನಮ್ಮ ನೆಲದ ಗುಣವಾಗಿ ಮೂಡಿಬಂದಿರುವಂತಾದ್ದು” ಎಂದು ಹೇಳಿದರು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಿ.ಎ. ಶಿವಾನಂದ ಪೈಯವರು ಮಾತನಾಡಿ “ಕನಕದಾಸರು ಇಹಪರದ ಸಮನ್ವಯಕ್ಕೆ ಒತ್ತುಕೊಟ್ಟರು. ಕನಕದಾಸರ ಅಧ್ಯಯನ ಅಂದಿನ ಸಮಾಜದ ಅಧ್ಯಯನ ಮಾತ್ರವಲ್ಲ, ಕನಕದಾಸರು ಇಡೀ ವಿಶ್ವಕ್ಕೆ ಸೇರಿದ ಉದಾತ್ತ ದಾಸವರೇಣ್ಯರು. ಅವರ ಚಿಂತನೆ ಇಂದಿಗೂ ಪ್ರಸ್ತುತ” ಎಂದರು.

    ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿಗಳಾದ ಡಾ. ಬಿ. ಜಗದೀಶ್ ಶೆಟ್ಟಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ್ ಎ. ಕೋಟ್ಯಾನ್ ಸ್ವಾಗತಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರೂ, ಕಾರ್ಯಕ್ರಮ ಸಂಯೋಜಕರೂ ಅದ ಡಾ. ಅರುಣಕುಮಾರ್ ಎಸ್.ಆರ್. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ವನಿತಾ ವಂದಿಸಿ, ಉಪನ್ಯಾಸಕಿ ಶ್ರೀಮತಿ ಸುಲೋಚನಾ ಪಚ್ಚಿನಡ್ಕ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಗಿನ ಸಾಹಿತ್ಯ ಲೋಕದಲ್ಲೊಂದು ವಿನೂತನ ಪ್ರಯೋಗ ‘ಗಟ್ಟಿಮೇಳದೊಂದಿಗೆ ಸಾಹಿತ್ಯ ಸಂಭ್ರಮ’
    Next Article ಕೆ.ಎನ್. ಪುಟ್ಟಲಿಂಗಯ್ಯ ಗೌಡ ಅವರಿಗೆ ಕ.ಸಾ.ಪ.ದ ‘ನಾಗಡಿಕೆರೆ-ಕಿಟ್ಟಪ್ಪ ಗೌಡ ರುಕ್ಮಿಣಿ ದತ್ತಿ’ ಪ್ರಶಸ್ತಿ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.