Subscribe to Updates

    Get the latest creative news from FooBar about art, design and business.

    What's Hot

    ಕನಕ ಕಾವ್ಯ ಗಮಕ ಸ್ಪರ್ಧೆಗೆ ಅರ್ಜಿ ಆಹ್ವಾನ

    July 10, 2026

    ಬೋಂದೆಲ್ ಕಲಾಗ್ರಾಮದಲ್ಲಿ ‘ಮಾರಿಕಾಡು’ ನಾಟಕ ಪ್ರದರ್ಶನ | ಜುಲೈ 13

    July 10, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನ ಕಲಾಗ್ರಾಮದಲ್ಲಿ ಕನಕದಾಸರ ಸಮಗ್ರ ಅನುವಾದ ಕೃತಿಗಳ ಬಿಡುಗಡೆ
    Book Release

    ಬೆಂಗಳೂರಿನ ಕಲಾಗ್ರಾಮದಲ್ಲಿ ಕನಕದಾಸರ ಸಮಗ್ರ ಅನುವಾದ ಕೃತಿಗಳ ಬಿಡುಗಡೆ

    May 19, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ದಿನಾಂಕ 15 ಮೇ 2026ರಂದು ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ದೇಶದ 14 ಭಾಷೆಗಳಲ್ಲಿ ಅನುವಾದ ಮಾಡಿ ಪ್ರಕಟಿಸಿರುವ ಕನಕದಾಸರ ಸಮಗ್ರ ಅನುವಾದ ಕೃತಿಗಳ ಬಿಡುಗಡೆ ಕಾರ್ಯಕ್ರಮವು ಬೆಂಗಳೂರಿನ ಮಲ್ಲತಹಳ್ಳಿ ಸಾಂಸ್ಕೃತಿಕ ಸಮುಚ್ಚಯ ಕಲಾಗ್ರಾಮದಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಎಲ್ಲಾ ಕೃತಿಗಳನ್ನು ಬಿಡುಗಡೆಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರು ಮಾತನಾಡಿ “ಸಂತ ಕವಿ ಕನಕದಾಸರು ತಮ್ಮ ಕಾವ್ಯ ಕೃತಿಗಳ ಮೂಲಕ ಸಮಾಜದ ಅಸಮಾನತೆ, ವರ್ಗ ವೈಷಮ್ಯಗಳನ್ನು ದೂರ ಮಾಡಿ ಮಾನವೀಯ ಮೌಲ್ಯಗಳನ್ನು ಎತ್ತಿ ತೋರಿದ ಒಬ್ಬ ದಾರ್ಶನಿಕ ಕವಿ. ಅವರು ಸಮ ಸಮಾಜದ ಬಗ್ಗೆ ಇಟ್ಟ ಅಪಾರವಾದ ನಂಬಿಕೆ ಮತ್ತು ಅದಕ್ಕಾಗಿ ತನ್ನ ಭಕ್ತಿಯನ್ನು ಸಾಮಾಜೀಕರಣ ಮಾಡಿದ ವಿಚಾರ ಬಹಳ ಮಹತ್ವದ್ದು. ಕನ್ನಡಿಗರಿಗೆ ಲಭಿಸಿದ ಕನಕರ ಕಾವ್ಯ ಸಂಪತ್ತು ಇತರ ಹಲವು ಭಾಷೆಗಳಲ್ಲಿ ತರ್ಜುಮೆಗೊಳ್ಳುವ ಮೂಲಕ ಅವರ ಸಮಾನತೆಯ ಸಂದೇಶ ವಿಶ್ವವ್ಯಾಪಿಯಾಗಿ ಮಾನವ ಜನಾಂಗವನ್ನು ಪರಸ್ಪರ ಬೆಸೆಯುವಂತಾಗಲಿ” ಎಂದು ಹಾರೈಸಿದರು.

    ಇದೇ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಿದ ಕನಕ ಶಿಲ್ಪ ವನವನ್ನು ಅನಾವರಣ ಮಾಡಿದ ಬಳಿಕ ಸಭಾಂಗಣಕ್ಕೆ ಬಂದ ಮುಖ್ಯಮಂತ್ರಿಗಳು 14 ಭಾಷೆಗಳಲ್ಲಿ ತಲಾ ಮೂರು ಸಂಪುಟಗಳಾಗಿ ಪ್ರಕಟಗೊಂಡ ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು. ಶಾಸಕ ಮುನಿರತ್ನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವ ಶಿವರಾಜ್ ತಂಗಡಗಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಸಂಸ್ಕೃತಿ ಚಿಂತಕರಾದ ಬಂಜಗೆರೆ ಜಯಪ್ರಕಾಶ್ ಕೃತಿಗಳ ಕುರಿತು ಮಾತನಾಡಿದರು.

    ಕರಾವಳಿ ಕರ್ನಾಟಕದ ಪ್ರಮುಖ ಭಾಷೆಗಳಾದ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳಲ್ಲೂ ಕನಕದಾಸರ ಸಮಗ್ರ ಕೃತಿಗಳು ಅನುವಾದವಾಗಿದ್ದು ತುಳು ಆವೃತ್ತಿಯ ಸಂಪಾದಕ ಪ್ರೊ. ಎ.ವಿ. ನಾವಡ, ಅನುವಾಕರಾದ ಡಾ. ವಸಂತ ಕುಮಾರ್ ಪೆರ್ಲ, ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ, ಪ್ರೊ. ಟಿ.ಎ.ಎನ್. ಖಂಡಿಗೆ, ಮುದ್ದು ಮೂಡುಬೆಳ್ಳೆ, ಆತ್ರಾಡಿ ಅಮೃತ ಶೆಟ್ಟಿ ಅಲ್ಲದೆ ಇತರ ಭಾಷಾಂತರಕಾರರು, ಅಕಾಡೆಮಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರು, ಹಿರಿಯ ಸಾಹಿತಿ – ವಿದ್ವಾಂಸರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ. ಚಿಕ್ಕಣ್ಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಕಾರ್ಯದರ್ಶಿ ಕರಿಯಪ್ಪ ಎನ್. ಸ್ವಾಗತಿಸಿ, ಸಮನ್ವಯಾಧಿಕಾರಿ ಭಾರತಿ ಹೆಗಡೆ ವಂದಿಸಿದರು.

    baikady Book release Literature roovari Tulu
    Share. Facebook Twitter Pinterest LinkedIn Tumblr WhatsApp Email
    Previous Articleಪ್ರೇಕ್ಷಕರ ಮನ ಸೆಳೆದ ‘ವಿಶ್ವ ಕೊಂಕಣಿ ಸಮಾರೋಹ’-2026
    Next Article ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಕಾರ್ಯಕ್ರಮ
    roovari

    Add Comment Cancel Reply


    Related Posts

    ಕನಕ ಕಾವ್ಯ ಗಮಕ ಸ್ಪರ್ಧೆಗೆ ಅರ್ಜಿ ಆಹ್ವಾನ

    July 10, 2026

    ಬೋಂದೆಲ್ ಕಲಾಗ್ರಾಮದಲ್ಲಿ ‘ಮಾರಿಕಾಡು’ ನಾಟಕ ಪ್ರದರ್ಶನ | ಜುಲೈ 13

    July 10, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026

    ವಿಶೇಷ ಲೇಖನ | ಹವ್ಯಾಸಿ ರಂಗಭೂಮಿಯ ಅಪ್ರತಿಮ ಪ್ರತಿಭಾವಂತ ಕಲಾವಿದ ಆರ್.ಎಸ್. ರಾಜಾರಾಮ್

    July 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.