Subscribe to Updates

    Get the latest creative news from FooBar about art, design and business.

    What's Hot

    ಕಥೆ – ‘ತೊರೆದು ಹೋಗುವ ಮುನ್ನ’

    June 10, 2025

    ಕಲಾರಸಿಕರ ರಂಜಿಸಿದ ‘ಯುವ ನೃತ್ಯೋತ್ಸವ-2025’

    June 10, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಶ್ವತ್ಥಾಮ’ | ಜೂನ್ 12

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ಗೋವಿಂದದಾಸ ಕಾಲೇಜಿನಲ್ಲಿ ರೀ ಲೈಸನ್ಸಿಂಗ್, ಡಿಜಿಟಲೈಸೇಷನ್ ಮತ್ತು ಅಪ್‍ಲೋಡಿಂಗ್ ಆನ್ ವಿಕೀಮೀಡಿಯಾ ಕಾರ್ಯಕ್ರಮ
    Literature

    ಮಂಗಳೂರು ಗೋವಿಂದದಾಸ ಕಾಲೇಜಿನಲ್ಲಿ ರೀ ಲೈಸನ್ಸಿಂಗ್, ಡಿಜಿಟಲೈಸೇಷನ್ ಮತ್ತು ಅಪ್‍ಲೋಡಿಂಗ್ ಆನ್ ವಿಕೀಮೀಡಿಯಾ ಕಾರ್ಯಕ್ರಮ

    September 20, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಸುರತ್ಕಲ್ ಗೋವಿಂದ ದಾಸ ಕಾಲೇಜು ಗ್ರಂಥಾಲಯ ವಿಭಾಗ, ಭಾಷಾ ವಿಭಾಗ, ಆಂತರಿಕ ಗುಣಮಟ್ಟ ಖಾತರಿ ಕೋಶ, ಕರಾವಳಿ ವಿಕೀಮೀಡಿಯಾ ಯೂಸರ್ ಗ್ರೂಪ್, ಸೆಂಟರ್ ಫಾರ್ ಇಂಟರ್ನೆಟ್ ಆ್ಯಂಡ್ ಸೊಸೈಟಿ ಬೆಂಗಳೂರು ಇದರ ಸಹಯೋಗದಲ್ಲಿ ಗೋವಿಂದ ದಾಸ ಕಾಲೇಜಿನಲ್ಲಿ ಎರಡು ದಿನಗಳ ರೀ ಲೈಸನ್ಸಿಂಗ್, ಡಿಜಿಟಲೈಸೇಷನ್ ಮತ್ತು ಅಪ್‍ಲೋಡಿಂಗ್ ಆನ್ ವಿಕಿ ಮೀಡಿಯ ಕಾರ್ಯಾಗಾರ ದಿನಾಂಕ 16-09-2023ರಂದು ಉದ್ಘಾಟನೆಗೊಂಡಿತು.
    ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಲೇಖಕ ಡಾ.ಎಂ.ಪ್ರಭಾಕರ ಜೋಷಿ “ಓದಿನ ವಿಸ್ತರಣೆಗೆ ಆಧುನಿಕ ತಂತ್ರಜ್ಞಾನದ ಮಾಧ್ಯಮ ಬಳಕೆ ಅನಿವಾರ್ಯವಾಗಿದ್ದು ವಿಕೀಪೀಡಿಯಾ ಈ ನಿಟ್ಟಿನಲ್ಲಿ ಉತ್ತಮಕಾರ್ಯ ನಿರ್ವಹಿಸುತ್ತಿದೆ.” ಎಂದು ನುಡಿದರು. ಈ ಕಾರ್ಯಗಾರದಲ್ಲಿ ಎಂ.ಪ್ರಭಾಕರ ಜೋಷಿಯವರ ಕೇದಗೆ ಪುಸ್ತಕವನ್ನು ಡಿಜಿಟಲೈಸೇಷನ್ ಮಾಡಿ ವಿಕಿ ಕಾಮನ್ಸ್‍ಗೇ ಅಪ್‍ಲೋಡ್ ಮಾಡಲಾಯಿತು. ಮುಂದಿನ ದಿನಗಳಲ್ಲಿ ಅವರ ಹದಿನೆಂಟು ಪುಸ್ತಕಗಳನ್ನು ಡಿಜಿಟಲೀಕರಣ ಮಾಡಿ ವಿಕಿ ಕಾಮನ್ಸ್‍ಗೆ ಅಪ್‍ಲೋಡ್ ಮಾಡಲು ಡಾ.ಎಂ ಪ್ರಭಾಕರ ಜೋಷಿ ಅವರು ಅನುಮತಿ ನೀಡಿದರು.
    ಪುಸ್ತಕಗಳ ಡಿಜಿಟಲೈಸೇಷನ್ ಮಾಡುವ ತರಬೇತಿಯನ್ನು ಸುಬೋಧ್ ಕುಲಕರ್ಣಿ ಹಾಗೂ ಸಂಜೀವ್ ಬೊಂಡೆಯವರು ನೀಡಿದರು. ಸೆಂಟರ್ ಫಾರ್ ಇಂಟರ್ನೆಟ್ ಆ್ಯಂಡ್ ಸೊಸೈಟಿ ಬೆಂಗಳೂರಿನ ಸೀನಿಯರ್ ಪ್ರೋಗ್ರಾಮ್ ಆಫೀಸರ್ ಸುಬೋಧ್ ಕುಲಕರ್ಣಿ ಮಾತನಾಡಿ “ಗ್ರಂಥಗಳ ಡಿಜಿಟಲೀಕರಣದ ಮಹತ್ವವನ್ನು ತಿಳಿಸಿ ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಈ ಕಾರ್ಯಕ್ರಮ ನಡೆಯುತ್ತಿದೆ.” ಎಂದರು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಕೃಷ್ಣಮೂರ್ತಿ ಅವರು ವಹಿಸಿದ್ದರು. ಉಪ ಪ್ರಾಶುಂಪಾಲ ಪ್ರೊ.ರಮೇಶ್ ಭಟ್ ಎಸ್.ಜಿ ಹಾಗೂ ನಿವೃತ್ತ ಗ್ರಂಥ ಪಾಲಕ ಬಾಲಕೃಷ್ಣ.ಕೆ ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಗ್ರಂಥಪಾಲಕಿ ಡಾ.ಸುಜಾತ.ಬಿ ಸ್ವಾಗತಿಸಿ, ಕರಾವಳಿ ವಿಕಿ ಮೀಡಿಯ ಯೂಸರ್ ಗ್ರೂಪಿನ ಕೋಶಾಧಿಕಾರಿ ಡಾ.ಕಿಶೋರ್ ಕುಮಾರ್ ರೈ ಶೇಣಿ ಪ್ರಸ್ತಾವಿಕ ಭಾಷಣ ಮಾಡಿದರು. ದೀಪ ಹಾಗೂ ರಮೀತಾ ನಿರೂಪಿಸಿ, ಶರ್ಮಿತ ವಂದಿಸಿದರು.
    ಕರಾವಳಿ ವಿಕಿ ಮೀಡಿಯ ಯೂಸರ್ ಗ್ರೂಪಿನ ಸದಸ್ಯೆ ಕವಿತಾ ಗಣೇಶ್, ಸದಸ್ಯ ಬೆನೆಟ್ ಅಮ್ಮನ್ನ, ಬೆಸೆಂಟ್ ಸಂಧ್ಯಾ ಕಾಲೇಜಿನ ಗ್ರಂಥಪಾಲಕ ಡಾ.ವಾಸಪ್ಪ ಗೌಡ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಲಾ ವಿಮರ್ಶೆ | ಬೆಂಗಳೂರು ಆರ್ಟ್ಮಾ ಆರ್ಟ್ ಗ್ಯಾಲರಿಯಲ್ಲಿ ಆರ್ಟ್ ಎಕ್ಸಟ್ರಾವಗಝಾ
    Next Article ಬೆಂಗಳೂರು ಚಿತ್ಪಾವನ ಮಹಿಳಾ ಯಕ್ಷಗಾನ ಮಂಡಳಿಯಿಂದ ‘ಕೃಷ್ಣ ಲೀಲೆ – ಕಂಸ ವಧೆ’ | ಒಕ್ಟೋಬರ್ 02ರಂದು
    roovari

    Add Comment Cancel Reply


    Related Posts

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಬೆಂಗಳೂರಿನಲ್ಲಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ | ಜೂನ್ 14

    June 10, 2025

    ಬದಿಯಡ್ಕದಲ್ಲಿ  ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮದಿನಾಚರಣೆ

    June 10, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ

    June 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.